Home / ಬಾಲ ಚಿಲುಮೆ / ಕಥೆ / ಸಂತಸದ ಚಿಲುಮೆ

ಸಂತಸದ ಚಿಲುಮೆ

ಚಿತ್ರ: ಅಲೆಜಾಂಡ್ರ ಜಿಮೆನೆಸ್
ಚಿತ್ರ: ಅಲೆಜಾಂಡ್ರ ಜಿಮೆನೆಸ್

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ.

ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ.

‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ನಿತ್ಯ ಕಷ್ಟಪಡುವುದರಲ್ಲಿ ಬಲು ಸಂತಸವಿದೆ. ಏನು ಇಲ್ಲದವರು ಗಳಿಸಿ ಉಳಿಸಿ ಮನೆ, ಮಠ, ಹೊಲ ಗದ್ದೆ ತೋಟ ಕಾರು ಜೀಪು ಮಾಡಿದಾಲೇ ಸಂತಸದ ಚಿಲುಮೆ ಚಿಮ್ಮುವುದು…..’ ಎಂದು ಅನುಭವಿಯೊಬ್ಬ ವಿವರಿಸುತ್ತಾ ನಿಂತ.

ಮೊದಲಸಾಲಿನಲ್ಲಿ ಕುಳಿತಿದ್ದ ವೇದಾಂತಿಯೊಬ್ಬ ಎದ್ದುನಿಂತು ಮಹಾರಾಜಾಧಿರಾಜ……. ದಿನ ನಿತ್ಯ ಮೂರು ಹೊತ್ತು ನದಿಯಲ್ಲಿ ಮುಳುಗಿ ನಾನಾ ಪುಷ್ಪಗಳ ಹರಿದು ತಂದು ನಾರು ಮಡಿಯಲಿ ದೇವನಿಗೆ ಪೂಜಿಸಿ ಭಜಿಸಿ ನೇಮ ನಿಯಮ ಪಾಲಿಸಿ ವ್ರತ ಯಜ್ಞಯಾಗಾದಿಗಳ ಮಾಡಿ ಪ್ರಸಾದ, ತೀರ್ಥ, ನೈವೇದ್ಯ ಸ್ವೀಕರಿಸಿದರೆ ಸಂತಸದ ಹೊನಲು ಹರಿಯುವುದು……’ ಎಂದು ವರ್ಣಿಸುತ್ತಾ ನಿಂತ.

ಕವಿಯೊಬ್ಬ ಎದ್ದು ನಿಂತು ‘ಕಾವ್ಯ, ನಾಟಕ, ಕಾದಂಬರಿ, ಹಾಸ್ಯ ಪ್ರಸಂಗಗಳ ರಸವತ್ತಾಗಿ ರಚಿಸಿ, ರಸಿಕ ಶಿಖಾ ಮಣಿಗಳಿಂದ ಹೊಗಳಿಸಿಕೊಳ್ಳುವುದರಿಂದ ಸಂತಸದ ಚಿಲುಮೆ ಚಿಮ್ಮುವುದು! ಚೈತನ್ಯದ ಚಿಲುಮೆ ಹೊಮ್ಮುವುದು! ಸ್ಫೂರ್ತಿಯ ಚಿಲುಮೆ ರಂಗೇರುವುದು…..’ಎಂದು ಕಾವ್ಯಮಯವಾಗಿ ಸಂತಸದಿ ಹೇಳಿದ.

ಅಷ್ಟರಲ್ಲಿ ಅಲ್ಲೇ ಇದ್ದ ಬೀರಬಲ್ಲ ಮಹಾಶಯ ಎದ್ದು ನಿಂತು ಮಹಾರಾಜರಿಗೆ, ಸಭೆಗೆ ವಂದಿಸಿ, ’ಮಹಾಪ್ರಭು…..ಸಂತಸದ ಚಿಲುಮೆ ಹರಸಿ ನಾವ್ಯಾರು ಅಡವಿಗೊಡಬೇಕಾಗಿಲ್ಲ, ಖಾವಿ ಧರಿಸಬೇಕಾಗಿಲ್ಲ. ಗುಡಿಗುಂಡಾರ ಸುತ್ತಿ ಪುಣ್ಯನದಿ ತೀರ್ಥಗಳಲ್ಲಿ ಮುಳಗಬೇಕಾಗಿಲ್ಲ. ಮೂಗು ಹಿಡಿದು ಕಣ್ಣುಮುಚ್ಚಿ ತಪಸ್ಸು ಮಾಡಬೇಕಾಗಿಲ್ಲ! ಪ್ರತಿನಿತ್ಯ ಮನಸ್ಸಿನಲ್ಲಿ ಚಿಂತನಾ ಮಂಥನ ನಡೆಸಬೇಕು. ಸಂತಸದ ಚಿಲುಮೆ ನನ್ನಲ್ಲಿಯೇ ಇದೆ ಎಂಬ ಆತ್ಮವಿಶ್ವಾಸ ಬೇಕು. ತಾಳ್ಮೆ, ಆತ್ಮ ತೃಪ್ತಿ, ದಮೆ, ಕರುಣೆ, ಶಾಂತಿ, ದಾನಧರ್ಮ-ಕ್ಷಮೆ ಇರಬೇಕು! ನಿಸ್ವಾರ್ಥ ಜೆವನದಲ್ಲಿ ತ್ಯಾಗದಲ್ಲಿ ಸಂತಸದ ಚಿಲುಮೆ ಇದೆ. ಕಾಣಬೇಕು… ಅದು ದಿನೇ ದಿನೇ ನಮಗೆ ಗೊತ್ತಾಗುತ್ತಾ ಹೋಗುತ್ತದೆ…’ ಎಂದು ವಿವರಿಸುತ್ತಾ ನಿಂತ.

ಅಲ್ಲಿದ್ದವರೇನು….. ಸ್ವತಃ ಅಕ್ಬರ್ ಮಹಾರಾಜ ಬೀರಬಲ್ಲನ ವಿವರಣೆಗೆ ಸಂತಸ ಉಕ್ಕಿ ಬಂತು. ಎಲ್ಲರೂ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿದರು.

ಅಲ್ಲಿಗೆ ಅಂದಿನ ಸಭೆಯು ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...