Home / ಕವನ / ಕವಿತೆ / ನಂಬಿಕೆ

ನಂಬಿಕೆ

ಇಲ್ಲಿ ಹರಿಹರರ ಪರದಾಟ
ಇಂದ್ರಾದಿಗಳ ಬಯಲಾಟ
ಬಂಡಾಟಗಳು ನಡೆಯುತ್ತಿವೆ
ಹಳಸಿ ಹಿಸಿದ ದಾರಗಳ ಸುತ್ತಿಕೊಂಡು
ಕಪ್ಪೆ ವಟಗುಟ್ಟುತ್ತಿವೆ
ನರಿತಂತ್ರ ಮಂತ್ರಿಸುತಿವೆ
ಟ್ರೇಡು ಮಾರ್ಕುಗಳ ಬಳಿದ
ಬಕಧ್ಯಾನ ಸಾಗಿದೆ ಮೀನ ಮಂದೆ ಮುಂದೆ
ಮಡಿ ಮಾಡಿ ಮಾಡಿ ಮೈ ಜಿಡ್ಡುಗಟ್ಟಿದೆ
ಒಳಗೂಡು ಹುಳಹತ್ತಿದೆ
ಪೀಠಗಳಡಿ ಇಲಿ ಹೆಗ್ಗಣಗಳ ರಾಜ್ಯಭಾರ ನಡೆದಿದೆ
ಹಳೆ ಹೆಬ್ಬೊತ್ತಿಗೆಗಳಿಗೆ ಗೆದ್ದಲು ಹತ್ತಿದೆ

ನೆಮ್ಮಿದ ಬಳ್ಳಿ ಬಾಡಿ ಒಣಗಿ ಜೋತಿದೆ
ಅದನ್ನು ನೆಮ್ಮಿದರಂತೂ ಮಣ್ಣೇಗತಿ
ಆಸರೆಗೆಂದು ಗುಡಿ ಹೊಕ್ಕರೆ
ಜೀರ್ಣವಾಗಿ ಕುಸಿದು ಕಲ್ಲು
ತಲೆ ಮೇಲೆ ಬಿದ್ದು ಸಮಾಧಿಯಾದೀತೆಂಬ ಭಯ

ನಂಬಿಕೆಗೆ ಅಂಬರದಿಂಬು ಬೇಕು
ಆಕಾಶದವಕಾಶ ಬೇಕು
ಭೂಮಿಯ ಭಾರಬೇಕು
ಗ್ರಹ ತಾರೆಗಳನಂತತೆ ಬೇಕು
ವಿಶ್ವಗಳನೊಳಗೊಂಡ ಬೇರು ಬುಡ
ಕೈಕಾಲು, ಆಳ ಅಗಲ, ಏರು-ಪಾರ ಬೇಕು

ಅಂಥದೇನಾದರೂ ಇದೆಯೇ? ಇದ್ದರೆ
ಅಳವಿಗಳವಡದುದನ್ನು
ನಂಬಬೇಕು ಹೇಗೆ?
(೨೬-೨-೭೬)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...