Home / ಕವನ / ಕವಿತೆ / ಉಸಿರಿನ ಹಡಗು

ಉಸಿರಿನ ಹಡಗು

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರೆದಿವೆ ನಿಲ್ಲದ ದಾರಿ.-
ಎಲ್ಲಿಂದೆಲ್ಲಿಗೆ ಇದರ ಸವಾರಿ!

ಕಾಮನ ಕೋರುವ ಕಣ್ಣು ಇದಕ್ಕೆ,
ಬಯಕೆಯ ಬೀರುವ ಬಾವುಟ-ರೆಕ್ಕೆ,
ಕ್ಷುಧಾಗ್ನಿ ಹೊರಳುವ ತುಂಬದ ಹೊಟ್ಟೆ,
ಹಾಹಾಕಾರದ ಹೆಬ್ದುಲಿ-ರಟ್ಟೆ.

ಮುಡಿಯಲಿ ಗರ್ವದ ಹೊಗೆಯ ಕಿರೀಟ,
ಮುಖದಲಿ ತಂಗಿದೆ ಮಕ್ಕಳ ನೋಟ,
ಸುತ್ತಾ ಉತ್ತೆಸೆದಲೆಗಳ ಕಾಟ;
ಮರುಭೂಮಿಯಲಿದು ತೆಂಗಿನ ತೋಟ.

ಮಗುವಿದೆ ತಳ್ಳಿದ ಕಾಲಿಗೆ ಬಿದ್ದು;
ತಂದೆಯ ಉತ್ತರ: ಮತ್ತೂ ಗುದ್ದು.
ಈ ಗತಿಯೇ ಹೆತ್ತವಳೇ ಇದ್ದೂ?-
ಕರುಣೆಯ ಕರುಳಲಿ ಹುಟ್ಟಿದ ಸದ್ದು.

ಇನಿಯನ ಎದೆಯಲಿ ಕೆನ್ನೆಯನಿಟ್ಟು
ಕಣ್ತೆರೆವಿನಿಯಳ ಚೆಲುವನು ತೊಟ್ಟು
ತುಂಬುತ್ತಲೆಯಿರೆ ಹಡಗಿನ ರೂಪ,
ಕಡಲಿನ ಕಣ್ಣಿಗೆ ಏಕೋ ಕೋಪ!

ಉಸಿರಿನ ಹಡಗಿದು, ಏನಿದರರಕೆ?
ಉಸುರುವಂತಿಲ್ಲ.-(ಉಳಿಯುವ ಬಯಕೆ?)
ಬರಿ ಕನಸಿದು,-ನಗೆ ನೋವಿನ ಬೆರಕೆ;-
ಅದೊ! ನೀರಿನ ಬಿರುಗಾಳಿಯ ಗೊರಕೆ.

ಹಡಗಿನ ಪಾಡಿಗೆ ಕಡಲೇ ನಕ್ಕು
ನೀರಿನ ಕೆನ್ನೆಗೆ ಬಂದಿದೆ ಸುಕ್ಕು.
ತೇಲುವ ಬಾಳಿಗೆ ಯಾರೋ ದಿಕ್ಕು?
ಬೇಕು ಅದೃಷ್ಟವೆ ತೇಲುವುದಕ್ಕೂ!

ತೇಲುವುದೆಲ್ಲಾ ತೇಲುತ್ತಿರಲಿ!
ಮುಳುಗುವುದೋ? ಸರಿ, ಮುಳುಗುತ್ತಿರಲಿ!
ರವಿಯೂ ಮುಳುಗಲಿ! ಶಶಿಯೂ ಮುಳುಗಲಿ!
ಗ್ರಹತಾರೆಗಳೂ ಸುಮ್ಮನೆ ಮುಳುಗಲಿ!-

ದಿಗ್ದಿಕ್ತಟಗಳ ಒಳಗೂ ಹೊರಗೂ
ನೀಲ ನೀಳ ನಾಲಗೆಗಳನೆಸೆದು,
ಜೀವದಾಸೆಗಳನೆಲ್ಲಾ ತೊಡೆದು,
ಎಲ್ಲಾ ಮುಗಿದರೆ, ತಾನೇ ಉಳಿದು,

ತುಂಬಿ ತುಳುಕುತಿದೆ ಕಾಲ ಸಮುದ್ರ;
ಬದುಕಬಲ್ಲವನು ಒಬ್ಬನೆ, ರುದ್ರ.
ತೇಲಬಹುದು ಈ ತುಂಬಿದ ಹಡಗು.
ನಾಳೆ ಇವರ ಮನೆ ಆಳದ ಕೊರಗು.-

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರದಿದೆ ನಿಲ್ಲದ ದಾರಿ.
ಎಲ್ಲಿಂದೆಲ್ಲಿಗೆ ಇದರ ಸವಾರಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...