Home / ಲೇಖನ / ಇತರೆ / ಗಣ್ಯರು ಯಾರು ?

ಗಣ್ಯರು ಯಾರು ?

ಪ್ರಿಯ ಸಖಿ,
ಅವರ ಕಾರು ಭರ್ರನೆ ಓಡುತ್ತಿದೆ. ರಸ್ತೆ ಮಧ್ಯದಲ್ಲಿ ಸೌದೆ ಹೊರೆ ಕಟ್ಟು ಬಿಚ್ಚಿಕೊಂಡು ಚೆಲ್ಲಾಪಿಲ್ಲಿಯಾಗಿಬಿಟ್ಟಿದೆ. ಇದನ್ನು ಕಂಡ ಅವರು ಗಕ್ಕನೆ ನಿಲ್ಲಿಸುತ್ತಾರೆ. ಕಾರಿನಿಂದಿಳಿದ ಅವರು ಆ ಮುದುಕನಿಗೆ ಸೌದೆಯನ್ನು ಆಯ್ದು ಹೊರೆ ಕಟ್ಟಲು ಸಹಾಯ ಮಾಡುತ್ತಾರೆ. ಆ ಹೊರೆಯನ್ನು ತಮ್ಮ ಡಿಕ್ಕಿಯಲ್ಲಿರಿಸಿ ಆ ಮುದುಕನನ್ನು ಅವನು ಬೇಡವೆನ್ನುತ್ತಿದ್ದರೂ ಕೇಳದೆ ಕಾರಿನಲ್ಲಿ ಕೂರಿಸಿಕೊಂಡು ಅವನ ಗಮ್ಯವನ್ನು ತಲುಪಿಸಿ ಅವರು ತಮ್ಮ ಕೆಲಸಕ್ಕೆ ಹೋಗುತ್ತಾರೆ.

ಅವರು ಆ ಊರಿನ ಅತ್ಯಂತ ಗಣ್ಯವ್ಯಕ್ತಿ ಸರ್ಕಾರದಲ್ಲಿ ಮಂತ್ರಿ ಪದವಿಯನ್ನು ನಿರ್ವಹಿಸುತ್ತಿರುವವರು. ಆದರೆ ಅವರಿಗೆ ಅದರ ಬಗ್ಗೆ ಯಾವುದೇ ಅಹಂಕಾರ, ಗರ್ವಗಳಿಲ್ಲ. ಸಭೆಯಿರಲಿ, ಸಮಾರಂಭವಿರಲಿ, ಮನೆಯಲ್ಲಾಗಲಿ ಅತ್ಯಂತ ಸಾಮಾನ್ಯ ಮನುಷ್ಯನಂತೆ ಅವರ ವೇಷಭೂಷಣ ಹಾಗೇ ಅವರ ಅವಶ್ಯಕತೆಗಳೂ ತೀರ ಅಲ್ಪವಾದವು. ಸರ್ಕಾರದಿಂದ ಮಂತ್ರಿಯೊಬ್ಬನಿಗೆ ದೊರೆಯುವ ಎಲ್ಲ ಸವಲತ್ತುಗಳನ್ನು ನಿರಾಕರಿಸಿದ್ದಾರೆ. ಜೊತೆಗೆ ದೀನದಲಿತರಿಗೆ ತಮ್ಮಿಂದಾಗುವ ಎಲ್ಲಾ ಸಹಾಯ, ಸಹಕಾರಗಳನ್ನು ಮಾಡುತ್ತಾ ಬಂದಿದ್ದಾರೆ. ತನ್ನದೆನ್ನುವ ಪ್ರತಿ ಪೈಸೆಯಲ್ಲಿಯೂ ಸಮಾಜದ ಋಣವಿದೆ ಎಂದು ನಂಬಿದವರಿವರು. ಊರಿನಿಂದ ಪೇಟೆಗೆ ಒಬ್ಬರೇ ಕಾರಿನಲ್ಲಿ ಹೊರಟರೂ ದಾರಿಯಲ್ಲಿ ಪೇಟೆಗೆ ಹೋಗಲು ಸಿಕ್ಕವರನ್ನೆಲ್ಲಾ ಕಾರಿನಲ್ಲಿ ತುಂಬಿಸಿಕೊಂಡು  ಪೇಟೆ ತಲುಪಿಸಿದರೇ ಇವರಿಗೆ ಸಮಾಧಾನ.

