Home / ಕಥೆ / ಜನಪದ / ಸತ್ತೇನು ಗುಬ್ದಿ ?

ಸತ್ತೇನು ಗುಬ್ದಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ.

ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ ಬಂದ ಕವಣೆಗಲ್ಲಿನ ರಭಸಕ್ಕಂಜಿಯೇ ಹಕ್ಕಿಗಳೆಲ್ಲ ಹಾರಿಹೋದವು, ಆದರೆ ಒಂದು ಗುಬ್ದಿ ಮಾತ್ರ ಹಾರಿ ಹೋಗದೆ, ಒಂದು ತೆನೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಹೊಲದವನ ಬಾಯ ಬೆದರಿಕೆಗಾಗಲಿ, ಬಾರಕೋಲಿನ ಸಪ್ಪಳಕ್ಕಾಗಲಿ ಅದು ಮಿಸುಕಲಿಲ್ಲ; ಕವಣೆಗಲ್ಲಿಗೂ ಹಣಿಯಲಿಲ್ಲ. ಅಟ್ಟದಿಂದಿಳಿದು ಕಾವಲಿಗನು ಆ ಗುಬ್ದಿ ಕುಳಿತಲ್ಲಿಗೆ ಮೆಲ್ಲನೆ ಹೋಗಿ ಅದನ್ನು ಗಪ್ಪನೆ ಹಿಡಿದು ತಂದು, ಅದರ ಕಾಲಿಗೆ ದಾರಕಟ್ಟಿ ಅಟ್ಟದ ಕಾಲಿಗೆ
ಬಿಗಿದನು. ಆದರೂ ಅದು ಪಕ್ಕ ಬಿಚ್ಚಿ ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು ಕಾವಲಿಗನು ಕೇಳಿದನು – “ಸತ್ತೇಯೇನು ಗುಬ್ಬಿ?”
ಆ ಗುಬ್ದಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚಗೀ ಕಾಲಿನಲ್ಲಿ
ಜೋಕಾಲಿ ಆಡಹತ್ತಿದ್ದೇನೆ.
ನಾನೇಕೆ ಸಾಯುವೆನು ?”

ಹೊಲದವನು ಅದನ್ನು ಬಿಚ್ಚಿ ಕೊಂಡೊಯ್ದು ಹರಿಯುವ ಹಳ್ಳದಲ್ಲಿ ಒಗೆದನು, ಆಗಲೂ ಅದು ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು – “ಸತ್ತೆಯಾ ಗುಬ್ಬಿ” ಎಂದು ಕೇಳಿದನು. ಗುಬ್ಬಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?”

ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
“ಸತ್ತೆಯೇನು ಗುಬ್ಬಿ ?”
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಹೊಲದವನು ಗುಬ್ದಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. “ಸತ್ತೆಯಾ ಗುಬ್ದಿ” ಎಂದು ಕೇಳಿದನು. ಗುಬ್ದಿ ಹೇಳಿತು –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು –
“ಸತ್ತೆಯಾ ಗುಬ್ಬಿ ?”

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಬ್ಬಿ ಕಾಣಿಸಿ ಕೊಂಡಿತು. ಮತ್ತೆ ಫಡಫಡಿಸುತ್ತ –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊಂಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು ?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...