Home / ಲೇಖನ / ಇತರೆ / ನಿಗೂಢ ಸತ್ಯಗಳು

ನಿಗೂಢ ಸತ್ಯಗಳು

spirit-751277_960_720ಪ್ರಿಯ ಸಖಿ,

ನೀನು ಕೇರಳದ ತಿರುವನಂತಪುರದ ಅನಂತ ಪದ್ಮನಾಭ ದೇವಾಲಯವನ್ನು ನೋಡಿರಬಹುದು. ಎಲ್ಲ ದೇವಾಲಯಗಳಂತೆ ಅದೊಂದು ದೇವಾಲಯ ಅದರಲ್ಲೇನು ವಿಶೇಷ ಎಂದು ಕೊಳ್ಳುತ್ತೀದ್ದೀಯಾ?

ಈ ದೇವಾಸ್ಥಾನದ ಅನಂತ ಪದ್ಮನಾಭಮೂರ್ತಿ ಶೇಷಶಯನವಾಗಿದ್ದು ಅದು ಹದಿನೆಂಟು ಅಡಿಗಳ ಉದ್ದವಿದೆ. ವಿಶೇಷವೆಂದರೆ ಈ ಮೂರ್ತಿ ಯನ್ನು ಪೂರ್ತಿಯಾಗಿ ನೋಡುವಂತಿಲ್ಲ. ದೂರದ ಅಂತರಗಳಲ್ಲಿ ಪಕ್ಕಪಕ್ಕದಲ್ಲೇ ಗರ್ಭಗುಡಿಗೆ ಮೂರು ಬಾಗಿಲುಗಳಿವೆ. ಒಂದೊಂದು ಬಾಗಿಲಿನಿಂದ ಮೂರ್ತಿಯ ಒಂದೊಂದು ಭಾಗವನ್ನಷ್ಟೇ ನೋಡಬಹುದಾಗಿದೆ. ಎಲ್ಲಾ ಬಾಗಿಲುಗಳಿಂದ ನೋಡಿದರೂ ಮೂರ್ತಿಯ ಪೂರ್ಣ ರೂಪವನ್ನು ಕಾಣಲಾಗುವುದಿಲ್ಲ. ಇದೇಕೆ ಹೀಗೆ ಮೂರು ಬಾಗಿಲುಗಳನ್ನು ಮಾಡಿದ್ದಾರೆ. ಒಂದು ಬಾಗಿಲು ಮಾಡಿ ಮೂರ್ತಿಯನ್ನು ಪೂರ್ಣವಾಗಿ ತೋರಿಸಿದ್ದರಾಗುತ್ತಿರಲಿಲ್ಲವೇ ಎಂದು ಹಲವರಾದರೂ ಯೋಚಿಸುತ್ತಾರೆ.

ಅದರೆ ಹೀಗೆ ಮೂರು ಬಾಗಿಲುಗಳಲ್ಲಿ ಅರ್ಥಪೂರ್ಣವಾಗಿ ಮೂರ್ತಿಯನ್ನು ತೋರಿಸುವುದರ ಹಿಂದೆ ಒಂದು ಸ್ವಾರಸ್ಯವಿದೆಯೆನಿಸುತ್ತದೆ. ಇಲ್ಲಿ ಮೂರ್ತಿಯನ್ನು ವಿಶಿಷ್ಟ ಅಥವಾ ಸತ್ಯವೆನ್ನುವುದಕ್ಕೆ, ಈ ಸೃಷ್ಟಿಗೆ ಹೋಲಿಸಿ ಪ್ರತಿಷ್ಟಾಪಿಸಿದ್ದಾರೆ. ಈ ಸೃಷ್ಟಿ, ವಿಶಿಷ್ಟ ಶಕ್ತಿ ಅಥವಾ ಸತ್ಯವೆನ್ನುವುದು ಅನಂತವಾದುದು ನಾವು ಅದನ್ನು ನಮ್ಮ ನಮ್ಮ ಮಿತಿಗಳಲ್ಲಿ, ನಮ್ಮ ಗ್ರಹಿಕೆಗೆ ಕಂಡಂತೆ ಅರ್ಧೈಸಿಕೊಳ್ಳುತ್ತೇವೆ. ಮೊದಲ ಬಾಗಿಲಲ್ಲಿ ಕಂಡ ಮೂರ್ತಿಯ ತಲೆ, ತೋಳು, ಹಾವಿನ ಹೆಡೆಯನ್ನು ನೋಡಿ ಇದೇ ಸತ್ಯ ಸೃಷ್ಟಿ ಎಂದುಕೊಳ್ಳುವಂತೆ ಎರಡನೆಯ ಬಾಗಿಲಲ್ಲಿ ಕೂಡ ಮೂರ್ತಿಯ ಎದೆ, ಹೊಟ್ಟೆ, ನಾಭಿಯನ್ನು ನೋಡಿ ಇದೇ ಸತ್ಯ ಸೃಷ್ಟಿ ಎಂದು ಕೊಳ್ಳುತ್ತೇವೆ. ಹಾಗೇ ಮೂರನೆಯ ಬಾಗಿಲಲ್ಲಿ ಕಂಡಾಗಲೂ ಕೂಡ.

