Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...