Home / ಬಾಲ ಚಿಲುಮೆ / ಕವಿತೆ / ಪುಟ್ಟನ ಕಚೇರಿ

ಪುಟ್ಟನ ಕಚೇರಿ

ಪುಟ್ಟನ ಮನೆ ಮುಂದೆ ಇದೇನು ಕೂಟ
ಇಷ್ಟು ಬೆಳಿಗ್ಗೆಯೆ ಊರವರ ಕಾಟ
ಕೆಲವರು ಕುಂತು ಕೆಲವರು ನಿಂತು
ಹಲವರು ಹಣಿಕಿ ಉಳಿದವರಿಣುಕಿ
ಹಾಡುತ್ತಿರುವನು ಪುಟ್ಟನು ಎಂದು
ಜನ ಬಂದಿರುವರು ಕೇಳಲು ಇಂದು
ಪುಟ್ಟನ ಗಾಯನ ಒಂದೇ ಸವನೆ
ನಡೆದಿದೆ ಯಾರದೆ ಪರಿವಿಲ್ಲದೆನೆ
ಮಂದ್ರ ಮಧ್ಯಮ ತಾರಕ ಬಿಂದಿಗೆ
ಎಲ್ಲಾ ಶ್ರುತಿಗಳು ಕೃತಿಗಳು ಒಂದಿಗೆ
ತಲೆದೂಗುತಾರೆ ಕೇಳುವ ಜನಗಳು
ಅದೆಂಥ ಭಾವ ತುಂಬಿದೆ ಇವನೊಳು
ಹರಿದರಿದು ಬರುತಿದೆ ಕಣ್ಣೀರ ಧಾರೆ
ದನಿಯೆಂಥ ದನಿಯಿತು ವ್ಹಾರೆ ವ್ಹಾರೆ
ಬಾಲಪ್ರತಿಭೆಯಿವ ಚೆಂಬೈಗೂ ಸಮ
ಇವನೆದುರು ಇನ್ನೆಲ್ಲರು ಬರೀ ಸರಿಗಮ
ಚರ್ಚೆ ಸುರುವಾಗುವುದು ರಾಗದ ಕುರಿತು
ಒಬ್ಬೊಬ್ಬರು ತಮ್ಮ ಬುದ್ಧಿಯಂತರಿತು
ಒಬ್ಬನೆಂದರೆ ಇದು ಕೇದಾರ ಗೌಳ
ಇನ್ನೊಬ್ಬನ ಹಟ ರೀತಿ ಗೌಳ
ಆಗ ಶುರುವಾಗುವುದು ಭಾರೀ ಜಗಳ
ಯಾಕೆಂದರೆ ಇದು ಮಾಯಾಮಾಳವ ಗೌಳ
ಕೆಲವರಭೇರಿ ಕೆಲವರು ಬಿಲಹರಿ
ದೇವಗಾಂಧಾರಿ ಗೌರಿಮನೋಹರಿ
ಖರಹರಪ್ರಿಯ ನಾಟಿಕುರಂಜಿ
ಆನಂದ ಭೈರವಿ ಪೂರ್ವಕಲ್ಯಾಣಿ
ಮಲಯಮಾರುತ ಪಂತುವರಾಳಿ
ಸಿಂಹೇಂದ್ರಮಧ್ಯಮ ಸಿಂಧುಭೈರವಿ
ಒನ್ಸ್ ಮೋರೆಂದು ಕೂಗಲು ಕೆಲವರು
ಟ್ವೈಸ್ ಮೋರೆಂದು ಇನ್ನೂ ಹಲವರು
ಮೋರ್ ಮೋರೆಂಬ ಗುಂಪೂ ಇತ್ತು
ಈ ಮಧ್ಯೆ ಗಾಯನ ಜೋರಾಗ್ತ ಹೋಯ್ತು
ಆಗಲೆ ಬಂದಳು ಪುಟ್ಪನ ಅಮ್ಮ
ಕೈಯಲಿ ಎತ್ಕೊಂಡು ಅಂಗಡಿ ಸಾಮಾನ್ನ
ಅಯ್ಯೋ ಕಂದಾ ಹಸಿವಾಯ್ತೇನಪ
ಯಾಕಿಂಗಳ್ತೀ ನಂದೇ ತಪ್ಪ
ಕರಕೊಂಡು ಹೋದಳು ಪುಟ್ಟನ ಒಳಕ್ಕೆ
ಕಾಲು ಕಿತ್ತರು ಶ್ರಾವಕರು ಹೊರಕ್ಕೆ
ಇಂತು ಸಂಪನ್ನ ಪುಟ್ಪನ ಕಚೇರಿ
ಹೊಟ್ಟೆಗೆ ಸೇರಲು ಮೂರ್ನಾಲ್ಕು ಪೂರಿ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...