ಕರೆ

ಇವನು
ಸಂತೆಯಲ್ಲಿ ವ್ಯಾಪಾರವಿಲ್ಲದೆ ಚಿಂತಿತನಾದ
ಬದುಕಿನ ತದುಕುವಿಗೆ ಮೈಗೊಟ್ಟ
ಬವಣೆಯ ಭಾರಕ್ಕೆ ಬೆಂಬಾಗಿದ
ದುರ್ವಾಸನೆಗಳಿಂದುಸುರು ಕಟ್ಟಿದ
ಪಾಶಗಳಿಂದ ಹೆಡೆಮುರಿ ಕಟ್ಟಿಸಿಕೊಂಡ
ದಾಸ್ಯದೊತ್ತಾಯದ ಜೀತಕ್ಕೆ ಹೆಗಲನಿತ್ತ
ಸ್ವಾತಂತ್ರ್ಯ ಸಂಕೋಲೆಗೆ ಕಾಲನಿತ್ತ
ನಾಯಿ ನರಿ ಗೂಬೆ ಗೋರಿಲ್ಲಾಗಳ
ಎಳೆದಾಟಕ್ಕೆ ನಜ್ಜು ಗೊಜ್ಜಾದ
ಮೀಸಲಡುಗೆಯ ಹಡಬೆನಾಯಿಗಿಕ್ಕಿ ಬಿಕ್ಕಿದ
ಹಣದೊಡನಾಡಿ ಹಾಣಾಹಣಿ ಹೆಣವಾದ
ಕಾಮನ ಕಣ್ಮುಚ್ಚಾಲೆಯಲ್ಲಿ ಕಣ್ಕಟ್ಟಿ
ಗೋಡೆ ಗೋಡೆ ಹಾಯ್ದು ಗಟಾರಕ್ಕೆ ಬಿದ್ದ
ಭೂತವು ಬೆಂಬತ್ತಿ ಬೇತಾಳವಾದಾಗ ತತ್ತಿಹಾಕಿದ
ನರನಾಡಿಗಳೆಲ್ಲ ಇರುಳೆಲ್ಲ ನರಳಿ ರೋಧಿಸಿದರೂ
ಹಗಲ ಹಗರಣದ ಹಡಬಿಟ್ಟಿ ಬಟ್ಟೆಗಳಲ್ಲಿ
ಮೈತೂರಿಸಿಕೊಂಡ ತನ್ನ ತಾ ಕಳಕೊಂಡ
ಹಲವಾರು ಹೆಜ್ಜೆಗಳಲ್ಲೇ ನಡೆದು
ಎಡವಿ‌ಎಡವಿ ದಾರಿ ತಪ್ಪಿದ
ಕೆಲವರು ತೋರಿಸಿದಲ್ಲಿ ತೆವಳಿ ಬವಳಿಬಿದ್ದ
ಒಲವಿನ ನೆಲೆಗಾಣದೆ ನೆಲುವಿಗೆ ಹಾರಿಹಾರಿ
ನೆಲಕಂಡು ನೊಂದು ಅವಡುಗಚ್ಚಿದ
ಸಲ್ಲದ ಸಿಂಗಾರಕ್ಕೆ ಒಲ್ಲದೆ ಅಣಿಯಾಗಿ
ಹೂಮುಡಿದು ಎಣ್ಣೆಯುರಿಸಿ ಕಾದೂಕಾದೂ
ಗಂಡ ಬಾರದೆ ಕಂಗಾಲಾದವಳಂತಾದ
ಅರ್ಥವಿಲ್ಲದ ಮಂತ್ರವೂದಿ ಅನರ್ಥದ ಹೊಗೆ‌ಎಬ್ಬಿಸಿ
ತತ್ವವಿಲ್ಲದ ತಂತ್ರದಲ್ಲಿ ತಂತಿಯಿಲ್ಲದ ತಂಬೂರಿ ಮೀಟಿದ
ದಿಕ್ಕೆಳೆದ ಕಡೆ ನಡೆದು ದಿಕ್ಕೆಟ್ಟ
ಜೀವನವು ಸಾವಿಗಿಂತ ಕಡೆಯಾದಾಗ
ಮನೆ ಮಸಣದಲ್ಲೋ ಗುಡ್ಡ ಗುಡಿಯಲ್ಲೋ
ಹೊಲ ಹಾದಿಯಲ್ಲೋ ನೆಲಜಲದಲ್ಲೋ
ಕೊನೆಗೊಮ್ಮೆ ಒಳಗಿನಾಳದಿಂದ
ಅಖಂಡ ಗೂಢಗರ್ಭಮೂಲದಿಂದ
ಕರೆಯೊಂದು ಕೇಳಿ ಬಂತು
ಈ ಕರೆಗಳಿಗೆ ಎಲ್ಲರೂ ಕಿವಿದೆರೆದಿದ್ದರೆ
ಇವನು ಕಿವುಡಾಗಿದ್ದ
ಆ ಕರೆಗೆಲ್ಲರೂ ಕಿವುಡಾಗಿದ್ದರೆ
ಇವನು ಕಿವಿದೆರೆದಿದ್ದ ಕಾಣದಿದ್ದುದಕೆ ಕಣ್ತೆರೆದಿದ್ದ
(೨೩-೪-೭೪)
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...