Home / ಕವನ / ಕವಿತೆ / ವಾಸ್ತವ

ವಾಸ್ತವ

ಚಿತ್ರ: ದೇವನಾಥ
ಚಿತ್ರ: ದೇವನಾಥ

ಪಾಪದವರು ನಾವು
ಅದೆಶ್ಟೋ ಕೋಪ, ತಾಪದಲಿ,
ಪಾಪದ ಕೊಡ ತುಂಬಿ, ತುಂಬಿ…
ಈ ಊರು, ಕೇರಿ, ಹರಿದಿದೆ!
ಎದುರು ಬಿಸಿಲಿಗೆ, ಕಬ್ಬಿಣದಾ ಅದಿರಾಗಿ, ಕಾದಿದ್ದೇವೆ!
ಹಾದು ಹೋಗುವವರ, ಕಾಲುಗಳ ಕಾದು ಕಾದು…
ಕಣ್ಣುಗುಡ್ಡೆ ಒಡೆದೂ…
ಬಳಲಿ ಬೆಂಡಗಿ, ಕರಕಾಗಿ, ಅಲ್ಲೆ ಕುಂತಿದ್ದೇವೆ!
ಕುಂತಿ ಪುತ್ರರಾಗಿ, ಭರತ, ಶತೃಜ್ಞರಾಗಿ-
ಸೂತಕವಿನ್ನು ಕಳೆದಿಲ್ಲ! ಅಡಿಗೆ ಮನೆಗೆ ಕರೆದಿಲ್ಲ!!
*  *  *

ಕರೆಬಾನಿಲೆದ್ದಿ, ತೊಳೆದ ಕೈಗಳ, ಈ ನೀಸುತನ
ಏಳುಕೆರೆ, ಸಪ್ತ ಸಾಗರದಲೆದ್ದಿ, ತೊಳೆತೊಳ್ದೆರಿನ್ನು ಕಳೆದಿಲ್ಲ!
ದೇಶ ವಿದೇಶದ, ಸುವಾಸನೆಯ ಸುಗಂಧ ದ್ರವ್ಯಲದ್ದಿ ತೀಡಿ, ತಿಕ್ಕಿದರೂ…
ಆ ಜಿಗುಟು, ಕಮಟು, ಮಡ್ಸು ವಾಸನೆಗೆ ವಿಮುಕ್ತಿಯಿಲ್ಲ!
ಶತಶತಮಾನದ ಈ ಶಾಪ, ಯಾವ ಜನ್ಮದಲ್ಲಂಟಿತೋ?!
ಹರಳಯ್ಯನಿಂದಾ ಮೊದಲುಗೊಂಡು,
ರೆಂಪಿಗೆಯಾಡಿಸಿದವರ ಪಾಡು,
ಹಾಡಾಗಿ, ಅರಣ್ಯರೋಧನವಾಗಿ, ಹರಿದಿದೆಯಲ್ಲಾ?!
ಕಲ್ಯಾಣದಣ್ಣಗಳಿರಾ…
ಚಪ್ಪಲಿ ಪೂಜೆ ಯಾಕಂದಿರಾ??
ಹರಳಯ್ಯ, ಕಲ್ಯಾಣಮ್ಮನ, ತೊಡೆ ಚರ್ಮದಿ, ಮಾಡಿದ ಕೆರಗಳಿಗೆ,
ಕರ ಮುಗಿದ, ಅಣ್ಣಬಸವಣ್ಣನವರು!!
ಈ ಮೆಟ್ಟು ಮೆಟ್ಟಿದ ತಪ್ಪಿಗೆ
ಕಾಲುರಿ, ಕಣ್ಣುರಿ, ಅಂಗಾಂಗ ಉರಿ ಉರಿ ಎದ್ದು…
ಕರೆಬಾನಿಲಿ ಮುಳುಗೆದ್ದು,
ಕೆರಗಳಿಗೆ ಮನ ತಂದ ಮಾನವಂತ!!
ಶೀಲವಂತನ ಮದುವೆಗೆ, ದಂಗೆ ಎದ್ದ ಜನ,
ಅದೇ ಕಾಲ್ಮರಿಗೆ, ಶರಣೆಂದದ್ದು ಸರಿಯೇ??
*  *  *