ಸಖಿ, ಇದ್ಯಾವುದೋ ಕನಸೋ, ಕಲ್ಪನೆಯ ಬಗ್ಗೆಯೋ ನಾನು ಹೇಳುತ್ತಿದ್ದೇನೆ ಎಂದು ನೀನು ಅಂದುಕೊಂಡಿದ್ದರೆ ಅದು ತಪ್ಪು. ಇಂತಹ ಸರಳ ಮಾನವೀಯ ವ್ಯಕ್ತಿ ನಿಜವಾಗಿಯೂ ಇದ್ದಾರೆ. ತನ್ನ ಸ್ಥಾನದ ಬಗ್ಗೆ ಗರ್ವ ಪಡದೇ ಊರಿನ ಎಲ್ಲರಿಗೂ ಬೇಕಾಗಿರುವ ಎಲ್ಲರ ಕಷ್ಟ ನೋವುಗಳಿಗೆ ಸ್ಪಂದಿಸುವ ಈ ವ್ಯಕ್ತಿ ತನ್ನ ಅಧಿಕಾರ, ಅಂತಸ್ತು, ವಿದ್ಯೆ ಸ್ಥಾನಮಾನದಿಂದಲ್ಲ. ಗಣ್ಯರಾಗಿರುವುದು, ತಮ್ಮ ಮಾನವೀಯ ಸ್ಪಂದನೆಗಳಿಂದ.

ಒಬ್ಬ ವ್ಯಕ್ತಿ ಗಣ್ಯನೆನಿಸಿಕೊಳ್ಳಲು ಅವನಿಗೆ ಹಿರಿದಾದ ಅಧಿಕಾರ, ಸ್ಥಾನ ಅಂತಸ್ತು, ಅಪರಿಮಿತ ವಿದ್ಯೆ, ಹಿರಿಯ ವಯಸ್ಸು ಇತ್ಯಾದಿಗಳನ್ನು ನಾವು ಮಾನದಂಡವಾಗಿ ಬಳಸುತ್ತೇವೆ. ಆದರೆ ಇವೆಲ್ಲಾ ಇದ್ದೂ ಅವನಿಗೆ ಇತರ ವ್ಯಕ್ತಿಗಳ ದುಃಖ, ನೋವುಗಳ ಬಗೆಗೆ ಸ್ಪಂದನೆಯಿಲ್ಲದಿದ್ದರೆ ಅವನು ಗಣ್ಯ ಅಥವಾ ಹಿರಿಯ ಹೇಗಾಗುತ್ತಾನೆ ? ತನ್ನ ಸ್ಥಾನ, ಅಂತಸ್ತು, ವಿದ್ಯೆ ವಯಸ್ಸುಗಳಿಗೆ ಇತರರು ಗೌರವಕೊಡಬೇಕೆಂದು ಬಯಸುವ ವ್ಯಕ್ತಿ ಅವುಗಳನ್ನು ಹೊಂದಿರುವುದರ ಬಗೆಗೆ ಗರ್ವಪಡದೇ ತನ್ನ ಸುತ್ತಲಿನವರ ನೋವು, ದುಃಖಗಳಿಗೆ ಸ್ಪಂದಿಸಿದಾಗ ಸಮಾಜದಲ್ಲಿ ಗೌರವವನ್ನು ಪಡೆಯುತ್ತಾನೆ. ಹಿರಿಯನೆನಿಸುತ್ತಾನೆ, ಗಣ್ಯನಾಗುತ್ತಾನೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...