Home / ಲೇಖನ / ಇತರೆ / ಕ್ರೂರಿಯಾಗದಿರಲಿ!

ಕ್ರೂರಿಯಾಗದಿರಲಿ!

ಪ್ರಿಯ ಸಖಿ,
ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು ಗಮನಿಸಿ ಗಾಬರಿಯಾಗಿ ಬಸ್ಸು ನಿಲ್ಲಿಸುವಂತೆ ಕೂಗಿಕೊಳ್ಳುತ್ತಾನೆ. ಇದನ್ನು ಕೇಳಿದ ಡ್ರೈವರ್ ಅಟ್ಟಹಾಸದ ನಗೆ ನಕ್ಕು ಬಸ್ಸೊಳಗೆ ಹತ್ತಕ್ಕೆ ಯಾವನ್ಲಾ ನಿಂಗ್ ಹೇಳ್ದವ್ನು? ಬಾ, ಬಾ ಬೆಂಗಳೂರ್ನಾಗೇ ನಿನ್ನ ಇನ್ನ ಇಳ್ಸಾದು ಎನ್ನುತ್ತಾನೆ. ಇದನ್ನು ಕೇಳಿದ ಹುಡುಗ ಮತ್ತಷ್ಟು ಗಾಬರಿಯಾಗಿ ಇಲ್ಲಣ್ಣ ಗೊತ್ತಿಲ್ದೇ ಹತ್ಬುಟ್ಟೆ ಇಳುದ್ಬುಡ್ತೀನಿ, ನಿಲ್ಸಣ್ಣ, ನಿನ್ನ ದಮ್ಮಯ್ಯ ಎಂದು ಬೇಡಿಕೊಂಡಷ್ಟೂ ಡ್ರೈವರ್ನ ಅಟ್ಟಹಾಸ ಏರುತ್ತದೆ.

ಬಸ್ಸಿನಲ್ಲಿರುವ ಜನರ ಯೋಚನೆಗಳೂ ಹತ್ತು ಹಲವು ದಿಕ್ಕಿನಲ್ಲಿ ಸಾಗುತ್ತವೆ. ಬಸ್ಸು ಹೊರಡೋದು ಗೊತ್ತಿದ್ದೂ ಯಾಕ್ ಹತ್ಬೇಕಿತ್ತು. ಅನುಭವಿಸಲಿ ಅಂತ ಒಬ್ಬನೆಂದು ಕೊಂಡರೆ ಇನ್ನೊಬ್ಬ ಪಾಪ ಅವನು ಇವತ್ತು ದುಡಿದ ದುಡ್ಡನ್ನೆಲ್ಲಾ ಮತ್ತೆ ವಾಪಸ್ಸು ಬರಲು ಟಿಕೇಟಿಗೇ ಹಾಕಬೇಕೇನೋ ಎಂದುಕೊಳ್ಳುತ್ತಾನೆ. ತಾಯಿಯೊಬ್ಬಳು ಪಾಪ ಹುಡುಗ ಏನೋ ಗೊತ್ತಿಲ್ದೆ ಹತ್ತಿದೆ, ಇಳಿಸಿಬಿಡಬಾರ್ದಾ. ಈ ಡ್ರೈವರ್ ಎಂತ ಕಟುಕ ಎಂದು ಬೈಯ್ದುಕೊಳ್ಳುತ್ತಾ ಆ ಹುಡುಗನಿಂದ ಎರಡು ರೂಪಾಯಿಯ ಕಡ್ಲೆಕಾಯಿ ತೆಗೆದುಕೊಳ್ಳುತ್ತಾಳೆ. ಮತ್ತೊಬ್ಬ ಸೂಕ್ಷ್ಮ ಮನಸ್ಸಿನವ ಡ್ರೈವರ್ನ ಕ್ರೂರ ಮುಖವನ್ನು ಕಂಡು ಅವನೊಂದಿಗೆ ಮಾತನಾಡಲಾಗದೇ ಕಂಡಕ್ಟರ್ ಬಳಿ ಪಾಪ ಅವನನ್ನು ಇಳಿಸಿ ತೊಂದರೆ ಕೊಡಬೇಡಿ ಎಂದು ಬೇಡಿಕೊಳ್ಳುತ್ತಾನೆ. ಡ್ರೈವರ್‍‍ಗೆ ಕಂಡಕ್ಟರ್ ತಿಳಿಸಿ ಹೇಳಿದರೂ ಬುದ್ಧಿ ಬರ್‍ಲಿ ಸುಮ್ನಿರು ಎನ್ನುತ್ತಾ ಅಸಡ್ಡೆ ಮಾಡುತ್ತಾನೆ.