ಊರುಕೇರಿ, ಜಗಲಿ ಮೇಲೆ…
ಸಣ್ಣ, ದೊಡ್ಡವರ, ಕಾಲ ಕೆಳಗೆ, ಕಣ್ಣಸೆಳೆವ,
ಗುಡಿ, ಚರ್ಚು, ಮಸೀದಿ, ಅಡಿಗೆ ಮನೇಲಿ,
ಕಾಲ ಮೇಲೆ ಕಾಲನೇರಿ, ಮೆರೆವ ಕಾಲ್ಮಾರಿಗಳೇ…
ನಾವಿನ್ನೂ ಹೊರಗೇ ಊರ ಹೊರಗೇ…!!
ಕೆರಗಳಿಗೆ, ಕರ ಮುಗಿವ, ಹಿರಿಜನರೇ…
ಈ ಹರಿಜನರ, ಕಡೆಗಣಿಸಿರುವುದು, ಸರಿಯೇ??
ಓ… ಹರಿಯೇ… ಇದು ಸರಿಯೇ?!
ಯುಗ ಯುಗಳೆ ಕಳೆದರೂ…
ಕೆರಗಳ ಪರ್‍ಯಾಯವೆಲ್ಲಿದೆ ಹೇಳಿ??
ಕೆರಗಳ ಮಾಡಿದವರ,
ಕರ ಪಿಡಿದು, ಎತ್ತಿದವರುಂಟೇ??
ಪುರಾಣ, ಪುಣ್ಯಪುರುಷರು ಕೆರಗಳಿಗೆ ಕರಮುಗಿದು,
ಗದ್ದುಗೆ ಮೇಲಿಟ್ಟು, ಪೂಜಿಸಿ ಪುನೀತರಾಗಿದ್ದು ಸುಳ್ಳೇ??
ಕೆರಗಳಿಗೆ ಗುಡಿಕಟ್ಟಿ, ಕರ ಮುಗಿವದು ತಿಳಿಯದೇ?
ಅಣ್ಣ ಬಸವಣ್ಣ, ಕೆರಗಳ ಶಿರದಲಿ ಹೊತ್ತು, ಮೆರೆದಾಡಿದ್ದು ಪುರಾಣವೇ??
ಸಭೆ, ಸಮಾರಂಭ, ವಿಧಾನ ಸೌಧದಲಿ…
ಕೆರಗಳು ಕರದಲ ರಂಗೇರಿ, ಹಾರಾಡಿ, ತೂರಾಡಿದಾಗ,
ಮಾದಿಗರ ಶ್ರಮ ಸಾರ್ಥಕವಾಗಿ, ಧನ್ಯರಾಗಿ…
ಪುಟ್ಟ ಕಂದನ ಎತ್ತಿ, ಮುದ್ದಾಡಿದ ಖುಷಿ ಕೇರಿಗರಿಗೆ!!
*  *  *

ಈ ನಮ್ಮ ಹೊಲಸು ಕೆರಗಳಿಗೆ
ಕಡೆಯಾದ ಬುದ್ಧಿ ಕಂಡು ಕೆರಳಿ, ಇವರ…
ಕಿತ್ತೋದ ಕೆರಗಳೆಂಬೆ!
ಸವಕಲು ಮನಸ್ಸೆಂಬೆ!
ಕಿಲುಬುಗಟ್ಟಿದ ಜನರೆಂಬೆ…
…ಮುಳ್ಳುರೆಂಬೆಯೆಂಬೆ!!
ಮಟ ಮಟ ಮಧ್ಯಾನದ ಮಾದಿರೆಂಬೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...