Home / ಕಥೆ / ಜನಪದ / ಸತ್ತೇನು ಗುಬ್ದಿ ?

ಸತ್ತೇನು ಗುಬ್ದಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ.

ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ ಬಂದ ಕವಣೆಗಲ್ಲಿನ ರಭಸಕ್ಕಂಜಿಯೇ ಹಕ್ಕಿಗಳೆಲ್ಲ ಹಾರಿಹೋದವು, ಆದರೆ ಒಂದು ಗುಬ್ದಿ ಮಾತ್ರ ಹಾರಿ ಹೋಗದೆ, ಒಂದು ತೆನೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಹೊಲದವನ ಬಾಯ ಬೆದರಿಕೆಗಾಗಲಿ, ಬಾರಕೋಲಿನ ಸಪ್ಪಳಕ್ಕಾಗಲಿ ಅದು ಮಿಸುಕಲಿಲ್ಲ; ಕವಣೆಗಲ್ಲಿಗೂ ಹಣಿಯಲಿಲ್ಲ. ಅಟ್ಟದಿಂದಿಳಿದು ಕಾವಲಿಗನು ಆ ಗುಬ್ದಿ ಕುಳಿತಲ್ಲಿಗೆ ಮೆಲ್ಲನೆ ಹೋಗಿ ಅದನ್ನು ಗಪ್ಪನೆ ಹಿಡಿದು ತಂದು, ಅದರ ಕಾಲಿಗೆ ದಾರಕಟ್ಟಿ ಅಟ್ಟದ ಕಾಲಿಗೆ
ಬಿಗಿದನು. ಆದರೂ ಅದು ಪಕ್ಕ ಬಿಚ್ಚಿ ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು ಕಾವಲಿಗನು ಕೇಳಿದನು – “ಸತ್ತೇಯೇನು ಗುಬ್ಬಿ?”
ಆ ಗುಬ್ದಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚಗೀ ಕಾಲಿನಲ್ಲಿ
ಜೋಕಾಲಿ ಆಡಹತ್ತಿದ್ದೇನೆ.
ನಾನೇಕೆ ಸಾಯುವೆನು ?”

ಹೊಲದವನು ಅದನ್ನು ಬಿಚ್ಚಿ ಕೊಂಡೊಯ್ದು ಹರಿಯುವ ಹಳ್ಳದಲ್ಲಿ ಒಗೆದನು, ಆಗಲೂ ಅದು ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು – “ಸತ್ತೆಯಾ ಗುಬ್ಬಿ” ಎಂದು ಕೇಳಿದನು. ಗುಬ್ಬಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?”

ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
“ಸತ್ತೆಯೇನು ಗುಬ್ಬಿ ?”
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಹೊಲದವನು ಗುಬ್ದಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. “ಸತ್ತೆಯಾ ಗುಬ್ದಿ” ಎಂದು ಕೇಳಿದನು. ಗುಬ್ದಿ ಹೇಳಿತು –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು –
“ಸತ್ತೆಯಾ ಗುಬ್ಬಿ ?”

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಬ್ಬಿ ಕಾಣಿಸಿ ಕೊಂಡಿತು. ಮತ್ತೆ ಫಡಫಡಿಸುತ್ತ –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊಂಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು ?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...