Home / ಲೇಖನ / ಇತರೆ / ಧನಾತ್ಮಕ ನಿಲುವು

ಧನಾತ್ಮಕ ನಿಲುವು

ಪ್ರಿಯ ಸಖಿ,

ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು ರಾತ್ರಿ ಚರ್ಚಿಸುತ್ತಿದ್ದರು. ನಾವು ಭಾರತವನ್ನು ಬಿಟ್ಟು ಹೋದರೆ ಭಾರತಕ್ಕೆ ದುರ್ಗತಿ ತಪ್ಪಿದ್ದಲ್ಲ. ಆದ್ದರಿಂದ ನಾವು ನಿಮ್ಮನ್ನು ಆಳುವುದೇ ಕ್ಷೇಮ ಇತ್ಯಾದಿ ಮಾತನಾಡುತ್ತಿದ್ದರು. ಗಾಂಧೀಜಿಯವರೂ ನಮ್ಮ ದೇಶದ ಪರವಾಗಿ ನಿರಂತರವಾಗಿ ವಾದ ಮಾಡುತ್ತಿದ್ದರು.

ಕೊನೆಗೊಮ್ಮೆ ತಮ್ಮ ಪರವಾದವನ್ನೆಲ್ಲಾ ೪-೫ ಪುಟಗಳಷ್ಟು ನೋಟ್ಸ್‌ ಬರೆದು ಅದಕ್ಕೊಂದು ಗುಂಡುಸೂಜಿ ಚುಚ್ಚಿ ಆ ಆಂಗ್ಲ ಜನರು ಗಾಂಧೀಜಿಗೆ ನೀಡಿ ನಮ್ಮ
ವಾದವನ್ನೆಲ್ಲಾ ಇದರಲ್ಲಿ ಮಂಡಿಸಿದ್ದೇವೆ. ನಿಮಗೆ ಇದರಿಂದ ನಮ್ಮ ನಿಲುವು ಸ್ಪಷ್ಟವಾಗಬಹುದು. ಹಾಗೇ ಅದರಿಂದ ನಿಮ್ಮ ಮನಪರಿವರ್ತನೆಯಾಗಲು ಉಪಯೋಗ
ವಾಗಬಹುದು ಎಂದರು.

ಗಾಂಧೀಜಿ ಆ ನೋಟ್ಸನ್ನು ತೆಗೆದುಕೊಂಡರು. ಮಾರನೆಯ ದಿನ ಅವರಿದ್ದಲ್ಲಿಗೆ ಆಗಮಿಸಿದ ಆಂಗ್ಲರು ನಮ್ಮ ನೋಟ್ಸ್‌ ಓದಿದಿರಾ? ಎಂದರು. ಗಾಂಧೀಜಿ ಓದಿದೆ ಎಂದರು. ಅದಕ್ಕವರು ಹಾಗಿದ್ದರೆ ಅದರಲ್ಲಿ ನಿಮಗೆ ಏನಾದರೂ ಬೆಲೆಯುಳ್ಳದ್ದು ಇದೆ ಎನಿಸಿತೇ? ಎಂದು ಕೇಳಿದರು. ನಾನಾಗಲೇ ಬೆಲೆಯುಳ್ಳದ್ದನ್ನು  ತೆಗೆದಿರಿಸಿಕೊಂಡಿದ್ದೇನೆ ಎಂದು ಆ ನೋಟ್ಸಿಗೆ ಚುಚ್ಚಿದ್ದ ಹೊಸ ಗುಂಡು ಸೂಜಿಯನ್ನು ತೋರಿಸಿ ನಕ್ಕರು ಗಾಂಧೀಜಿ.

ಈ ಒಂದು ಪ್ರಸಂಗದಿಂದ ಗಾಂಧೀಜಿಯವರು ಎಷ್ಟೊಂದು ನಿಷ್ಟುರವಾದಿಗಳೂ, ದೇಶಪ್ರೇಮಿಗಳೂ ಆಗಿದ್ದರು ಎಂದು ತಿಳಿಯುವ ಹಾಗೆ ತಮಗೆ ಇಷ್ಟವಿಲ್ಲವೆನಿಸಿದ
ಸಂಗತಿಗಳಿಂದಲೂ ತಮಗೆ ಉಪಯೋಗಿಯಾಗುವಂತಹುದನ್ನು ತೆಗೆದುಕೊಳ್ಳುವ ಧನಾತ್ಮಕ ನಿಲುವು (Positive thinking) ಹೊಂದಿದ್ದರು ಎಂಬುದು ಸ್ಪಷ್ಟವಾಗುತ್ತದೆ.

ಸಖಿ, ನಮ್ಮ ಬದುಕಿನಲ್ಲೂ ನಮಗೆ ಬೇಡವಾದ ಎಷ್ಟೊಂದು ಸಂಗತಿಗಳು ನಡೆಯುತ್ತಿರುತ್ತವೆ. ಬೇಡದ ವ್ಯಕ್ತಿಗಳೊಂದಿಗೆ ವ್ಯವಹರಿಸಬೇಕಾಗುತ್ತದೆ. ಆಗೆಲ್ಲಾ ಮನಸ್ಸು ಕಹಿಯಾಗುತ್ತದೆ.  ಅದರೆ ಅಂತಹ ಕೆಡುಕಿನಲ್ಲೂ ಒಳಿತನ್ನು, ಧನಾತ್ಮಕ ನಿಲುವನ್ನು ನಾವು ಬೆಳೆಸಿಕೊಂಡರೆ ನಿಜಕ್ಕೂ ಬದುಕು ಸುಂದರವಾಗುತ್ತದೆ. ಕೆಟ್ಟದ್ದರಲ್ಲಿಯೂ ನಮಗೆ ಉಪಯೋಗವಾಗಬಲ್ಲ ಒಳಿತನ್ನು ಆರಿಸಿಕೊಳ್ಳುವುದೇ ನಿಜವಾದ ಜಾಣತನವಲ್ಲವೆ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...