ನಮ್ಮ ತಿಳಿವಿನ, ದೃಷ್ಟಿಯ, ಬುದ್ಧಿಯ ಮಿತಿಯಲ್ಲಿ ಕಂಡದ್ದಷ್ಟನ್ನೇ ನಿಜವೆಂದು ನಾವು ನಂಬುತ್ತೇವೆ. ಆದರೆ ನಾವೆಷ್ಟೇ ವೈಜ್ಞಾನಿಕವಾಗಿ ಪ್ರಗತಿ ಸಾಧಿಸಿದರೂ ನಿಜವಾಗಿಯೂ ವಿಶಿಷ್ಟ ಶಕ್ತಿ, ಈ ಸೃಷ್ಟಿ ಅಥವಾ ಸತ್ಯವೆನ್ನುವುದು ಎಂದಿಗೂ ನಮಗೆ ಸಂಪೂರ್ಣವಾಗಿ ನಿಲುಕುವುದಿಲ್ಲ. ಅದು ನಾವು ಎಷ್ಟೇ ತಿಳಿದೆವೆಂದು ಕೊಂಡರೂ ನಿಗೂಢವಾಗಿಯೇ ಇರುತ್ತದೆ ಎಂಬ ಸತ್ಯವನ್ನು ಈ ದೇವಾಲಯದಲ್ಲಿ ಮೂಡಿಸಿದ್ದಾರೆ ಎನ್ನಿಸುತ್ತದೆ.

ಸಖಿ, ನಮ್ಮ ಸಂಸ್ಕೃತಿ, ಧರ್ಮ ಎಲ್ಲವೂ ಹೀಗೇ ಅರ್ಥಗರ್ಭಿತವಾಗಿಯೂ ಪ್ರಸ್ತುತ ಬದುಕಿಗೂ ಅವಶ್ಯವಾದುದೂ ಆಗಿದೆ. ಆದರೆ ನಾವದನ್ನು ಸರಿಯಾಗಿ ಅರ್ಥೈಸಿಕೊಳ್ಳುವುದರಲ್ಲಿ ಸೋತಿದ್ದೇವೆ. ಅಥವಾ ಅರ್ಧೈಸಿಕೊಳ್ಳುವ ಗೋಜಿಗೇ ಹೋಗುತ್ತಿಲ್ಲ. ಇವುಗಳಲ್ಲೇನೂ ಹುರುಳಿಲ್ಲ, ಎಂದುಕೊಂಡಿದ್ದೇವೆ. ಒಳಗಣ್ಣು ತೆರೆದು ನೋಡಿದಾಗ ಇಂತಹ ಅನೇಕ ಬದುಕಿನ ತಾತ್ಪರ್ಯಗಳನ್ನು ನಮ್ಮ ಸುತ್ತಲೂ ಇಂಥಹ ಸಂಸ್ಕೃತಿಯ ಪ್ರತೀಕಗಳಲ್ಲಿ ಕಾಣುತ್ತಾ ಹೋಗಬಹುದು. ನಿಗೂಢತೆಯಲ್ಲಿಯೇ ಅನೇಕ ಹೊಸ ಅರ್ಥಗಳು ಗೋಚರಿಸಬಹುದು. ಕಣ್ಮುಚ್ಚಿ ಪುರಾತನವಾದುದೆಲ್ಲಾ ಕೆಲಸಕ್ಕೆ ಬಾರದ್ದೆಂದು ಹೇಳುವ ಮೊದಲು ಅದರೊಳಗಿನ ನಿಜವಾದ ಅರ್ಥವನ್ನು, ಮೌಲ್ಯವನ್ನು ಹುಡುಕುವ ಪ್ರಯತ್ನವನ್ನು, ಅದನ್ನು ನಮ್ಮ ಆಧುನಿಕ ಬದುಕಿಗೆ ಹೊಂದಿಸಿಕೊಳ್ಳುವ ಮಾರ್ಗವನ್ನು ನಾವು ಹುಡುಕಬೇಕು. ಈ ಕುರಿತು ನಿನ್ನ ನಿಲುವೇನು?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...