Home / ಕವನ / ಕವಿತೆ / ಶಕುನ ಕನ್ಯೆ

ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು
ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು
ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು
ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು
ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು
ಗಂಡಾಂತರದ ಗಂಟು ತುರಬ ಬಿಗಿದಿದ್ದಳು
ಕಣ್ಣಗವಿಯಿಂದ ಮಿಣುಕು ಬೆಳಕನ್ನು ತೂರುತ್ತ
ಬೇಡುತ್ತಿದ್ದಳು
“ಯಾರಮ್ಮ” ನೀನೆಂದೆ
“ದಿಕ್ಕಿಲ್ಲ ಸ್ವಾಮಿ ಅನ್ನ ಕಾಣದೆಷ್ಟೋ ದಿನವಾದವು
ತುತ್ತನ್ನ ನೀಡಿ ಒಂದಿಷ್ಟಾಸರೆ ಕೊಡಿ”
“ನೋಡಿದರೆ ಕುಲೀನೆಯಾಗಿ ಕಾಣುವಿ ಯಾಕೆ ಹೀಗಾದೆ?”
“ನಾನೂ ಮೆರೆದೆ ಉರಿದೆ ಸ್ವಾಮಿ
ಅರಮನೆ ಸುರಮನೆಗಳ ಹೂಹಾಸಿಗೆಯಲ್ಲಿ
ವಿವಿಧ ಭಂಗಿಗಳಲ್ಲಿ ಕುಣಿದೆ ಬಲ್ಲಿದರ ಬೆಲೆವೆಣ್ಣಾಗಿ,
ದೀನದಲಿತರ ಕೇವಲ ಕನಸಕನ್ನೆಯಾಗಿದ್ದ
ನನ್ನೊಂದು ಕಟಾಕ್ಷಕ್ಕಾಗಿ ಬಾಯಿಬಾಯಿಬಿಡುತ್ತಿದ್ದವರೆಷ್ಟೊ ಮಂದಿ
ಕೆಲವರ ಕನಸಾಗಿ ಹಲವರ ಹಂಬಲವಾಗಿ ಹಾರಾಡುತ್ತಿದ್ದೆ
ಅಯ್ಯೋ ಆ ಗತಕಾಲ ವೈಭವವೆಲ್ಲ ಬಿಡಿ
ನನಗೆ ಶನಿಕಾಲ ಬಂತು
ನಾನು ಕಾಲಿಟ್ಟಲ್ಲೆಲ್ಲಾ ಮಸಣವಾಯಿತು
ನನ್ನ ಮುಟ್ಟಿದವರೆಲ್ಲ ದಟ್ಟ ದರಿದ್ರರಾದರು
ನಾನೊಬ್ಬ ಶಕುನ ಕನ್ನೆಯಾದೆ
ಆದರೂ ಕೆಲವರು ನನ್ನ ಕಂಡು
ನಾಲಗೆ ಚಪ್ಪರಿಸಿ ಚೀಪಿ ಒಗೆಯ ಬೇಕೆನ್ನುತ್ತಾರೆ
ನನ್ನ ಅರೆಮೈಗೆ ಬಾಡಿಗೆ ಬಟ್ಟೆಯುಡಿಸಿ ಮೆರೆಸಬಯಸುತ್ತಾರೆ
ನನ್ನ ಉದರವೋ ಬರಿದು
ನನ್ನ ಮನವರಿತು ಒಲವಿಗೊಲಿದು
ಕೂಡ ಬಲ್ಲ ಕೊಡಬಲ್ಲವರೇ ಇಲ್ಲ
ನೀವಾದರೂ….!” ಎಂದಾಗ
ಮೊದಲು ನಾಲಗೆಯಲೂರಿದ್ದ ನೀರು
ಅಲ್ಲೇ ಇಂಗಿ ಪ್ರೇತ ದರ್ಶನವಾದಂತಾಗಿ ‘ಮುಂದೆ ಹೋಗಿ ಬಾ’
ಎಂದು ಬಾಗಿಲು ಬಡಿದುಕೊಂಡೆ
(೨೨-೮-೭೮)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...