Home / ಕವನ / ಕವಿತೆ / ರಸವಂತಿ

ರಸವಂತಿ

ಇವಳು ಬರುತ್ತಾಳೆ, ಬೆಳಕಿನ ತಂಬಿಗೆ ತುಂಬಿ ತರುತ್ತಾಳೆ,
ಹನಿಹನಿ ಹನಿಸಿ ಹಳ್ಳಹರಿಸಿ ನನ್ನ ಕುದಿಮನವನದರಲ್ಲಿ ತೇಲಿಸುತ್ತಾಳೆ
ಎಳೆಹುಲ್ಲ ಮೆತ್ತೆ ತೊಡೆಯ ಮೇಲೆ ಹೂಗೈಯಿಂದ ತಟ್ಟಿ
ತೊಟ್ಟಿಲ ತೂಗಿ ನನ್ನ ತಲೆಯ ಚಕ್ರಭ್ರಮಣವ ನಿಲ್ಲಿಸುತ್ತಾಳೆ,
ಮಬ್ಬುಗತ್ತಲಲ್ಲಿ ಬೆಂಕಿ ಹೊತ್ತಿಸಿ ಮೈಬೆಚ್ಚಗಿಡುತ್ತಾಳೆ
ನೆಲವನೆಲ್ಲ ನೀಲಿನೀರಲದ್ದಿ ಎರಕಹೊಯ್ದು
ತೊಲೆಕಂಬವಿಲ್ಲದ ಗೋಡೆಬೇಲಿಯಿಲ್ಲದ ಮನೆಯಲ್ಲಿ
ಹೂಹರವಿ ಸಿಂಗರಿಸುತ್ತಾಳೆ
ಕಾಯಕಾಯ ಬೆಸೆದು ಹಣ್ಣಾಗಿಸಿ ರಸವೀಂಟಿಸುತ್ತಾಳೆ
ನಾಡಿ ನಾಡಿಯಲ್ಲಿ ಜೇನ ತೊರೆ ಹರಿಸಿ
ಕಾಯಕಲ್ಪ ತೊಡಿಸುತ್ತಾಳೆ.
ತಾಯಿಯೋ ಪ್ರೇಯಸಿಯೋ ಎಂಬ ಭ್ರಮೆ ಬರಿಸುತ್ತಾಳೆ
ಬೇರಿಂದ ಚಿಗುರಿನವರೆಗೆ ಗೆಜ್ಜೆ ಪೋಣಿಸಿ
ಮೈಯರಳಿಸಿ ರವಷ್ಟೂ ರೋಮವೂ ಮಲಗಗೊಡದೆ
ಹೊಸನಾದ ಗೂಢಗಳಿಗೆ ಕಿವಿದೆರೆಸುತ್ತಾಳೆ
ಕೆಂಡ ಕೆದರಿ ಹೊವರಳಿಸುತ್ತಾಳೆ
ಬೂದಿಯಲ್ಲಿ ಬಂಡಾಯವ ಬಡಿದೆಬ್ಬಿಸಿ
ಜೀವವೂದಿ ಕಾವೇರಿಸುತ್ತಾಳೆ
ಇವಳು ಬರುವುದು ಸುಳುವು ಹತ್ತದೇ ಗೊತ್ತಾಗುತ್ತದೆ
ಇವಳ ಬರುವು ಉಳಿದು ಚಿರವಾಗದೆ
ಮತ್ತೆ ಹೊತ್ತು ಹೋಗುತ್ತದೆ ಹೇಗೋ
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...