Home / ಕವನ / ಕವಿತೆ / ಕನಸು

ಕನಸು

ಅಪ್ಸರೆಯರೊಡನೆ ಚಂದ್ರಲೋಕದಲ್ಲಿ ತಿರುಗಾಡಿ
ಆನಂದಿಸುವ ಕನಸನ್ನು
ಚಿರುಗುಮೀಸೆಯ ಹುಡುಗ ಕಾಣದಿದ್ದರೆ,

ಒಂದು ಮನೆ, ಒಂದು ಆಸರೆಯ ಮರ, ಬಳ್ಳಿಗೆ ಹೂವು ಹಣ್ಣು,
ತನ್ನ ಅಂಗಳದ ರಂಗೋಲಿ, ತನ್ನ ಸರದಾರನೊಡನೆ ಬದುಕಿನ
ಹೋಲಿರಂಗು,
ಇವನೆಲ್ಲ ಮೊಗ್ಗು ಹುಡುಗಿ ಕನಸದಿದ್ದರೆ,

ಕೂಸಿನ ಹಾಲು ನಗು, ಜೇನು ತೊದಲು,
ಅವ್ವು-ಅಮ್ಮಿ ಇವನೆಲ್ಲ
ಗರ್ಭಿಣಿಯು ಕನಸು ಕಾಣದಿದ್ದರೆ,

ತನ್ನ ಮಗನ ನಿಲುವಂಗಿ-ಡಿಗ್ರಿ, ಆಫೀಸರ್ ಗಿರಿ
ಅವನ ಸೂಟು-ನೋಟು
ಇವನ್ನು ತನ್ನ ಮೀಸೆ ತಿರುವಿನಲ್ಲಿ ಬೀಗಿ ತಂದೆಯು ಕಲ್ಪಿಸದಿದ್ದರೆ,

ತನ್ನ ಮಗನ ಹೆಂಡತಿ ತನ್ನನೋಲೈಸಿ ಸೇವೆ ಮಾಡಿ,
ಬಯ್ದರೂ-ತಿವಿದರೂ ತಲೆ‌ಎತ್ತದೆ ಬಾಗಿ ನಡಕೊಳ್ಳುವ
ಅತ್ತೆತನವ ತಾಯಿ ತನ್ನ ಮಗುವಿನ ಮುಂದೆ ಊಹಿಸಿ ಉಬ್ಬದಿದ್ದರೆ,

ಇಷ್ಟೆಲ್ಲ ಆಗಿ ತನ್ನ ಒಣಕೈಯಲ್ಲಿ
ಒಂದು ಹಸುಗೂಸು ತನ್ನಂತೆ ಬೊಚ್ಚು ಬಾಯಿ ತೆರೆದು
ಹಾಲುಗುಳುತ್ತ ಜಾಜಾ ಜೀಜೀ ಎಂಬುದನ್ನು
ಮೊಮ್ಮಗನ ಪಡೆಯದ ಅತ್ತೆ ಆಶಿಸದಿದ್ದರೆ,

ಕೂಸಾಗಿ-ಬೆಳೆದು-ನಂತರ
ಜೋಡಿ ಪಾರಿವಾಳಗಳಂತೆ ಒಂದು ಪುಟ್ಟ ಹೆಣ್ಣಿನೊಡನೆ ತನ್ನ
ಮುಂದೆ ಹಸೆಮೇಲೆ ಕುಳಿತಿರುವುದನ್ನು
ಮುದುಕಿ ತನ್ನ ಮಬ್ಬುಗಣ್ಣಿನಿದಿರು ಕಟ್ಟಿಕೊಳ್ಳದಿದ್ದರೆ

ಮನುಜರೆಲ್ಲ ತಮಗಿರುವುದಕ್ಕಿಂತ
ಇನ್ನು ಹೆಚ್ಚು ಹೆಚ್ಚು ಸುಖಗಳಿಗಾಗಿ ಹಂಬಲಿಸಿ-ಕನಸಿ-ನನಸದಿದ್ದರೆ
ಈ ಬದುಕಿನಲ್ಲಿ ಬಾಳಬೇಕು ಎಂಬಂಥಾದ್ದು ಏನಿದ್ದಿತು
ಇಲ್ಲ-ಬದುಕನ್ನು ನಡೆಸುವುದೇ ಕನಸು
ನಾಳಿನ ಸವಿಗನಸು
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...