Home / ಕವನ / ಕವಿತೆ / ಸತ್ಯದ ನೆತ್ತಿಯ ಮೇಲೆ

ಸತ್ಯದ ನೆತ್ತಿಯ ಮೇಲೆ

ಸತ್ತು ಬಿದ್ದಿದ್ದಾನೆ ಒಬ್ಬ VIP
ಬೆಳ್ಳಂ ಬೆಳಗಾಗುವುದರಲ್ಲಿ
ಆತ ಯಾರೇ ಇರಲಿ
ದೊಡ್ಡ ಆಫೀಸರ್ ಬಿಸಿನೆಸ್‌ಮ್ಯಾನ್
ರಾಜಕಾರಣಿ ಸಾಹಿತಿಯೂ ಇರಬಹುದು
ನೀವು ತಿಳಿದುಕೊಂಡಂತೆ.

ಕುಡಿಯುವದು ಹೆಣ್ಣುಗಳಿಗೆ ಬೆನ್ನುಹತ್ತುವದು
ಅದು ಅವನಿಗೆ ಕೆಟ್ಟ ಚಟ ಇತ್ತಂತೆ
ಹೆಂಡತಿ ಒಣ ಕಣ್ಣು ಒತ್ತಿ ಒತ್ತಿ ಹೇಳಿ
ಏನೇನೊ? ತೋಡಿಕೊಳ್ಳುತ್ತಾಳೆ.

ಅವನು ಒಂದು ರಾತ್ರಿ ಕುಡಿಯುವ
ಜಾನಿವಾಕರ್ ವೊಡ್ಕಾದ ಹಣದಲ್ಲಿ
ಅವನ ಹಳ್ಳಿಯ ಹತ್ತು ಜನರ ಮದುವೆಮಾಡಿ
ಪುಣ್ಯಕಟ್ಟಿಕೊಳ್ಳಬಹುದಿತ್ತಂತೆ.

ಅವನು ಮಾಡುವ ಭರ್ಜರಿ ಪಾರ್ಟಿಖರ್ಚಿನಲಿ
ಅವನೂರಿನ ದೇವರ ಜಾತ್ರೆ
ಅದ್ದೂರಿಯಾಗಿ ಮಾಡಿ ಸಾವಿರ ಜನರಿಗೆ
ಉಣಬಡಿಸಬಹುದಿತ್ತಂತೆ.

ಅವನು ಬೆನ್ನುಹತ್ತುವ ಹೆಣ್ಣುಗಳನೆಲ್ಲ
ಸೋದರಿಯಂತೆ ನೋಡಿಕೊಂಡಿದ್ದರೆ
ಅವರವರು ಮರ್ಯಾದೆಯಾಗಿದ್ದು
ಸಂಸಾರಸ್ಥೆಯರಾಗಿರುತ್ತಿದ್ದರಂತೆ.

ಏರಿಳಿಕೆಯ ಧ್ವನಿಯಲ್ಲೂ
ಸರಳವಾಗಿ ಉದುರುವ ಮಾತುಗಳು.
ಮೌನ ಬಂಗಾರ ಎಂದು ಗೊತ್ತಿದ್ದರೂ
ಹಿತ್ತಾಳೆ ಮಾಡಿ ಕಿಲುಬಲು ಬಿಟ್ಟ
ಗೋಳಾಡಿದಳು.
ಕಾಡು ಬೆಕ್ಕು ಎನ್ನಲೇ
ತೊಂಡರಗೂಳಿ ಎನ್ನಲೇ
ಕಿಡಿಕಿಡಿಯಾಗುತ್ತಿದ್ದಳು.

ಮಧ್ಯರಾತ್ರಿಯ ಮದಿರಾಣಿಯರು
ಗುಂಡು ಇಳಿಸುವ ಗಂಡಬೇರುಂಡರ
ತೆಕ್ಕೆಗಳ ಸುಖ ಹರಡುತ್ತಲೇ ಇದ್ದಷ್ಟು
ಹೀಗೆಽ ಅಗಾಗ
ಸತ್ತು ಬೀಳುತ್ತಾರೆ ಬಿಡಿ…
——–
‘ಮನುಷ್ಯನ ಗುಣ ಮನಸ್ಸು ಹಿನ್ನೆಲೆಗಳನ್ನು ಅವನ ನಡೆ ನುಡಿಗಳೇ ವಿಶದವಾಗಿ ತಿಳಿಸುತ್ತವೆ’ – ರಾಮಾಯಣ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...