Home / ಲೇಖನ / ಇತರೆ / ಹುಟ್ಟು ಸಾವಿನ ಮಧ್ಯೆ

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ,
ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ, ಕನಸುಗಳೂ ಹುಟ್ಟಿಕೊಳ್ಳುತ್ತವೆ.

ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ. ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೇ ಸಾಯುತ್ತವೆ. ಅಥವಾ ಆದು ಬೇರಾರದೋ ಆಸೆ ಕನಸು ಮುಂದುವರೆಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ, ಕನಸುಗಳಿಂದಲೇ ನಾವು ಅವನನ್ನು ಅಳೆಯುತ್ತೇವೆ. ಅವನು ಆಗದೇ ಉಳಿದ ವ್ಯಕ್ತಿತ್ವದಿಂದ ಅವನನ್ನು ನಾವು ಅಳೆಯುವುದಿಲ್ಲ.

ಈ ವ್ಯಕ್ತಿತ್ವವನ್ನು ಅಳೆಯುವ ಕೆಲಸವೂ ಆಗುವುದು ವ್ಯಕ್ತಿಯ ಸಾವಿನಲ್ಲಿ.  ಅವನ ಗುಣ, ಸ್ವಭಾವ, ಆಸ್ತಿ, ಅಂತಸ್ತು, ಸಾಧಿಸಿದ ಕೆಲಸ, ಸಮಾಜದ ಸೇವೆ, ಬುದ್ಧಿವಂತಿಕೆ, ಒಳ್ಳೆಯತನ ಇತ್ಯಾದಿಗಳಂದ ವ್ಯಕ್ತಿಯನ್ನು ತೂಗುತ್ತೇವೆ. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ.

ಸತ್ತ ವ್ಯಕ್ತಿ ಸಮಾಜಕ್ಕೆ ಉಪಯೋಗಿಯಾಗಿದ್ದರೆ ಜನ ಅವನು ಪರಿಪೂರ್ಣ ಬದುಕನ್ನು ಬಾಳಿ ಸತ್ತರೂ ಇವನು ಇಷ್ಟು ಬೇಗ ಸಾಯಬಾರದಿತ್ತು. ಇಂತಹಾ ಸಹೃದಯ ಅಪರೂಪ. ಇವನಂತವನಿಂದ ಸಮಾಜಕ್ಕೆ ಇನ್ನೂ ಬಹಳಷ್ಟು ಆಗಬೇಕಾದುದಿತ್ತು. ಇವನ ಸಾವಿನಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಒಳ್ಳೆಯವರನ್ನು ಸಾವೂ ಬೇಗ ಕೊಂಡೊಯ್ಯುತ್ತದೆ…. ಎಂದೆಲ್ಲಾ ವಿಷಾದಿಸುತ್ತಾರೆ.

ಅದೇ ಸಮಾಜಕ್ಕೆ ಉಪಯೋಗವಿಲ್ಲದ, ಸಮಾಜ ಕಂಟಕ ಸತ್ತಾಗ ಜನ ಸಧ್ಯ ಸತ್ತನಲ್ಲಾ, ಎಂದು ಹೇಳಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಸಖಿ, ಸಾವನ್ನು ಕುರಿತ ಕಥೆಯೊಂದು ನೆನಪಾಗುತ್ತದೆ. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು, ಎಂದು. ಅದಕ್ಕೆ ದೇವರು ಇದು ನನ್ನಿಂದ ಆಗದ ಕೆಲಸ. ಇದು ನಿನ್ನಿಂದಲೇ ಸಾಧ್ಯ. ನಿನ್ನ ಸಾವಿಗೆ ಜನ ದುಃಖಿಸುವಂತಾಗಲು, ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ.

ಸಖಿ, ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಆಡಗಿದೆಯಲ್ಲವೇ?  ಹುಟ್ಟು, ಸಾವು ಯಾವುದೋ ಶಕ್ತಿಯ ಕೈಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡಕನಾಗುವುದು ವ್ಯಕ್ತಿಯ ಕೈಯಲ್ಲೇ ಇದೆಯಲ್ಲವೇ? ಸಾವಿನಾಚೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವಿಲ್ಲಿ ಒಳ್ಳೆಯವರಾಗಿ, ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗ, ಮೋಕ್ಷ ಸಿಗುತ್ತದೆ ಎಂಬ ಮಾತಿಗೂ ಯಾವುದೇ ಆಧಾರವಿಲ್ಲ. ಆದರೆ ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ ಹಾಗೇ ಜನರ ಕಣ್ಣೀರನ್ನು ಸಂಪಾದಿಸುವುದೇ ನಿಜವಾದ ಧನ್ಯತೆ. ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...