Home / ಲೇಖನ / ಇತರೆ / ಸಾಧನೆಯ ಹಾದಿಯಲಿ

ಸಾಧನೆಯ ಹಾದಿಯಲಿ

Mettiluಪ್ರಿಯ ಸಖಿ,

ಗುರುಗಳ ಬಳಿ ಶಿಷ್ಯನೊಬ್ಬ ಬಂದು ತನ್ನ ನೋವನ್ನು ತೋಡಿಕೊಳ್ಳುತ್ತಾ ತನ್ನ ಹೊಸ ಕೆಲಸವನ್ನು ನೋಡಿ ಜನರೆಲ್ಲರೂ ಆಡಿಕೊಂಡು ನಗ್ತಾ ಇದ್ದಾರೆ. ಇದರಿಂದ ತನಗೆ ತುಂಬಾ ಬೇಸರವಾಗಿದೆ. ಹಾಗಾಗಿ ಇನ್ನು ಮುಂದೆ ಈ ಕೆಲಸ ಮುಂದುವರೆಸುವುದಿಲ್ಲ ಎಂದು ಹೇಳಿದ.

ಇದನ್ನು ಕೇಳಿದ ಗುರುಗಳು ನೋಡು ಮಗು, ಯಾವುದೇ ಹೊಸ ಕೆಲಸದಲ್ಲಿ ಗುರಿಯನ್ನು ಸೇರಬೇಕಾದರೆ ಆ ಸಾಧನೆಯ ಹಾದಿಯಲ್ಲಿ ನಾಲ್ಕು ಹಂತಗಳನ್ನು ದಾಟಿ ಬರಬೇಕಾಗುತ್ತದೆ. ಮೊದಲನೆ ಹಂತದಲ್ಲಿ ಜನ ನಿನ್ನ ಹೊಸ ಕೆಲಸವನ್ನು ನೋಡಿ ನಗುತ್ತಾರೆ. ಮುಂದುವರೆದರೆ, ಎರಡನೆಯ ಹಂತದಲ್ಲಿ ವ್ಯಂಗ್ಯ, ಕೊಂಕು ಮಾತುಗಳಿಂದ ನಿನ್ನ ಚುಚ್ಚುತ್ತಾರೆ. ಇದಕ್ಕೂ ನೀನು ಹೆದರದೇ ಮುಂದುವರೆದರೆ ಮೂರನೆಯ ಹಂತದಲ್ಲಿ ಜನ ಇವನೇನೋ ಮಾಡ್ತಾ ಇದ್ದಾನಲ್ಲ ತಾಳು ನೋಡೋಣ ಅಂತ ಮೌನವಾಗಿ ನಿಂತು ನೋಡ್ತಾರೆ. ಕೊನೆಯ ನಿನ್ನ ಗೆಲುವಿನ ಹಂತ. ಇಲ್ಲಿ ಜನ ನೀನು ಮಾಡಿರೋ ಕೆಲಸ ಸತ್ವಪೂರ್ಣವಾದುದೋ ಅಲ್ಲವೋ ಪರೀಕ್ಷಿಸಿ, ಇದು ನಿನ್ನ ನಿಜವಾದ ಸಾಧನೆ ಅಂತ ನಿನ್ನನ್ನು ಮೆಚ್ಚಿಕೊಳ್ಳುತ್ತಾರೆ. ಈ ನಾಲ್ಕೂ ಹಂತಗಳು ಒಬ್ಬ ಸಾಧಕನಿಗೆ ಸತ್ವ ಪರೀಕ್ಷೆ ಇದ್ದ ಹಾಗೆ. ಕೆಲವರು ಮೊದಲ ಹಂತದಲ್ಲೇ ಜನರ ನಗುವನ್ನು ತಿರಸ್ಕಾರವನ್ನು ಕಂಡು ಹೆದರಿ ಕೆಲಸವನ್ನು ಅರ್ಧದಲ್ಲೇ ಬಿಟ್ಟು ಓಡಿ ಹೋಗ್ತಾರೆ.  ಉಳಿದ ಕೆಲವರು ಮೂರನೇ ಹಂತಕ್ಕೆ ಬಂದು ಜನರ ಮೌನವನ್ನು ಅರ್ಥ ಮಾಡಿಕೊಳ್ಳಲಾಗದೇ ಗೊಂದಲಕ್ಕೊಳಗಾಗಿ ಹೆದರಿ ಕೆಲಸವನ್ನು ಅರ್ಧದಲ್ಲಿ ನಿಲ್ಲಿಸ್ತಾರೆ. ಇನ್ನುಳಿದ ಕೆಲವೇ ಕೆಲವರು ಮಾತ್ರ ಈ ಮೂರೂ ಹಂತಗಳನ್ನು ಧೈರ್ಯದಿಂದ ದಾಟಿ ನಾಲ್ಕನೆಯ ಹಂತವನ್ನು ತಲುಪಿ ತಮ್ಮ ಕೆಲಸವನ್ನು ಸಮಾಜದ ಪರಿಕ್ಷೆಗೆ ಒಳಪಡಿಸುತ್ತಾರೆ ಮತ್ತು ಅದೇ ಜನರಿಂದಲೇ ಭೇಷ್‌ ಎನಿಸಿಕೊಳ್ತಾರೆ.

