Home / ಕವನ / ಕವಿತೆ / ಶಾಂಡಿಲೀಯರ್

ಶಾಂಡಿಲೀಯರ್

ನಡುರಾತ್ರಿಗೆ ಇನ್ನೇನು ಸ್ವಲ್ಪೇ ಸಮಯ –
ಮೇಜುವಾನಿಯ ಸಿಹಿ ಕಹಿಯಾಗಿ
ದೀಪ ಗುಚ್ಛಗಳೆಲ್ಲ ಚಿಲ್ಲಾಪಿಲಿಗಿಯಾಗುತ್ತವೆಂದು
ಯಾರಿಗೂ ಗೊತ್ತಿರಲಿಲ್ಲ.

ಮುಗುಳು ನಗುತ ನಿಸರ್ಗದಲಿ
ಅದ್ದಿ ಬಿಡುವ ನೇಪಾಳ
ಎಷ್ಟೊಂದು ಸಂತಸ ಸಡಗರ ಅರಮನೆಯೊಳಗೆ
ದೊರೆ ಬೀರೇಂದ್ರ ರಾಣಿ ಐಶ್ವರ್ಯ
ಯುವರಾಜ ದೀಪೇಂದ್ರ
ಎಂತೆಂತಹ ರತ್ನಗಳು
ಕಾಠ್ಮಂಡು ಒಡ್ಡೋಲಗಕೆ

ರಾಜಗಾಂಭೀರ್ಯದ ಹುಡುಗಿ ತರುವ ಆಸೆ
ರಾಜಮಾತೆಗೆ,
ಪ್ರೀತಿಸಿದ ಹುಡುಗಿ ಬೇಕೇ ಬೇಕು
ಮೀಸೆ ಮೂಡಿದೆ ಮದೋನ್ಮತ್ತ
ಯುವರಾಜನಿಗೆ.
ಮಾತಿಗೆ ಮಾತು ವರಸೆ ಬೆಂಕಿ.

ವಿಧಿಯೋ ವಿಚಿತ್ರ,
ಪ್ರೇಮದೈಸಿರಿಗೆ ಕಳಚಿಕೊಳ್ಳದ ಸಂಕೋಲೆ,
ಮಾತು ಚರ್ಚೆಗಳಿಗೆಲ್ಲ ಆವೇಶ
ಗುಂಡಿಗೆಯ ರಕ್ತದ ದುಡುಕುತನಕೆ
ಕಿಚ್ಚುಹೊತ್ತಿ ಸುಡುವ ಕೆನ್ನಾಲಿಗೆ.

ಕಾಲನ ಅವೇಶದ ಮುಂದೆ
ಮತಿಹೀನ ಯುವಕ
ರಾಜಗಾಂಭೀರ್ಯ ಧಿಕ್ಕರಿಸಿದ್ದು
ಯಮನ ಅಟ್ಟಹಾಸಕೆ ಕುಮ್ಮಕ್ಕು
ಕಗ್ಗತ್ತಲೆಯ ಕೆಸರಲಿ ಸಿಕ್ಕ ಕಾಲಕ್ಕೆ
ಚಲಿಸದ ಜಡತ್ವ.

ದವಡೆಮೀರಿದ ಕೋಪಾಗ್ನಿಯಲಿ
ಯುವರಾಜ ಕೈಗೆತ್ತಿದ ಬಂದೂಕು
ನುಗ್ಗಿ ನುಗ್ಗಿ ಬಂದ ಗುಂಡಿನಮಳೆಗೆ
ಒಂದೊಂದೇ ಕಳಚಿದವು
ಕಿರೀಟ ರತ್ನಗಳು,
ನೆತ್ತರ ಮಡುವಿನಲಿ ಮುಳುಗಿ
ಕಗ್ಗತ್ತಲ ಕಣಿವೆಯಲಿ ಹೆಣವಾದವು

ನೇಪಾಳದ ಅಂಗಳದ ತುಂಬೆಲ್ಲ
ರಕ್ತದೋಕುಳಿ ಕಿರುಚಾಟ ಹಾಲಾಹಲ
ಅರಮನೆಯ ದೀಪಗಳೆಲ್ಲ ಒಡೆದು ನುಚ್ಚುನೂರು
ಸುತ್ತೆಲ್ಲ ಕಪ್ಪು ಕತ್ತಲೆ!

(ದೇವಯಾನಿ ರಾಣಾಳ ಪ್ರೇಮಪಾಶಕ್ಕೆ ಸಿಲುಕಿದ ನೇಪಾಳದ ಯುವರಾಜ ಅವಿವೇಕಿಯಾಗಿ ಗುಂಡು ಹಾರಿಸಿ ಎಲ್ಲರನ್ನೂ ಕೊಂದು ತಾನೂ ಸತ್ತುಹೋದ)
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...