Home / ಕವನ / ಕವಿತೆ / ಶಕುನ ಕನ್ಯೆ

ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು
ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು
ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು
ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು
ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು
ಗಂಡಾಂತರದ ಗಂಟು ತುರಬ ಬಿಗಿದಿದ್ದಳು
ಕಣ್ಣಗವಿಯಿಂದ ಮಿಣುಕು ಬೆಳಕನ್ನು ತೂರುತ್ತ
ಬೇಡುತ್ತಿದ್ದಳು
“ಯಾರಮ್ಮ” ನೀನೆಂದೆ
“ದಿಕ್ಕಿಲ್ಲ ಸ್ವಾಮಿ ಅನ್ನ ಕಾಣದೆಷ್ಟೋ ದಿನವಾದವು
ತುತ್ತನ್ನ ನೀಡಿ ಒಂದಿಷ್ಟಾಸರೆ ಕೊಡಿ”
“ನೋಡಿದರೆ ಕುಲೀನೆಯಾಗಿ ಕಾಣುವಿ ಯಾಕೆ ಹೀಗಾದೆ?”
“ನಾನೂ ಮೆರೆದೆ ಉರಿದೆ ಸ್ವಾಮಿ
ಅರಮನೆ ಸುರಮನೆಗಳ ಹೂಹಾಸಿಗೆಯಲ್ಲಿ
ವಿವಿಧ ಭಂಗಿಗಳಲ್ಲಿ ಕುಣಿದೆ ಬಲ್ಲಿದರ ಬೆಲೆವೆಣ್ಣಾಗಿ,
ದೀನದಲಿತರ ಕೇವಲ ಕನಸಕನ್ನೆಯಾಗಿದ್ದ
ನನ್ನೊಂದು ಕಟಾಕ್ಷಕ್ಕಾಗಿ ಬಾಯಿಬಾಯಿಬಿಡುತ್ತಿದ್ದವರೆಷ್ಟೊ ಮಂದಿ
ಕೆಲವರ ಕನಸಾಗಿ ಹಲವರ ಹಂಬಲವಾಗಿ ಹಾರಾಡುತ್ತಿದ್ದೆ
ಅಯ್ಯೋ ಆ ಗತಕಾಲ ವೈಭವವೆಲ್ಲ ಬಿಡಿ
ನನಗೆ ಶನಿಕಾಲ ಬಂತು
ನಾನು ಕಾಲಿಟ್ಟಲ್ಲೆಲ್ಲಾ ಮಸಣವಾಯಿತು
ನನ್ನ ಮುಟ್ಟಿದವರೆಲ್ಲ ದಟ್ಟ ದರಿದ್ರರಾದರು
ನಾನೊಬ್ಬ ಶಕುನ ಕನ್ನೆಯಾದೆ
ಆದರೂ ಕೆಲವರು ನನ್ನ ಕಂಡು
ನಾಲಗೆ ಚಪ್ಪರಿಸಿ ಚೀಪಿ ಒಗೆಯ ಬೇಕೆನ್ನುತ್ತಾರೆ
ನನ್ನ ಅರೆಮೈಗೆ ಬಾಡಿಗೆ ಬಟ್ಟೆಯುಡಿಸಿ ಮೆರೆಸಬಯಸುತ್ತಾರೆ
ನನ್ನ ಉದರವೋ ಬರಿದು
ನನ್ನ ಮನವರಿತು ಒಲವಿಗೊಲಿದು
ಕೂಡ ಬಲ್ಲ ಕೊಡಬಲ್ಲವರೇ ಇಲ್ಲ
ನೀವಾದರೂ….!” ಎಂದಾಗ
ಮೊದಲು ನಾಲಗೆಯಲೂರಿದ್ದ ನೀರು
ಅಲ್ಲೇ ಇಂಗಿ ಪ್ರೇತ ದರ್ಶನವಾದಂತಾಗಿ ‘ಮುಂದೆ ಹೋಗಿ ಬಾ’
ಎಂದು ಬಾಗಿಲು ಬಡಿದುಕೊಂಡೆ
(೨೨-೮-೭೮)
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...