Home / ಲೇಖನ / ಇತರೆ / ಗಣ್ಯರು ಯಾರು ?

ಗಣ್ಯರು ಯಾರು ?

ಪ್ರಿಯ ಸಖಿ,
ಅವರ ಕಾರು ಭರ್ರನೆ ಓಡುತ್ತಿದೆ. ರಸ್ತೆ ಮಧ್ಯದಲ್ಲಿ ಸೌದೆ ಹೊರೆ ಕಟ್ಟು ಬಿಚ್ಚಿಕೊಂಡು ಚೆಲ್ಲಾಪಿಲ್ಲಿಯಾಗಿಬಿಟ್ಟಿದೆ. ಇದನ್ನು ಕಂಡ ಅವರು ಗಕ್ಕನೆ ನಿಲ್ಲಿಸುತ್ತಾರೆ. ಕಾರಿನಿಂದಿಳಿದ ಅವರು ಆ ಮುದುಕನಿಗೆ ಸೌದೆಯನ್ನು ಆಯ್ದು ಹೊರೆ ಕಟ್ಟಲು ಸಹಾಯ ಮಾಡುತ್ತಾರೆ. ಆ ಹೊರೆಯನ್ನು ತಮ್ಮ ಡಿಕ್ಕಿಯಲ್ಲಿರಿಸಿ ಆ ಮುದುಕನನ್ನು ಅವನು ಬೇಡವೆನ್ನುತ್ತಿದ್ದರೂ ಕೇಳದೆ ಕಾರಿನಲ್ಲಿ ಕೂರಿಸಿಕೊಂಡು ಅವನ ಗಮ್ಯವನ್ನು ತಲುಪಿಸಿ ಅವರು ತಮ್ಮ ಕೆಲಸಕ್ಕೆ ಹೋಗುತ್ತಾರೆ.

ಅವರು ಆ ಊರಿನ ಅತ್ಯಂತ ಗಣ್ಯವ್ಯಕ್ತಿ ಸರ್ಕಾರದಲ್ಲಿ ಮಂತ್ರಿ ಪದವಿಯನ್ನು ನಿರ್ವಹಿಸುತ್ತಿರುವವರು. ಆದರೆ ಅವರಿಗೆ ಅದರ ಬಗ್ಗೆ ಯಾವುದೇ ಅಹಂಕಾರ, ಗರ್ವಗಳಿಲ್ಲ. ಸಭೆಯಿರಲಿ, ಸಮಾರಂಭವಿರಲಿ, ಮನೆಯಲ್ಲಾಗಲಿ ಅತ್ಯಂತ ಸಾಮಾನ್ಯ ಮನುಷ್ಯನಂತೆ ಅವರ ವೇಷಭೂಷಣ ಹಾಗೇ ಅವರ ಅವಶ್ಯಕತೆಗಳೂ ತೀರ ಅಲ್ಪವಾದವು. ಸರ್ಕಾರದಿಂದ ಮಂತ್ರಿಯೊಬ್ಬನಿಗೆ ದೊರೆಯುವ ಎಲ್ಲ ಸವಲತ್ತುಗಳನ್ನು ನಿರಾಕರಿಸಿದ್ದಾರೆ. ಜೊತೆಗೆ ದೀನದಲಿತರಿಗೆ ತಮ್ಮಿಂದಾಗುವ ಎಲ್ಲಾ ಸಹಾಯ, ಸಹಕಾರಗಳನ್ನು ಮಾಡುತ್ತಾ ಬಂದಿದ್ದಾರೆ. ತನ್ನದೆನ್ನುವ ಪ್ರತಿ ಪೈಸೆಯಲ್ಲಿಯೂ ಸಮಾಜದ ಋಣವಿದೆ ಎಂದು ನಂಬಿದವರಿವರು. ಊರಿನಿಂದ ಪೇಟೆಗೆ ಒಬ್ಬರೇ ಕಾರಿನಲ್ಲಿ ಹೊರಟರೂ ದಾರಿಯಲ್ಲಿ ಪೇಟೆಗೆ ಹೋಗಲು ಸಿಕ್ಕವರನ್ನೆಲ್ಲಾ ಕಾರಿನಲ್ಲಿ ತುಂಬಿಸಿಕೊಂಡು  ಪೇಟೆ ತಲುಪಿಸಿದರೇ ಇವರಿಗೆ ಸಮಾಧಾನ.

