Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...