Home / ಕವನ / ಕವಿತೆ / ಮರದ ವ್ಯಥೆ

ಮರದ ವ್ಯಥೆ

ನಿಮ್ಮ ಮನೆಯಂಗಳಕೆ ಗುಲಾಬಿ
ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ
ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ.

ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ
ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ
ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು.
ಬೆಳೆಯುತ್ತಿದ್ದೇನೆ ನಿಮ್ಮ ಮಕ್ಕಳನು
ನೋಡುತ್ತಾ ಆಟ ಆಡುತ್ತಾ,
ಮೈಲಿಗೆ ಅಸಮಾನತೆ ಅನಿಸಿತೋ
ಕೈ ಕತ್ತರಿಸಿದ್ದೀರಿ
ಪೋಲಿ ಹುಡುಗರು ಮತ್ತೊಂದು ಕೈ ಮುರಿದರು.
ಆದರೂ ಮತ್ತೆ ಚಿಗುರಿ ಮರವಾಗಿ ಬೆಳೆದು
ನೆರಳು ಕೊಡುವ ಕನಸುಕಣ್ಣಿನ ಮರ ನಾನು.

ನಾಯಿಹಂದಿಗಳ ಕಚ್ಚಾಟದ ನಡುವೆ
ವಿಷಹೊಗೆಯ ಒದೆತಗಳು ತಿನ್ನುತ
ಬೆಳೆಯುತ್ತಿದ್ದೇನೆ ಇಕ್ಕಟ್ಟಾದ ರಸ್ತೆಯ ಎಡಬಲಕೆ.

ಆದರೇನು!-
ವಿದ್ಯುತ್ ಇಲಾಖೆಯವ ಕಠಿಣ ಹೃದಯಿ
ಕೆಳಗೆ ಕೆಬಲ್‌ಗೆಂದು ಕಾಲುಬೆರಳುಗಳು ಕತ್ತರಿಸಿ
ಮೇಲೆ ತೋಳು ತೋಳುಗಳೂ ಕತ್ತರಿಸಿದ
ಹೃದಯವಂತ ಭಕ್ತರೂ ಕೂಡಾ
ಗಣೇಶ ಮೆರವಣಿಗೆಯ ಲಾರಿಗೆ
ಅಡ್ಡ ಎಂದು ಮತ್ತೆ ಮತ್ತೆ ಮುರಿದು ಎಸಿಯುವದೆ?

ಉರುವಲಕೆ ಲಟಲಟನೆ
ಮುರಿಯುವ ಕೆಲವರ ಖುಷಿಯೊಳಗೆ
ನನ್ನುಸಿರ ಸುಡುವುದು ಗೊತ್ತಾದೀತೆ?

ಈಗ,
ಬಳಲಿ ಬಳಲಿ ಕೃಶವಾಗಿ
ಆಕಾಶಕ್ಕೆ ಮೊರೆಯಿಡುತ್ತ ಮೇಲೇರುತ್ತಿದ್ದರೆ
ಅಲ್ಲಿಯೂ ಗಾಳಿದೇವನ ಹೊಡೆತವೆ?
ಎಷ್ಟೊಂದು ಸಹಿಸಲಿ ನಾನು?
ನಿಮ್ಮ ಮನೆಯ ಮೇಲೆ
ಸ್ಕೂಟರ್ ಕಾರ್ ಕಂಪೌಂಡುಗಳ ಮೇಲೆ
ಬಿದ್ದದ್ದು ನಿಮಗೂ ಒಂದಿಷ್ಟು ಪೆಟ್ಟು ಕೊಟ್ಟದ್ದು
ನನಗೂ ವ್ಯಥೆ, ಹೇಳಿ ಏನು ಮಾಡಲಿ ನಾನು
ನೀವೇ ಮಾಡಿದ್ದು
ಮಾಡಿದ್ದುಣ್ಣೋ ಮಹಾರಾಯಾ.

ಒಂದೈದು ನಿಮಿಷ ಬನ್ನಿ ಬನ್ನಿ
ನಿಮ್ಮ ಕಂಪೌಂಡಿಗೆ, ಸುಂದರ ಟೆರಸ್ಸಿಗೂ
ಅಂಗಾಂಗ ಕೊಚ್ಚಿ ಕೊಚ್ಚಿ ಹಾಕಿ
ಮೊಂಡು ಮಾಡಿದ ಈ
ಕುಷ್ಟರೋಗಿಯನ್ನೋ ಕುಂಟನನ್ನೋ ನೋಡಲು.
ಕಾಡಿನಲಿ ಹುಟ್ಟಿಬೆಳೆದರೂ
ಬಿಡುವುದಿಲ್ಲ ಬಿಡಿ ನೀವು
ಬೆಂಕಿ ಹಚ್ಚುವದು, ಬೇರು ಸಮೇತ ಉರುಳಿಸಿ
ನಿಮ್ಮ ಮನೆಗೆ ಬಾಗಿಲುಮಾಡಿ
ನೀವು ಭಧ್ರವಾಗಿದ್ದು
ನಮ್ಮನ್ನು ಅಭಧ್ರವಾಗಿಸುವವರು.

ದೇವರೇ ಕ್ಷಮಿಸು ಮನುಷ್ಯರನು
ಕಲಿಸು ಪ್ರೀತಿ ಶಾಂತಿ ಸಹನೆ!
————————
‘ಹಿಂದೆ ಬಂದರೆ ಒದಯಬೇಡಿ ಮುಂದೆ ಬಂದರೆ ಹಾಯಬೇಡಿ’- ಗೋವಿನ ಹಾಡು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...