ಸಖಿ, ಇದ್ಯಾವುದೋ ಕನಸೋ, ಕಲ್ಪನೆಯ ಬಗ್ಗೆಯೋ ನಾನು ಹೇಳುತ್ತಿದ್ದೇನೆ ಎಂದು ನೀನು ಅಂದುಕೊಂಡಿದ್ದರೆ ಅದು ತಪ್ಪು. ಇಂತಹ ಸರಳ ಮಾನವೀಯ ವ್ಯಕ್ತಿ ನಿಜವಾಗಿಯೂ ಇದ್ದಾರೆ. ತನ್ನ ಸ್ಥಾನದ ಬಗ್ಗೆ ಗರ್ವ ಪಡದೇ ಊರಿನ ಎಲ್ಲರಿಗೂ ಬೇಕಾಗಿರುವ ಎಲ್ಲರ ಕಷ್ಟ ನೋವುಗಳಿಗೆ ಸ್ಪಂದಿಸುವ ಈ ವ್ಯಕ್ತಿ ತನ್ನ ಅಧಿಕಾರ, ಅಂತಸ್ತು, ವಿದ್ಯೆ ಸ್ಥಾನಮಾನದಿಂದಲ್ಲ. ಗಣ್ಯರಾಗಿರುವುದು, ತಮ್ಮ ಮಾನವೀಯ ಸ್ಪಂದನೆಗಳಿಂದ.

ಒಬ್ಬ ವ್ಯಕ್ತಿ ಗಣ್ಯನೆನಿಸಿಕೊಳ್ಳಲು ಅವನಿಗೆ ಹಿರಿದಾದ ಅಧಿಕಾರ, ಸ್ಥಾನ ಅಂತಸ್ತು, ಅಪರಿಮಿತ ವಿದ್ಯೆ, ಹಿರಿಯ ವಯಸ್ಸು ಇತ್ಯಾದಿಗಳನ್ನು ನಾವು ಮಾನದಂಡವಾಗಿ ಬಳಸುತ್ತೇವೆ. ಆದರೆ ಇವೆಲ್ಲಾ ಇದ್ದೂ ಅವನಿಗೆ ಇತರ ವ್ಯಕ್ತಿಗಳ ದುಃಖ, ನೋವುಗಳ ಬಗೆಗೆ ಸ್ಪಂದನೆಯಿಲ್ಲದಿದ್ದರೆ ಅವನು ಗಣ್ಯ ಅಥವಾ ಹಿರಿಯ ಹೇಗಾಗುತ್ತಾನೆ ? ತನ್ನ ಸ್ಥಾನ, ಅಂತಸ್ತು, ವಿದ್ಯೆ ವಯಸ್ಸುಗಳಿಗೆ ಇತರರು ಗೌರವಕೊಡಬೇಕೆಂದು ಬಯಸುವ ವ್ಯಕ್ತಿ ಅವುಗಳನ್ನು ಹೊಂದಿರುವುದರ ಬಗೆಗೆ ಗರ್ವಪಡದೇ ತನ್ನ ಸುತ್ತಲಿನವರ ನೋವು, ದುಃಖಗಳಿಗೆ ಸ್ಪಂದಿಸಿದಾಗ ಸಮಾಜದಲ್ಲಿ ಗೌರವವನ್ನು ಪಡೆಯುತ್ತಾನೆ. ಹಿರಿಯನೆನಿಸುತ್ತಾನೆ, ಗಣ್ಯನಾಗುತ್ತಾನೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...