Home / ಲೇಖನ / ಇತರೆ / ಹುಟ್ಟು ಸಾವಿನ ಮಧ್ಯೆ

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ,
ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ, ಕನಸುಗಳೂ ಹುಟ್ಟಿಕೊಳ್ಳುತ್ತವೆ.

ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ. ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೇ ಸಾಯುತ್ತವೆ. ಅಥವಾ ಆದು ಬೇರಾರದೋ ಆಸೆ ಕನಸು ಮುಂದುವರೆಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ, ಕನಸುಗಳಿಂದಲೇ ನಾವು ಅವನನ್ನು ಅಳೆಯುತ್ತೇವೆ. ಅವನು ಆಗದೇ ಉಳಿದ ವ್ಯಕ್ತಿತ್ವದಿಂದ ಅವನನ್ನು ನಾವು ಅಳೆಯುವುದಿಲ್ಲ.

ಈ ವ್ಯಕ್ತಿತ್ವವನ್ನು ಅಳೆಯುವ ಕೆಲಸವೂ ಆಗುವುದು ವ್ಯಕ್ತಿಯ ಸಾವಿನಲ್ಲಿ.  ಅವನ ಗುಣ, ಸ್ವಭಾವ, ಆಸ್ತಿ, ಅಂತಸ್ತು, ಸಾಧಿಸಿದ ಕೆಲಸ, ಸಮಾಜದ ಸೇವೆ, ಬುದ್ಧಿವಂತಿಕೆ, ಒಳ್ಳೆಯತನ ಇತ್ಯಾದಿಗಳಂದ ವ್ಯಕ್ತಿಯನ್ನು ತೂಗುತ್ತೇವೆ. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ.

ಸತ್ತ ವ್ಯಕ್ತಿ ಸಮಾಜಕ್ಕೆ ಉಪಯೋಗಿಯಾಗಿದ್ದರೆ ಜನ ಅವನು ಪರಿಪೂರ್ಣ ಬದುಕನ್ನು ಬಾಳಿ ಸತ್ತರೂ ಇವನು ಇಷ್ಟು ಬೇಗ ಸಾಯಬಾರದಿತ್ತು. ಇಂತಹಾ ಸಹೃದಯ ಅಪರೂಪ. ಇವನಂತವನಿಂದ ಸಮಾಜಕ್ಕೆ ಇನ್ನೂ ಬಹಳಷ್ಟು ಆಗಬೇಕಾದುದಿತ್ತು. ಇವನ ಸಾವಿನಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಒಳ್ಳೆಯವರನ್ನು ಸಾವೂ ಬೇಗ ಕೊಂಡೊಯ್ಯುತ್ತದೆ…. ಎಂದೆಲ್ಲಾ ವಿಷಾದಿಸುತ್ತಾರೆ.

ಅದೇ ಸಮಾಜಕ್ಕೆ ಉಪಯೋಗವಿಲ್ಲದ, ಸಮಾಜ ಕಂಟಕ ಸತ್ತಾಗ ಜನ ಸಧ್ಯ ಸತ್ತನಲ್ಲಾ, ಎಂದು ಹೇಳಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಸಖಿ, ಸಾವನ್ನು ಕುರಿತ ಕಥೆಯೊಂದು ನೆನಪಾಗುತ್ತದೆ. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು, ಎಂದು. ಅದಕ್ಕೆ ದೇವರು ಇದು ನನ್ನಿಂದ ಆಗದ ಕೆಲಸ. ಇದು ನಿನ್ನಿಂದಲೇ ಸಾಧ್ಯ. ನಿನ್ನ ಸಾವಿಗೆ ಜನ ದುಃಖಿಸುವಂತಾಗಲು, ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ.

ಸಖಿ, ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಆಡಗಿದೆಯಲ್ಲವೇ?  ಹುಟ್ಟು, ಸಾವು ಯಾವುದೋ ಶಕ್ತಿಯ ಕೈಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡಕನಾಗುವುದು ವ್ಯಕ್ತಿಯ ಕೈಯಲ್ಲೇ ಇದೆಯಲ್ಲವೇ? ಸಾವಿನಾಚೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವಿಲ್ಲಿ ಒಳ್ಳೆಯವರಾಗಿ, ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗ, ಮೋಕ್ಷ ಸಿಗುತ್ತದೆ ಎಂಬ ಮಾತಿಗೂ ಯಾವುದೇ ಆಧಾರವಿಲ್ಲ. ಆದರೆ ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ ಹಾಗೇ ಜನರ ಕಣ್ಣೀರನ್ನು ಸಂಪಾದಿಸುವುದೇ ನಿಜವಾದ ಧನ್ಯತೆ. ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...