Home / ಲೇಖನ / ಇತರೆ / ಬದುಕೆಂಬ ರೈಲು…

ಬದುಕೆಂಬ ರೈಲು…

Railuಪ್ರಿಯ ಸಖಿ,
ರೈಲು ಕ್ಷಣಕಾಲ ಇಲ್ಲಿ ನಿಂತಿದೆ. ಹತ್ತುವವರು ಹತ್ತಿದ್ದಾರೆ. ಇಳಿಯುವವರು ಇಳಿದಿದ್ದಾರೆ. ರೈಲು ಹತ್ತಿದವರಿಗೆಲ್ಲಾ ಸೀಟು ಸಿಕ್ಕಿಲ್ಲ. ಕೆಲವರು ನಿಂತಿದ್ದಾರೆ. ಕೆಲವರು ಕುಳಿತಿದ್ದಾರೆ. ಅದರಲ್ಲೂ ಅದೆಷ್ಟೊಂದು ರೀತಿಯ ಜನ ! ಕುಳಿತವರಲ್ಲಿ ಚಿಂತೆ ಇಲ್ಲದೇ ಆರಾಮ ನಿದ್ದೆಯಲ್ಲಿದ್ದಾರೆ. ಮತ್ತೆ ಕೆಲವರು ಇಳಿಯುವ ತಾಣ ಬಂತೇ ಎಂದು ಚಡಪಡಿಸುತ್ತಿದ್ದಾರೆ. ಮತ್ತೊಬ್ಬರ ಎದುರಿಗೆ ಕಾಲುಚಾಚಿ ಕೂರಲು ಆಗದಷ್ಟು ಲಗೇಜಿನ ಹೊರೆ, ಕುಳಿತುಕೊಳ್ಳಲು ಜಾಗ ಸಾಲದೇ ಅರ್ಧವಷ್ಟೇ ಕೂತವರು, ನೆಟ್ಟಗೆ ಕೂರಲೂ ಆಗದೇ, ನಿಲ್ಲಲೂ ಆಗದೇ ಸಿಡಿಮಿಡಿಗುಟ್ಟುತ್ತಿದ್ದಾರೆ. ಕೂತವಳ ಮಗುವೊಂದು ರಚ್ಚೆ ಹಿಡಿದಿದೆ. ಅದನ್ನು ಸುಧಾರಿಸಲಾಗದೇ ತಾಯಿ ಆತಂಕಕ್ಕೊಳಗಾಗಿದ್ದಾಳೆ.  ರೈಲಿನಲ್ಲಿ ಕೂತಾಗಿದೆ ಪಕ್ಕದ ಪುಂಡು ಹುಡುಗನ ಕಿರಿಕಿರಿಯನ್ನು ಆಡಲಾಗದೇ, ಅನುಭವಿಸಲಾಗದೇ ಪ್ರಯಾಣ ಯಾವಾಗ ಮುಗಿಯುವುದೋ ಎಂದು ಕಾತುರಳಾಗಿದ್ದಾಳೆ ಈ ಯುವತಿ. ಮತ್ತೊಬ್ಬ ಆರಾಮವಾಗಿ ಬೀಡಾ ಜಗಿಯುತ್ತಾ ಕಿಟಕಿಯಾಚೆಯ ಪ್ರಕೃತಿ ಸೌಂದರ್ಯ ಆಸ್ವಾದಿಸುತ್ತಿದ್ದಾನೆ. ನಿಂತವರ ಪಾಡೂ ಒಬ್ಬೊಬ್ಬರದು ಒಂದೊಂದು ರೀತಿ. ಪ್ರಯಾಣದ ಆರಂಭದಿಂದ ಗಮ್ಯದವರೆಗೂ ನಿಂತೇ ಹಲವರ ಪಯಣ. ಮತ್ತೆ ಕೆಲವರಿಗೆ ಮಧ್ಯದ ಸ್ಟೇಷನ್ಗಳಲ್ಲಿ ಇಳಿದವರಿಂದ ಸೀಟು ಸಿಕ್ಕು ಆರಾಮ. ಕುಂಟರಾಗಲಿ, ಕುರುಡರಾಗಲಿ ಕೂರಬಹುದು ಇಲ್ಲದಿದ್ದರೆ ನಿಂತೇ ಪಯಣಿಸುವ ಹಣೆಬರಹ.

ಸಖಿ, ಬದುಕೆಂಬುದೂ ಹೀಗೇ ಒಬ್ಬೊಬ್ಬರದು ಒಂದೊಂದು ರೀತಿಯ ಸ್ಥಿತಿಯಲ್ಲವೇ? ಅದೇನು ಪೂರ್ವಪಾಪ ಪುಣ್ಯದ ಫಲವೋ, ಅದೃಷ್ಟವೋ. ಹಣೆಬರಹವೋ, ವಿಧಿಲಿಖಿತವೋ, ಸ್ವಯಂಕೃತ ಸ್ಥಿತಿಯೋ ಹೇಗೆ ವಿಶ್ಲೇಶಿಸುವುದು? ಬದುಕಿನುದ್ದಕ್ಕೂ ಕಷ್ಟಪಡುವವನು, ಬದುಕಿನುದ್ದಕ್ಕೂ ಸುಖಪಡುವವನು. ಅಕಸ್ಮಾತ್ತಾಗಿ ಸುಖಿ, ಅಸುಖಿಯಾಗುವುದು, ಬಡವ ಶ್ರೀಮಂತನಾಗುವುದು, ಶ್ರೀಮಂತ ಬಡವನಾಗುವುದು ಎಲ್ಲ ಅದ್ಭುತಗಳನ್ನು ಕಾಣುತ್ತಿರುತ್ತೇವೆ. ಇದೆಲ್ಲಾ ಹೇಗಾಯ್ತು? ಎಂದು ಆಶ್ಚರ್ಯಗೊಳ್ಳುತ್ತೇವೆ. ಅವರವರ ಅದೃಷ್ಟ ಎಂದು ಗೊಣಗುತ್ತೇವೆ. ಕೊನೆಗೂ ಬದುಕಿನ ಒಳಮರ್ಮ ನಮ್ಮ ಸೀಮಿತ ಬುದ್ಧಿಗೆ ನಿಲುಕುವುದೇ ಇಲ್ಲ. ಕಾಣದ ಶಕ್ತಿ ಕೈವಾಡ ಎಂಬ ಹೆಸರಿನಿಂದ ಎಲ್ಲವನ್ನೂ ಮುಚ್ಚಿಬಿಡುತ್ತೇವೆ. ಹಾಗೆ ನೋಡಿದರೆ ಈ ಬದುಕಿನಲ್ಲಿ ಮಾನವನಿಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದ್ದೇ ಹೆಚ್ಚಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...