Home / ಕವನ / ಕವಿತೆ / ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...