Home / ಲೇಖನ / ಇತರೆ / ಬದುಕೆಂಬ ರೈಲು…

ಬದುಕೆಂಬ ರೈಲು…

Railuಪ್ರಿಯ ಸಖಿ,
ರೈಲು ಕ್ಷಣಕಾಲ ಇಲ್ಲಿ ನಿಂತಿದೆ. ಹತ್ತುವವರು ಹತ್ತಿದ್ದಾರೆ. ಇಳಿಯುವವರು ಇಳಿದಿದ್ದಾರೆ. ರೈಲು ಹತ್ತಿದವರಿಗೆಲ್ಲಾ ಸೀಟು ಸಿಕ್ಕಿಲ್ಲ. ಕೆಲವರು ನಿಂತಿದ್ದಾರೆ. ಕೆಲವರು ಕುಳಿತಿದ್ದಾರೆ. ಅದರಲ್ಲೂ ಅದೆಷ್ಟೊಂದು ರೀತಿಯ ಜನ ! ಕುಳಿತವರಲ್ಲಿ ಚಿಂತೆ ಇಲ್ಲದೇ ಆರಾಮ ನಿದ್ದೆಯಲ್ಲಿದ್ದಾರೆ. ಮತ್ತೆ ಕೆಲವರು ಇಳಿಯುವ ತಾಣ ಬಂತೇ ಎಂದು ಚಡಪಡಿಸುತ್ತಿದ್ದಾರೆ. ಮತ್ತೊಬ್ಬರ ಎದುರಿಗೆ ಕಾಲುಚಾಚಿ ಕೂರಲು ಆಗದಷ್ಟು ಲಗೇಜಿನ ಹೊರೆ, ಕುಳಿತುಕೊಳ್ಳಲು ಜಾಗ ಸಾಲದೇ ಅರ್ಧವಷ್ಟೇ ಕೂತವರು, ನೆಟ್ಟಗೆ ಕೂರಲೂ ಆಗದೇ, ನಿಲ್ಲಲೂ ಆಗದೇ ಸಿಡಿಮಿಡಿಗುಟ್ಟುತ್ತಿದ್ದಾರೆ. ಕೂತವಳ ಮಗುವೊಂದು ರಚ್ಚೆ ಹಿಡಿದಿದೆ. ಅದನ್ನು ಸುಧಾರಿಸಲಾಗದೇ ತಾಯಿ ಆತಂಕಕ್ಕೊಳಗಾಗಿದ್ದಾಳೆ.  ರೈಲಿನಲ್ಲಿ ಕೂತಾಗಿದೆ ಪಕ್ಕದ ಪುಂಡು ಹುಡುಗನ ಕಿರಿಕಿರಿಯನ್ನು ಆಡಲಾಗದೇ, ಅನುಭವಿಸಲಾಗದೇ ಪ್ರಯಾಣ ಯಾವಾಗ ಮುಗಿಯುವುದೋ ಎಂದು ಕಾತುರಳಾಗಿದ್ದಾಳೆ ಈ ಯುವತಿ. ಮತ್ತೊಬ್ಬ ಆರಾಮವಾಗಿ ಬೀಡಾ ಜಗಿಯುತ್ತಾ ಕಿಟಕಿಯಾಚೆಯ ಪ್ರಕೃತಿ ಸೌಂದರ್ಯ ಆಸ್ವಾದಿಸುತ್ತಿದ್ದಾನೆ. ನಿಂತವರ ಪಾಡೂ ಒಬ್ಬೊಬ್ಬರದು ಒಂದೊಂದು ರೀತಿ. ಪ್ರಯಾಣದ ಆರಂಭದಿಂದ ಗಮ್ಯದವರೆಗೂ ನಿಂತೇ ಹಲವರ ಪಯಣ. ಮತ್ತೆ ಕೆಲವರಿಗೆ ಮಧ್ಯದ ಸ್ಟೇಷನ್ಗಳಲ್ಲಿ ಇಳಿದವರಿಂದ ಸೀಟು ಸಿಕ್ಕು ಆರಾಮ. ಕುಂಟರಾಗಲಿ, ಕುರುಡರಾಗಲಿ ಕೂರಬಹುದು ಇಲ್ಲದಿದ್ದರೆ ನಿಂತೇ ಪಯಣಿಸುವ ಹಣೆಬರಹ.

ಸಖಿ, ಬದುಕೆಂಬುದೂ ಹೀಗೇ ಒಬ್ಬೊಬ್ಬರದು ಒಂದೊಂದು ರೀತಿಯ ಸ್ಥಿತಿಯಲ್ಲವೇ? ಅದೇನು ಪೂರ್ವಪಾಪ ಪುಣ್ಯದ ಫಲವೋ, ಅದೃಷ್ಟವೋ. ಹಣೆಬರಹವೋ, ವಿಧಿಲಿಖಿತವೋ, ಸ್ವಯಂಕೃತ ಸ್ಥಿತಿಯೋ ಹೇಗೆ ವಿಶ್ಲೇಶಿಸುವುದು? ಬದುಕಿನುದ್ದಕ್ಕೂ ಕಷ್ಟಪಡುವವನು, ಬದುಕಿನುದ್ದಕ್ಕೂ ಸುಖಪಡುವವನು. ಅಕಸ್ಮಾತ್ತಾಗಿ ಸುಖಿ, ಅಸುಖಿಯಾಗುವುದು, ಬಡವ ಶ್ರೀಮಂತನಾಗುವುದು, ಶ್ರೀಮಂತ ಬಡವನಾಗುವುದು ಎಲ್ಲ ಅದ್ಭುತಗಳನ್ನು ಕಾಣುತ್ತಿರುತ್ತೇವೆ. ಇದೆಲ್ಲಾ ಹೇಗಾಯ್ತು? ಎಂದು ಆಶ್ಚರ್ಯಗೊಳ್ಳುತ್ತೇವೆ. ಅವರವರ ಅದೃಷ್ಟ ಎಂದು ಗೊಣಗುತ್ತೇವೆ. ಕೊನೆಗೂ ಬದುಕಿನ ಒಳಮರ್ಮ ನಮ್ಮ ಸೀಮಿತ ಬುದ್ಧಿಗೆ ನಿಲುಕುವುದೇ ಇಲ್ಲ. ಕಾಣದ ಶಕ್ತಿ ಕೈವಾಡ ಎಂಬ ಹೆಸರಿನಿಂದ ಎಲ್ಲವನ್ನೂ ಮುಚ್ಚಿಬಿಡುತ್ತೇವೆ. ಹಾಗೆ ನೋಡಿದರೆ ಈ ಬದುಕಿನಲ್ಲಿ ಮಾನವನಿಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದ್ದೇ ಹೆಚ್ಚಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...