Home / ಲೇಖನ / ಇತರೆ / ಮೂಲಧಾತು ಒಂದೇ

ಮೂಲಧಾತು ಒಂದೇ

ಪ್ರಿಯ ಸಖಿ,

ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ ಬೇರೆ ಬೆಲೆ. ಹಾಗೇ ಬೊಂಬೆಗಳೂ ವಿಭಿನ್ನ ಆಕಾರ, ರೂಪ ಪಡೆದಿವೆ.

ಇವನ ಬುಟ್ಟಿಯಲ್ಲಿ ಎಲ್ಲ ಬೊಂಬೆಯೂ ಉಂಟು. ಗಣಪತಿ, ಕೃಷ್ಣ-ರಾಧೆ, ಶಿವ-ಪಾರ್ವತಿ, ವಿವೇಕಾನಂದ, ಗಾಂಧೀಜಿ, ಏಸುಕ್ರಿಸ್ತ, ನವಿಲು, ಡುಮ್ಮ-ಡುಮ್ಮಿ, ಗಿಣಿಗಳು, ಅಳುವ ಮಗು, ಬಸವಣ್ಣ, ಗಾಂಧೀಜಿಯವರ ತತ್ವ ಸಾರುವ ಮೂರು ಕೋತಿಗಳು…. ಒಂದೆ, ಎರಡೇ ಇವನ ಬುಟ್ಟಿ ಎಂದರೆ ಒಂದು ಮಿನಿ ಭಾರತವಿದ್ದಂತೆ! ಅದರೊಳಗೆ ಎಷ್ಟೊಂದು ಬಣ್ಣದ ವಿಭಿನ್ನ ರೀತಿಯ ಬೊಂಬೆಗಳು! ಒಂದೊಂದು ಬೊಂಬೆಗೂ ಅದರದ್ದೇ ಆದ ಮಹತ್ವ, ತತ್ವ, ಅದರದ್ದೇ ವಿಭಿನ್ನ ರೂಪು, ಚಾಪು. ಬೊಂಬೆಗೆ ಬಳಿದ ಬಣ್ಣಗಳೂ ಬೇರೆ ಬೇರೆ. ಆದರೆ ಎಲ್ಲಾ ಬೊಂಬೆಗಳನ್ನು ತಯಾರಿಸಲು ಉಪಯೋಗಿಸಿದ ಮೂಲವಸ್ತು ಮಾತ್ರ ಒಂದೇ!

ಸಖಿ, ಒಮ್ಮೆ ಆ ಬೊಂಬೆಗಳಿಗೆ ಮಾನವರನ್ನು ಹೋಲಿಸಿ ನೋಡಿಕೊಂಡರೆ, ಹೇಗೆ? ಆ ಬೊಂಬೆಗಳಂತೆಯೇ ನಮ್ಮೆಲ್ಲರ ಹುಟ್ಟಿನ ಮೂಲಧಾತು ಒಂದೇ. ಅದೇ ರಕ್ತ ಮಾಂಸ ಜೀವ… ಇತ್ಯಾದಿಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಹುಟ್ಟಿಗೆ ಮೊದಲೇ ಮಗುವಿನ ಜಾತಿಯನ್ನು ಗುರುತಿಸುವ ಯಾವ ಸಂಕೇತವನ್ನೂ ಮಗುವಿನಲ್ಲಿ ನಾವು ಕಾಣುವುದಿಲ್ಲ. ಆದರೆ ಮಗು ಹುಟ್ಟಿದೊಡನೆ, ಹುಟ್ಟಿದ ಮನೆಯ ಜಾತಿ, ಭಾಷೆ, ಸಂಸ್ಕಾರ, ಆಚಾರ ವಿಚಾರಗಳಿಗೆ ತಕ್ಕಂತೆ ಮಗುವಿನ ಪರಿಸರವೂ ನಿರ್ಮಾಣವಾಗುತ್ತದೆ. ಮುಸಲ್ಮಾನರ ಮನೆಯಲ್ಲಿ ಹುಟ್ಟಿದ ಜೀವ ಮುಸ್ಲೀಮನಾಗುತ್ತದೆ. ಹಿಂದುವಿನ ಮನೆಯಲ್ಲಿ ಹುಟ್ಟಿದ ಜೀವ ಹಿಂದುವಾಗುತ್ತದೆ. ಹಾಗೇ ಇನ್ನಿತರ ಜಾತಿಗಳಲ್ಲಿ ಹುಟ್ಟಿದ ಜೀವವೂ ಕೂಡ.  ಆದರೆ ವಿಶಾಲಾರ್ಥದಲ್ಲಿ ವಿವೇಚಿಸಿದರೆ ನಾವಲ್ಲರೂ ಒಂದೇ!

ಈ ಸರಳ ತತ್ವವನ್ನೇ ಸಂಕುಚಿತಗೊಳಿಸಿರುವ ನಾವು ಮೇಲು-ಕೀಳು, ಶ್ರೇಷ್ಠ-ನೀಚ ಎಂದೆಲ್ಲಾ ಕಿತ್ತಾಡಿ ಹೊಡೆದಾಡುತ್ತೇವೆ. ನಮ್ಮ ಬಣ್ಣ, ರೂಪ, ಆಚಾರ, ವಿಚಾರ, ವೇಷಭೂಷಣ, ಬುದ್ಧಿ, ವಿವೇಕ ಎಲ್ಲವೂ ವಿಭಿನ್ನವಾಗಿಯೇ ಇರಬಹುದು- ಆದರೆ ಬೊಂಬೆಗೆ ಮೂಲವಸ್ತು ಒಂದೇ ಇದ್ದಂತೆ, ನಮ್ಮೆಲ್ಲರ ಹುಟ್ಟಿಗೆ ಕಾರಣವಾಗಿರುವ ಮೂಲಧಾತು ಒಂದೇ! ಇವನ್ನೆಂದೂ ನಾವು ಮರೆಯಬಾರದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...