ಆದ್ದರಿಂದಲೇ ನಿಜವಾದ ಸಾಧಕನಿಗೆ ತಾಳ್ಮೆ ಅತಿ ಮುಖ್ಯ. ತಾನು ಯಾವ ಹಂತದಲ್ಲೂ ಅಧೈರ್ಯದಿಂದ ಓಡಿ ಹೋಗದಂತಾ ಮನಸ್ಥೈರ್ಯ, ಸ೦ಯಮವನ್ನು ಸಾಧಕ ಮೊದಲು ರೂಢಿಸಿಕೊಳ್ಳಬೇಕು. ಜನರ ಮಾತುಗಳಿಗೆ ಕಿವಿಯನ್ನು ಕಿವುಡಾಗಿಸಿಕೊಳ್ಳಬೇಕು. ಅರ್ಜುನನ ಕಣ್ಣಿಗೆ ಪಕ್ಷಿಯ ಕಣ್ಣು ಮಾತ್ರ ಕ೦ಡಂತೆ, ಸಾಧಕನಿಗೆ ತನ್ನ ಗುರಿ ಮಾತ್ರ ಮುಖ್ಯವಾದುದು. ಹಾಗೇ ಆ ಗುರಿಯನ್ನು ತಲುಪಲು ಇಲ್ಲಿ ಯಾವುದೂ ಸುಲಭ ಮಾರ್ಗಗಳಿಲ್ಲ. ಅದನ್ನು ಕಠಿಣ ಪರಿಶ್ರಮದಿಂದಷ್ಟೇ ಸಾಧಿಸಬೇಕು, ಎ೦ಬುದನ್ನು ಸಾಧಕ ಎ೦ದೂ ಮರೆಯಬಾರದು ಎಂದರು.

ಇವನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯವಾಯ್ತು. ಇನ್ನು ತನ್ನ ಸಾಧನೆಯ ಹಾದಿಯಲ್ಲಿ ಯಾವುದೇ ಅಡ್ಡಿ, ಆತಂಕಗಳು ಬಂದರೂ ತಾನು ಹೆದರುವುದಿಲ್ಲವೆ೦ದು ಆತ ಪ್ರತಿಜ್ಞೆ ಮಾಡಿದ. ಮತ್ತು ತನ್ನ ಸಾಧನೆಯಲ್ಲಿ ಗೆದ್ದ.

ಸಖಿ, ಕಥೆ ಇಷ್ಪವಾಯ್ತೋ ಇಲ್ಲವೋ ತಿಳಿಸುತ್ತೀಯಲ್ಲವೇ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...