Home / ಕವನ / ಕವಿತೆ / ಶಕುನ ಕನ್ಯೆ

ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು
ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು
ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು
ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು
ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು
ಗಂಡಾಂತರದ ಗಂಟು ತುರಬ ಬಿಗಿದಿದ್ದಳು
ಕಣ್ಣಗವಿಯಿಂದ ಮಿಣುಕು ಬೆಳಕನ್ನು ತೂರುತ್ತ
ಬೇಡುತ್ತಿದ್ದಳು
“ಯಾರಮ್ಮ” ನೀನೆಂದೆ
“ದಿಕ್ಕಿಲ್ಲ ಸ್ವಾಮಿ ಅನ್ನ ಕಾಣದೆಷ್ಟೋ ದಿನವಾದವು
ತುತ್ತನ್ನ ನೀಡಿ ಒಂದಿಷ್ಟಾಸರೆ ಕೊಡಿ”
“ನೋಡಿದರೆ ಕುಲೀನೆಯಾಗಿ ಕಾಣುವಿ ಯಾಕೆ ಹೀಗಾದೆ?”
“ನಾನೂ ಮೆರೆದೆ ಉರಿದೆ ಸ್ವಾಮಿ
ಅರಮನೆ ಸುರಮನೆಗಳ ಹೂಹಾಸಿಗೆಯಲ್ಲಿ
ವಿವಿಧ ಭಂಗಿಗಳಲ್ಲಿ ಕುಣಿದೆ ಬಲ್ಲಿದರ ಬೆಲೆವೆಣ್ಣಾಗಿ,
ದೀನದಲಿತರ ಕೇವಲ ಕನಸಕನ್ನೆಯಾಗಿದ್ದ
ನನ್ನೊಂದು ಕಟಾಕ್ಷಕ್ಕಾಗಿ ಬಾಯಿಬಾಯಿಬಿಡುತ್ತಿದ್ದವರೆಷ್ಟೊ ಮಂದಿ
ಕೆಲವರ ಕನಸಾಗಿ ಹಲವರ ಹಂಬಲವಾಗಿ ಹಾರಾಡುತ್ತಿದ್ದೆ
ಅಯ್ಯೋ ಆ ಗತಕಾಲ ವೈಭವವೆಲ್ಲ ಬಿಡಿ
ನನಗೆ ಶನಿಕಾಲ ಬಂತು
ನಾನು ಕಾಲಿಟ್ಟಲ್ಲೆಲ್ಲಾ ಮಸಣವಾಯಿತು
ನನ್ನ ಮುಟ್ಟಿದವರೆಲ್ಲ ದಟ್ಟ ದರಿದ್ರರಾದರು
ನಾನೊಬ್ಬ ಶಕುನ ಕನ್ನೆಯಾದೆ
ಆದರೂ ಕೆಲವರು ನನ್ನ ಕಂಡು
ನಾಲಗೆ ಚಪ್ಪರಿಸಿ ಚೀಪಿ ಒಗೆಯ ಬೇಕೆನ್ನುತ್ತಾರೆ
ನನ್ನ ಅರೆಮೈಗೆ ಬಾಡಿಗೆ ಬಟ್ಟೆಯುಡಿಸಿ ಮೆರೆಸಬಯಸುತ್ತಾರೆ
ನನ್ನ ಉದರವೋ ಬರಿದು
ನನ್ನ ಮನವರಿತು ಒಲವಿಗೊಲಿದು
ಕೂಡ ಬಲ್ಲ ಕೊಡಬಲ್ಲವರೇ ಇಲ್ಲ
ನೀವಾದರೂ….!” ಎಂದಾಗ
ಮೊದಲು ನಾಲಗೆಯಲೂರಿದ್ದ ನೀರು
ಅಲ್ಲೇ ಇಂಗಿ ಪ್ರೇತ ದರ್ಶನವಾದಂತಾಗಿ ‘ಮುಂದೆ ಹೋಗಿ ಬಾ’
ಎಂದು ಬಾಗಿಲು ಬಡಿದುಕೊಂಡೆ
(೨೨-೮-೭೮)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...