Home / ಕವನ / ಕವಿತೆ / ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...