Home / ಕವನ / ಕವಿತೆ / ಅಡ್ಡಗೋಡೆ ದೀಪಗಳು

ಅಡ್ಡಗೋಡೆ ದೀಪಗಳು

ನಿನ್ನೆಮೊನ್ನೆಗಳ ಬದುಕೇ ಚೆನ್ನಾಗಿತ್ತು ಬಿಡಿ,
ಸುಬ್ಬಾರಾವ್ ವೆಂಕಟಾಚಲಶಾಸ್ತ್ರಿಗಳ ಕಟ್ಟೆಚರ್ಚೆಗೆ
ಹಾದಿಹೋಕ ಹನಮಂತು ಕರಿನಿಂಗ ನಕ್ಕದ್ದು
ಲಕ್ಕಿ(ಅಡ್ವೋಕೇಟ್ ಲಕ್ಷ್ಮೀ)
ರಾಮಿ(ಡಾ|ರಾಮೇಶ್ವರಿ) ಭರ್ರೆಂದು ಕಾರು ಓಡಾಡಿಸಿದ್ದು
ನೋವು ರಕ್ತದೊತ್ತಡದ ಅವರೆದೆಗೆ
ಮತ್ತೆ ಮತ್ತೆ ಶೂಲ ತ್ರಿಶೂಲ!

ಗ್ರಹಣ ವೇದೋಪನಿಷತ್ ಪಠಣದೊಳಗೆ
ಜನಿವಾರ ಬದಲಾಯಿಸಿ ಮಡಿಯಾಗುತ್ತಿದ್ದರೆ
ಕ್ಲಬ್ಬಿನ ತುಂಬೆಲ್ಲ ಹುಳಿವಾಸನೆಗೆ
ಕರಿದ ಮಾಂಸಕ್ಕೆ ಡಿಸ್ಕೋ ತಾಳ
ಮಕ್ಕಳು ಮೊಮ್ಮಕ್ಕಳು ಅವರ ಹೆಂಡತಿಯರು
ಸರ ಬಳೆ ಮೂಗುತಿ ಸೀರೆಗಳ ಮಾತು
ಆಚೆ ಕುಡುಕರಿಗೆ ಬಾಯ್ತುಂಬ ನಗು.

ತುಕ್ಕು ಹಿಡಿದ ಲಾಂದ್ರ ಫಿಲಿಪ್ಸ ಬಲ್ಬುಗಳ
ವಿಚಾರಧಾರೆಗಳ ತಿಕ್ಕಾಟ ಹೊಕ್ಕಾಟಕೆ
ಒಳಗೊಳಗೆ ಅಳು ನಗುವುಗಳ ಬಿಸಿಲುಮಳೆ
ವಿದೇಶಿ ಐಶಾರಾಮಿ ಸವಲತ್ತು
ಬೇಕಾದಾಗೆಲ್ಲ ಸಾಧಿಸಿಕೊಳ್ಳುವ ಡೊಳ್ಳುಗಳು
ಸಂಜೆ ಭಾಷಣ ಬಹಿರಂಗ ಸಭೆಗಳಲಿ
ತೋರಿಕೆಗೆ ಟೆಬಲ್‌ಕುಟ್ಟಿ
ನೀತಿಗಳ ಬಗೆಗೆ ಮಾತನಾಡುವ ಅಡ್ಡಗೋಡೆಗಳು.

ಹಸಿವು ನೀರು ಬರಗಾಲಕೆ ಹಣಮಾಡುವ
ಯೋಜನಾ ಶಿಬಿರಗಳ ಉದ್ದನೆಯಪಟ್ಟಿ-
ಇವುಗಳಿಗೆ ಮನೆಗೆ ಬಣ್ಣ ಸುಣ್ಣ
ಸೋಫಾ ಬದಲಿಸಿಕೊಳ್ಳುವ ಸಂಭ್ರಮದ ಸಮಯ
ಇಪ್ಪತ್ತೆಂಟು ಇಂಚಿನ ಟಿ. ವಿ. ಹಾಕಿ
ಜಗತ್ತನ್ನೇ ನೋಡುವ ಇವುಗಳೆಲ್ಲಿ
ಗುಡಿಸಲಲ್ಲೇ ಕೊಳೆತು
ಸಾಯುತ್ತೇವೆನ್ನುವ ಅವುಗಳೆಲ್ಲ
ಜಾಗತೀಕರಣ ಉದಾರೀಕರಣದ ಬಗೆಗೆ
ಉದ್ದುದ್ದ ಅಡ್ಡಡ್ಡ ಮಾತನಾಡುವ
ಅಡ್ಡಗೋಡೆ ದೀಪಗಳು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...