Home / ಲೇಖನ / ಇತರೆ / ಹುಟ್ಟು ಸಾವಿನ ಮಧ್ಯೆ

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ,
ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ, ಕನಸುಗಳೂ ಹುಟ್ಟಿಕೊಳ್ಳುತ್ತವೆ.

ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ. ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೇ ಸಾಯುತ್ತವೆ. ಅಥವಾ ಆದು ಬೇರಾರದೋ ಆಸೆ ಕನಸು ಮುಂದುವರೆಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ, ಕನಸುಗಳಿಂದಲೇ ನಾವು ಅವನನ್ನು ಅಳೆಯುತ್ತೇವೆ. ಅವನು ಆಗದೇ ಉಳಿದ ವ್ಯಕ್ತಿತ್ವದಿಂದ ಅವನನ್ನು ನಾವು ಅಳೆಯುವುದಿಲ್ಲ.

ಈ ವ್ಯಕ್ತಿತ್ವವನ್ನು ಅಳೆಯುವ ಕೆಲಸವೂ ಆಗುವುದು ವ್ಯಕ್ತಿಯ ಸಾವಿನಲ್ಲಿ.  ಅವನ ಗುಣ, ಸ್ವಭಾವ, ಆಸ್ತಿ, ಅಂತಸ್ತು, ಸಾಧಿಸಿದ ಕೆಲಸ, ಸಮಾಜದ ಸೇವೆ, ಬುದ್ಧಿವಂತಿಕೆ, ಒಳ್ಳೆಯತನ ಇತ್ಯಾದಿಗಳಂದ ವ್ಯಕ್ತಿಯನ್ನು ತೂಗುತ್ತೇವೆ. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ.

ಸತ್ತ ವ್ಯಕ್ತಿ ಸಮಾಜಕ್ಕೆ ಉಪಯೋಗಿಯಾಗಿದ್ದರೆ ಜನ ಅವನು ಪರಿಪೂರ್ಣ ಬದುಕನ್ನು ಬಾಳಿ ಸತ್ತರೂ ಇವನು ಇಷ್ಟು ಬೇಗ ಸಾಯಬಾರದಿತ್ತು. ಇಂತಹಾ ಸಹೃದಯ ಅಪರೂಪ. ಇವನಂತವನಿಂದ ಸಮಾಜಕ್ಕೆ ಇನ್ನೂ ಬಹಳಷ್ಟು ಆಗಬೇಕಾದುದಿತ್ತು. ಇವನ ಸಾವಿನಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಒಳ್ಳೆಯವರನ್ನು ಸಾವೂ ಬೇಗ ಕೊಂಡೊಯ್ಯುತ್ತದೆ…. ಎಂದೆಲ್ಲಾ ವಿಷಾದಿಸುತ್ತಾರೆ.

ಅದೇ ಸಮಾಜಕ್ಕೆ ಉಪಯೋಗವಿಲ್ಲದ, ಸಮಾಜ ಕಂಟಕ ಸತ್ತಾಗ ಜನ ಸಧ್ಯ ಸತ್ತನಲ್ಲಾ, ಎಂದು ಹೇಳಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಸಖಿ, ಸಾವನ್ನು ಕುರಿತ ಕಥೆಯೊಂದು ನೆನಪಾಗುತ್ತದೆ. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು, ಎಂದು. ಅದಕ್ಕೆ ದೇವರು ಇದು ನನ್ನಿಂದ ಆಗದ ಕೆಲಸ. ಇದು ನಿನ್ನಿಂದಲೇ ಸಾಧ್ಯ. ನಿನ್ನ ಸಾವಿಗೆ ಜನ ದುಃಖಿಸುವಂತಾಗಲು, ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ.

ಸಖಿ, ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಆಡಗಿದೆಯಲ್ಲವೇ?  ಹುಟ್ಟು, ಸಾವು ಯಾವುದೋ ಶಕ್ತಿಯ ಕೈಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡಕನಾಗುವುದು ವ್ಯಕ್ತಿಯ ಕೈಯಲ್ಲೇ ಇದೆಯಲ್ಲವೇ? ಸಾವಿನಾಚೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವಿಲ್ಲಿ ಒಳ್ಳೆಯವರಾಗಿ, ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗ, ಮೋಕ್ಷ ಸಿಗುತ್ತದೆ ಎಂಬ ಮಾತಿಗೂ ಯಾವುದೇ ಆಧಾರವಿಲ್ಲ. ಆದರೆ ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ ಹಾಗೇ ಜನರ ಕಣ್ಣೀರನ್ನು ಸಂಪಾದಿಸುವುದೇ ನಿಜವಾದ ಧನ್ಯತೆ. ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...