Home / ಲೇಖನ / ಇತರೆ / ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

Tande Maguಪ್ರಿಯ ಸಖಿ,

ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ ತಪ್ಪೆಂದು ಸಾಬೀತಾಗುತ್ತದೆ.

ಮಕ್ಕಳ ಮನಸ್ಸೊಂದು ಕಪ್ಪು ಹಲಗೆಯಂತೆ. ಇಲ್ಲಿ ನಾವು ಏನನ್ನು ಬೇಕಾದರೂ ಬರೆಯಬಹುದು ಎಂಬುದು ಪಾಶ್ಚಾತ್ಯ ಅಭಿಪ್ರಾಯ. ಆದರೆ ಇತ್ತೀಚೆಗೆ ನಾವೂ ಇದನ್ನೇ ನಂಬುತ್ತೇವೆ. ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಂದು ಮಗುವೂ ಒಂದು ವ್ಯಕ್ತಿ. ಇಲ್ಲಿ ಪ್ರತಿಯೊಬ್ಬನಲ್ಲೂ ಇರುವ ಆತ್ಮವನ್ನು ಗೌರವಿಸಿ ಮಗುವೂ ಒಂದು ವ್ಯಕ್ತಿ ಎಂದು ನಂಬಲಾಗುತ್ತದೆ.

ಮಗುವಿನ ಮನಸ್ಸು ಕಪ್ಪು ಹಲಗೆ, ನಾವೇ ಅದಕ್ಕೆ ಎಲ್ಲವನ್ನೂ ಹೇಳಿಕೊಡುತ್ತೇವೆನ್ನುವುದು ತಪ್ಪಾಗುತ್ತದೆ. ತನಗೆ ಹಸಿವಾದಾಗ ಅಳುವುದನ್ನೂ, ಹೊಸ ಆಟಿಕೆಯೊಂದು ಕೈಗೆ ಸಿಕ್ಕಾಗ ಸಂತಸದಿಂದ ನಗುವುದನ್ನೂ, ತಾಯಿಯನ್ನ ಕಂಡೊಡನೆ ಬೇರೆಯವರ ಕೈಯಿಂದ ಜಿಗಿದು ತಾಯಿಯನ್ನು ಅಪ್ಪುವುದನ್ನು ತನಗೆ ಬೇಕೆಂದ ವಸ್ತು ಸಿಗದಿದ್ದಾಗ ಸಿಟ್ಟುಗೊಳ್ಳುವುದನ್ನೂ ಮಗುವಿಗೆ ಹುಟ್ಟಿದೊಡನೆ ಯಾರು ಕಲಿಸಿದ್ದಾರೆ ?

ನಾವು ಏನನ್ನೇ ಹೊರಗಿನಿಂದ ಕಲಿಸಿದರೂ ಅದನ್ನು ಗ್ರಹಿಸುವ ಶಕ್ತಿ, ತಿಳಿದುಕೊಳ್ಳುವ, ಅರ್ಥೈಸಿಕೊಳ್ಳುವ ಮನಸ್ಸು ಮಗುವಿನಲ್ಲಿ ಹುಟ್ಟಿನಿಂದಲೇ ಇದೆ. ತಾನು ಬೆಳೆಯುತ್ತಾ ತನ್ನ ಸುತ್ತಲಿನ ಪರಿಸರವನ್ನು ಮಗು ತನ್ನ ದೃಷ್ಟಿಕೋನದಂತೆಯೇ ಅರ್ಥೈಸುತ್ತಾ ಹೋಗುತ್ತದೆ. ಪುಟ್ಟ ಮಗುವಿಗೂ ತನ್ನದೇ ಇಷ್ಟಾನಿಷ್ಟಗಳೂ, ನಿಲುವುಗಳು ಇರುವುದನ್ನು ಗಮನಿಸಬಹುದು. ಅದನ್ನು ಗುರುತಿಸುವ ಮನೋಭಾವ ನಮ್ಮಲ್ಲಿ ಮೂಡಬೇಕಷ್ಟೇ.

ಪ್ರತಿಯೊಂದು ಮಗುವಿಗೂ ಹಿರಿಯರಂತೆಯೇ ಎಲ್ಲ ಸನ್ನಿವೇಶಗಳಿಗೂ ಸ್ಪಂದಿಸಿ ಮೂಡುವ ಸಂವೇದನೆಗಳಿವೆ. ಅವುಗಳಿಗೆ ನಾವು ಬೆಲೆಕೊಡಬೇಕು. ಹಾಗೂ ಅವುಗಳನ್ನು ಗೌರವಿಸಬೇಕು. ಅದು ಬಿಟ್ಟು ನಮ್ಮ ಅನಿಸಿಕೆ, ಅಭಿಪ್ರಾಯಗಳನ್ನೆಲ್ಲ ಮಗುವಿನ ಮೇಲೆ ಬಲವಂತವಾಗಿ ಹೇರುವುದರಿಂದ ಮಗುವಿನ ಸೂಕ್ಷ್ಮಸಂವೇದನೆಗಳು ಘಾಸಿಗೊಂಡು, ದೊಡ್ಡದಾದಂತೆಲ್ಲ ಸ್ವತಂತ್ರ ವ್ಯಕ್ತಿತ್ವವಿಲ್ಲದೇ, ಕೀಳರಿಮೆಯಿಂದ, ಮನೋವೇದನೆಯಿಂದ ನರಳುವಂತಾಗುತ್ತದೆ ಎನ್ನುತ್ತಾರೆ ಮಕ್ಕಳ ಮಾನಸಿಕ ತಜ್ಞರು.

ಸಖಿ, ಪ್ರತಿಯೊಂದು ಮಗುವೂ ತನ್ನ ಭಾವನೆಗಳಿಂದ ತನ್ನಂತೆಯೇ ತಾನೇ ವಿಕಸಿಸಿ, ಅರಳಲು, ಪರಿಮಳ ಸೂಸಲು ಬಿಡಬೇಕು. ಅದಕ್ಕೆ ತನ್ನ ಪೂರಕ ಪರಿಸರವನ್ನೇ ಹಿರಿಯರು ಪೂರೈಸಿಕೊಡಬೇಕು. ಮಗುವೂ ಒಂದು ವ್ಯಕ್ತಿ. ಅದು ನಾವು ತುಂಬಿದ ವಿಷಯಗಳನ್ನೇ ಕಕ್ಕುವ ಕಂಪ್ಯೂಟರ್ ಅಲ್ಲ ಎಂಬುವುದನ್ನು ನಾವು ತಿಳಿದಿರಬೇಕು. ಮಗುವಿನ ಮನಸ್ಸೊಂದು ವಿಶಾಲ ವಿಶ್ವವಿದ್ದಂತೆ. ಅದು ತನಗೆ ಬೇಕೆಂದೆಡೆ ಹಾರಿ, ಬೇಕೆನಿಸಿದ್ದನ್ನು ಪಡಯಬಲ್ಲದು. ಮಗುವನ್ನು ನಮ್ಮ ಮಿತಿಯಲ್ಲಿಯಷ್ಟೇ ಅರ್ಧೈಸಿಕೊಂಡು ಅದಕ್ಕೆ ಸಂಕೋಲೆಯನ್ನು ತೊಡಿಸುವುದು ಬೇಡ. ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...