Home / ಕವನ / ಕವಿತೆ / ಉಸಿರಿನ ಹಡಗು

ಉಸಿರಿನ ಹಡಗು

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರೆದಿವೆ ನಿಲ್ಲದ ದಾರಿ.-
ಎಲ್ಲಿಂದೆಲ್ಲಿಗೆ ಇದರ ಸವಾರಿ!

ಕಾಮನ ಕೋರುವ ಕಣ್ಣು ಇದಕ್ಕೆ,
ಬಯಕೆಯ ಬೀರುವ ಬಾವುಟ-ರೆಕ್ಕೆ,
ಕ್ಷುಧಾಗ್ನಿ ಹೊರಳುವ ತುಂಬದ ಹೊಟ್ಟೆ,
ಹಾಹಾಕಾರದ ಹೆಬ್ದುಲಿ-ರಟ್ಟೆ.

ಮುಡಿಯಲಿ ಗರ್ವದ ಹೊಗೆಯ ಕಿರೀಟ,
ಮುಖದಲಿ ತಂಗಿದೆ ಮಕ್ಕಳ ನೋಟ,
ಸುತ್ತಾ ಉತ್ತೆಸೆದಲೆಗಳ ಕಾಟ;
ಮರುಭೂಮಿಯಲಿದು ತೆಂಗಿನ ತೋಟ.

ಮಗುವಿದೆ ತಳ್ಳಿದ ಕಾಲಿಗೆ ಬಿದ್ದು;
ತಂದೆಯ ಉತ್ತರ: ಮತ್ತೂ ಗುದ್ದು.
ಈ ಗತಿಯೇ ಹೆತ್ತವಳೇ ಇದ್ದೂ?-
ಕರುಣೆಯ ಕರುಳಲಿ ಹುಟ್ಟಿದ ಸದ್ದು.

ಇನಿಯನ ಎದೆಯಲಿ ಕೆನ್ನೆಯನಿಟ್ಟು
ಕಣ್ತೆರೆವಿನಿಯಳ ಚೆಲುವನು ತೊಟ್ಟು
ತುಂಬುತ್ತಲೆಯಿರೆ ಹಡಗಿನ ರೂಪ,
ಕಡಲಿನ ಕಣ್ಣಿಗೆ ಏಕೋ ಕೋಪ!

ಉಸಿರಿನ ಹಡಗಿದು, ಏನಿದರರಕೆ?
ಉಸುರುವಂತಿಲ್ಲ.-(ಉಳಿಯುವ ಬಯಕೆ?)
ಬರಿ ಕನಸಿದು,-ನಗೆ ನೋವಿನ ಬೆರಕೆ;-
ಅದೊ! ನೀರಿನ ಬಿರುಗಾಳಿಯ ಗೊರಕೆ.

ಹಡಗಿನ ಪಾಡಿಗೆ ಕಡಲೇ ನಕ್ಕು
ನೀರಿನ ಕೆನ್ನೆಗೆ ಬಂದಿದೆ ಸುಕ್ಕು.
ತೇಲುವ ಬಾಳಿಗೆ ಯಾರೋ ದಿಕ್ಕು?
ಬೇಕು ಅದೃಷ್ಟವೆ ತೇಲುವುದಕ್ಕೂ!

ತೇಲುವುದೆಲ್ಲಾ ತೇಲುತ್ತಿರಲಿ!
ಮುಳುಗುವುದೋ? ಸರಿ, ಮುಳುಗುತ್ತಿರಲಿ!
ರವಿಯೂ ಮುಳುಗಲಿ! ಶಶಿಯೂ ಮುಳುಗಲಿ!
ಗ್ರಹತಾರೆಗಳೂ ಸುಮ್ಮನೆ ಮುಳುಗಲಿ!-

ದಿಗ್ದಿಕ್ತಟಗಳ ಒಳಗೂ ಹೊರಗೂ
ನೀಲ ನೀಳ ನಾಲಗೆಗಳನೆಸೆದು,
ಜೀವದಾಸೆಗಳನೆಲ್ಲಾ ತೊಡೆದು,
ಎಲ್ಲಾ ಮುಗಿದರೆ, ತಾನೇ ಉಳಿದು,

ತುಂಬಿ ತುಳುಕುತಿದೆ ಕಾಲ ಸಮುದ್ರ;
ಬದುಕಬಲ್ಲವನು ಒಬ್ಬನೆ, ರುದ್ರ.
ತೇಲಬಹುದು ಈ ತುಂಬಿದ ಹಡಗು.
ನಾಳೆ ಇವರ ಮನೆ ಆಳದ ಕೊರಗು.-

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರದಿದೆ ನಿಲ್ಲದ ದಾರಿ.
ಎಲ್ಲಿಂದೆಲ್ಲಿಗೆ ಇದರ ಸವಾರಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...