Home / ಲೇಖನ / ಇತರೆ / ಬದುಕೆಂದರೆ ಇಷ್ಟೆಯೇ?

ಬದುಕೆಂದರೆ ಇಷ್ಟೆಯೇ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ಅವನು ಇಷ್ಟು ದಿನ ಬದುಕಿದ್ದೇ ಸುಳ್ಳೆಂಬಂತೆ ಸತ್ತು ಮಲಗಿದ್ದಾನೆ. ಕೊನೆಯದಾಗಿ ಅವನ ನಿರ್ಜೀವ ದೇಹವನ್ನು ನೋಡಲೆಂದೇ ಈ ಅವನ ಗೆಳೆಯ ಬಂದಿದ್ದಾನೆ. ಎರಡು ದೇಹ ಒಂದು ಜೀವವೆಂಬಂತಿದ್ದ ಈ ಗೆಳೆಯರಲ್ಲಿ ಒಬ್ಬ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದೇ ನೆವವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೋಡಲು ಬಂದವನೂ ನಪಾಸಾಗಿದ್ದಾನೆ. ಸತ್ತ ಗೆಳೆಯನನ್ನು ನೋಡುತ್ತಾ ಇವನು ಯೋಚಿಸುತ್ತಿದ್ದಾನೆ. ಈಗ ಬದುಕಿನಲ್ಲಿ ಎಲ್ಲಾ ಮುಗಿದುಹೋಯಿತೆಂದು ಆತ್ಮಹತ್ಯೆ ಮಾಡಿಕೊಳ್ಳಬೇಕೇ?

ಒಮ್ಮೆ ಬದುಕಿನಲ್ಲಿ ಸೋತರೆ ಅದೇ ಕಟ್ಟಕಡೆಯ ಸೋಲೆ? ಮುಂದೆ ಗೆಲುವೇ ಇಲ್ಲವೇ ? ಅಥವಾ ಇದನ್ನು ಹೊರತು ಪಡಿಸಿ ಬೇರೆ ಬದುಕೇ ಇಲ್ಲವೇ ? ಬದುಕೆಂದರೆ ಇಷ್ಟೆಯೇ? ಒಂದು ಯಕಶ್ಚಿತ್ ಪರೀಕ್ಷೆಯಲ್ಲಿ ಫೇಲಾದೊಡನೆ ಬದುಕೇ ಮುಗಿದಂತೆಯೇ? ಬದುಕಿನಲ್ಲಿ ಒಮ್ಮೆ ಒಂದು ಬಾಗಿಲು ಮುಚ್ಚಿತೆಂದಾದರೆ ಅದೆಂದೂ ತೆರೆಯುವುದೇ ಇಲ್ಲವೇ ? ಅಥವಾ ಬದುಕಿಗೆ ಅದೊಂದೇ ಬಾಗಿಲೆ ? ಕಣ್ಣು ತೆರೆದು ನೋಡಿದರೆ ಸುತ್ತಲೂ ಅದೆಷ್ಟು ಅವಕಾಶಗಳಿವೆ. ವಿಭಿನ್ನ ಸಾಧ್ಯತೆಗಳಿವೆ. ಯಾಕಿಂಥಾ ಮೌಢ್ಯ ನನ್ನ ಗೆಳೆಯನನ್ನು ಆವರಿಸಿತು?

ಕಳೆದ ತಿಂಗಳಷ್ಟೇ ಮನೆಯವರು ಬೈಕ್ ಕೊಡಿಸಲಿಲ್ಲವೆಂದು ಸಹಪಾಠಿಯೊಬ್ಬ ವಿಷ ಕುಡಿದು ಸತ್ತದ್ದು ನೆನಪಾಯ್ತು. ನೀನು ಬದುಕಿದ್ದರೆ ಇಂದಲ್ಲ ನಾಳೆ ಬೈಕ್ ಕೊಳ್ಳಬಹುದಿತ್ತು. ನಿಜ ಬದುಕು ಎಷ್ಟೊಂದು ದೊಡ್ಡದಿದೆ. ಸಾಧಿಸುವ ಛಲವಿದ್ದರೆ ಇಂದಲ್ಲ ನಾಳೆ ಗುರಿ ಸೇರಬಹುದು. ಅದು ಬಿಟ್ಟು ಸಣ್ಣ ಪುಟ್ಟ ಸೋಲಿಗೆ ಹೆದರಿ ಹೇಡಿಯಂತೆ ಸತ್ತರೇನು ಬಂತು?

ಕರುಳು ಬಿರಿಯುವಂತೆ ರೋಧಿಸುತ್ತಿರುವ ಗೆಳೆಯನ ತಂದೆ, ತಾಯಿ, ಅಕ್ಕತಮ್ಮ, ಬಂಧು ಬಳಗದವರ ಮಧ್ಯೆ ಇರುವ ಗೆಳೆಯನ ಕಳೇಬರಹವನ್ನೊಮ್ಮೆ ಇವನು ಮರುಕ, ತಿರಸ್ಕಾರದಿಂದ ನೋಡಿದ. ಗೆಳೆಯ ನಿನಗಾಗಿ ಎಷ್ಟೊಂದು ಪ್ರೀತಿ ತುಂಬಿಕೊಂಡಿದ್ದ ಜೀವಗಳನ್ನು ಘಾಸಿಗೊಳಿಸಿದ್ದೀಯೇ, ನೀನು ಘೋರ ತಪ್ಪು ಮಾಡಿಬಿಟ್ಟೆಯೋ. ಬದುಕೆಂದರೆ ಇಷ್ಟೇ ಎಂದು ಅದಕ್ಕೊಂದು ಪೂರ್ಣ ವಿರಾಮ ಹಾಕಿ ಬಿಟ್ಟೆಯಲ್ಲಾ. ಅದಕ್ಕೆ ಎಷ್ಟೊಂದು ಮಗ್ಗುಲುಗಳಿತ್ತು. ನೀನೇಕೆ ಕಣ್ತೆರೆದು ನೋಡಲಿಲ್ಲ? ಇಷ್ಟಕ್ಕೆ ಅಮೂಲ್ಯ ಬದುಕನ್ನು ವಿವೇಚನೆ ಇಲ್ಲದ ಹುಂಬನಂತೆ ಕೊನೆಗೊಳಿಸಿಬಿಟ್ಟೆಯಲ್ಲಾ. ಬದುಕು ನಿನ್ನನ್ನೆಂದೂ ಕ್ಷಮಿಸುವುದಿಲ್ಲ. ನಿನ್ನನ್ನು ನನ್ನ ಗೆಳೆಯನೆಂದು ಹೇಳಿಕೊಳ್ಳಲೇ ನನಗೆ ನಾಚಿಕೆಯಾಗುತ್ತಿದೆ. ಬದುಕಿನಲ್ಲಿ ಈ ಕ್ಷಣಕ್ಕೆ ಸೋತಿದ್ದೇನೆ. ಗೆಲುವಿನ ಮೆಟ್ಟಿಲಾಗಿಸಿಕೊಂಡು ಸಾಧಿಸಿ ತೋರಿಸುತ್ತೇನೆ. ನಿನ್ನಂಥಹ ಹೇಡಿಗಳಿಗೆ ಇದೋ ನನ್ನ ಧಿಕ್ಕಾರ ಎಂದು ಮನದಲ್ಲೇ ಉದ್ಗರಿಸಿಕೊಂಡವನೇ ಸರಸರನೆ ಹೊರ ನಡೆದುಬಿಟ್ಟ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...