Home / ಲೇಖನ / ಇತರೆ / ಬದುಕೆಂಬ ರೈಲು…

ಬದುಕೆಂಬ ರೈಲು…

Railuಪ್ರಿಯ ಸಖಿ,
ರೈಲು ಕ್ಷಣಕಾಲ ಇಲ್ಲಿ ನಿಂತಿದೆ. ಹತ್ತುವವರು ಹತ್ತಿದ್ದಾರೆ. ಇಳಿಯುವವರು ಇಳಿದಿದ್ದಾರೆ. ರೈಲು ಹತ್ತಿದವರಿಗೆಲ್ಲಾ ಸೀಟು ಸಿಕ್ಕಿಲ್ಲ. ಕೆಲವರು ನಿಂತಿದ್ದಾರೆ. ಕೆಲವರು ಕುಳಿತಿದ್ದಾರೆ. ಅದರಲ್ಲೂ ಅದೆಷ್ಟೊಂದು ರೀತಿಯ ಜನ ! ಕುಳಿತವರಲ್ಲಿ ಚಿಂತೆ ಇಲ್ಲದೇ ಆರಾಮ ನಿದ್ದೆಯಲ್ಲಿದ್ದಾರೆ. ಮತ್ತೆ ಕೆಲವರು ಇಳಿಯುವ ತಾಣ ಬಂತೇ ಎಂದು ಚಡಪಡಿಸುತ್ತಿದ್ದಾರೆ. ಮತ್ತೊಬ್ಬರ ಎದುರಿಗೆ ಕಾಲುಚಾಚಿ ಕೂರಲು ಆಗದಷ್ಟು ಲಗೇಜಿನ ಹೊರೆ, ಕುಳಿತುಕೊಳ್ಳಲು ಜಾಗ ಸಾಲದೇ ಅರ್ಧವಷ್ಟೇ ಕೂತವರು, ನೆಟ್ಟಗೆ ಕೂರಲೂ ಆಗದೇ, ನಿಲ್ಲಲೂ ಆಗದೇ ಸಿಡಿಮಿಡಿಗುಟ್ಟುತ್ತಿದ್ದಾರೆ. ಕೂತವಳ ಮಗುವೊಂದು ರಚ್ಚೆ ಹಿಡಿದಿದೆ. ಅದನ್ನು ಸುಧಾರಿಸಲಾಗದೇ ತಾಯಿ ಆತಂಕಕ್ಕೊಳಗಾಗಿದ್ದಾಳೆ.  ರೈಲಿನಲ್ಲಿ ಕೂತಾಗಿದೆ ಪಕ್ಕದ ಪುಂಡು ಹುಡುಗನ ಕಿರಿಕಿರಿಯನ್ನು ಆಡಲಾಗದೇ, ಅನುಭವಿಸಲಾಗದೇ ಪ್ರಯಾಣ ಯಾವಾಗ ಮುಗಿಯುವುದೋ ಎಂದು ಕಾತುರಳಾಗಿದ್ದಾಳೆ ಈ ಯುವತಿ. ಮತ್ತೊಬ್ಬ ಆರಾಮವಾಗಿ ಬೀಡಾ ಜಗಿಯುತ್ತಾ ಕಿಟಕಿಯಾಚೆಯ ಪ್ರಕೃತಿ ಸೌಂದರ್ಯ ಆಸ್ವಾದಿಸುತ್ತಿದ್ದಾನೆ. ನಿಂತವರ ಪಾಡೂ ಒಬ್ಬೊಬ್ಬರದು ಒಂದೊಂದು ರೀತಿ. ಪ್ರಯಾಣದ ಆರಂಭದಿಂದ ಗಮ್ಯದವರೆಗೂ ನಿಂತೇ ಹಲವರ ಪಯಣ. ಮತ್ತೆ ಕೆಲವರಿಗೆ ಮಧ್ಯದ ಸ್ಟೇಷನ್ಗಳಲ್ಲಿ ಇಳಿದವರಿಂದ ಸೀಟು ಸಿಕ್ಕು ಆರಾಮ. ಕುಂಟರಾಗಲಿ, ಕುರುಡರಾಗಲಿ ಕೂರಬಹುದು ಇಲ್ಲದಿದ್ದರೆ ನಿಂತೇ ಪಯಣಿಸುವ ಹಣೆಬರಹ.

ಸಖಿ, ಬದುಕೆಂಬುದೂ ಹೀಗೇ ಒಬ್ಬೊಬ್ಬರದು ಒಂದೊಂದು ರೀತಿಯ ಸ್ಥಿತಿಯಲ್ಲವೇ? ಅದೇನು ಪೂರ್ವಪಾಪ ಪುಣ್ಯದ ಫಲವೋ, ಅದೃಷ್ಟವೋ. ಹಣೆಬರಹವೋ, ವಿಧಿಲಿಖಿತವೋ, ಸ್ವಯಂಕೃತ ಸ್ಥಿತಿಯೋ ಹೇಗೆ ವಿಶ್ಲೇಶಿಸುವುದು? ಬದುಕಿನುದ್ದಕ್ಕೂ ಕಷ್ಟಪಡುವವನು, ಬದುಕಿನುದ್ದಕ್ಕೂ ಸುಖಪಡುವವನು. ಅಕಸ್ಮಾತ್ತಾಗಿ ಸುಖಿ, ಅಸುಖಿಯಾಗುವುದು, ಬಡವ ಶ್ರೀಮಂತನಾಗುವುದು, ಶ್ರೀಮಂತ ಬಡವನಾಗುವುದು ಎಲ್ಲ ಅದ್ಭುತಗಳನ್ನು ಕಾಣುತ್ತಿರುತ್ತೇವೆ. ಇದೆಲ್ಲಾ ಹೇಗಾಯ್ತು? ಎಂದು ಆಶ್ಚರ್ಯಗೊಳ್ಳುತ್ತೇವೆ. ಅವರವರ ಅದೃಷ್ಟ ಎಂದು ಗೊಣಗುತ್ತೇವೆ. ಕೊನೆಗೂ ಬದುಕಿನ ಒಳಮರ್ಮ ನಮ್ಮ ಸೀಮಿತ ಬುದ್ಧಿಗೆ ನಿಲುಕುವುದೇ ಇಲ್ಲ. ಕಾಣದ ಶಕ್ತಿ ಕೈವಾಡ ಎಂಬ ಹೆಸರಿನಿಂದ ಎಲ್ಲವನ್ನೂ ಮುಚ್ಚಿಬಿಡುತ್ತೇವೆ. ಹಾಗೆ ನೋಡಿದರೆ ಈ ಬದುಕಿನಲ್ಲಿ ಮಾನವನಿಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದ್ದೇ ಹೆಚ್ಚಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...