ಡ್ರೈವರ್ ಯಾರ ಮಾತೂ ಕೇಳುವವನಲ್ಲ ಎಂದು ಅರಿವಾದ ಹುಡುಗ ಬಂದದ್ದನ್ನೆಲ್ಲಾ ಎದುರಿಸಲು ತಯಾರಾದವನಂತೆ ಮತ್ತೆ ಉತ್ಸಾಹದಿಂದ ಕಡ್ಲೆಕಾಯಿ ಮಾರಲು ಪ್ರಾರಂಭಿಸುತ್ತಾನೆ. ಅ ಹುಡುಗನ ಬಗ್ಗೆ ಕರುಣೆ ಮೂಡಿದ ಅನೇಕ ಪ್ರಯಾಣಿಕರು, ಕಡಲೇಕಾಯಿ ಖರೀದಿಸಿ ಧನ್ಯವಾದೆವು ಎಂದು ಸಮಾಧಾನದ ಉಸಿರೆಳೆಯುತ್ತಾರೆ. ಯಾವಾಗಲೋ ಮನಸ್ಸು ಬಂದೆಡೆ ಆ ಡ್ರೈವರ್ ಬಸ್ಸು ನಿಲ್ಲಿಸಿ ಮಹಾನ್ ಉಪಕಾರ ಮಾಡಿದವನಂತೆ ಮುಖ ಮಾಡಿ ಹುಂ, ಇಳಿ ಎನ್ನುತ್ತಾನೆ. ಹುಡುಗ ಡ್ರೈವರ್ನೆಡೆಗೆ ತಣ್ಣನೆಯ ನೋಟವೊಂದನ್ನು ಬೀರಿ ಸರಸರನೆ ಬಸ್ಸಿನಿಂದಿಳಿಯುತ್ತಾನೆ.

ಸಖಿ, ಡ್ರೈವರ್‍ನ ಈ ಕ್ರೌರ್ಯ, ಬಡ ಹುಡುಗನ ಅಸಹಾಯಕತೆ ಮತ್ತೆ ಮತ್ತೆ ನೆನಪಾಗಿ ಕಾಡುತ್ತವೆ. ಡ್ರೈವರ್ ತನ್ನ ಕ್ರೌರ್ಯದಿಂದ ಪುಟ್ಟ ಹುಡುಗನ ಮನ ಕ್ಷಣಕ್ಕೆ ಭೀತಿಯನ್ನುಂಟು ಮಾಡಿದೆ. ಪಾಠ ಕಲಿಸಿದೆ ಎಂದು ಬೀಗಿದರೂ ಬಸ್ಸಿನಲ್ಲಿನ ಹೆಚ್ಚಿನ ಪ್ರಯಾಣಿಕರ ಕಣ್ಣಿನಲ್ಲಿ ಅವನು ವಿಲನ್ ಆದದ್ದು ಸುಳ್ಳಲ್ಲ. ಹಾಗೇ ತನ್ನ ಅಸಹಾಯಕತೆಯಲ್ಲೂ ಉತ್ಸಾಹದಿಂದಿದ್ದ, ಬದುಕನ್ನು ಬಂದಂತೆ ಧೈರ್ಯವಿರುವ ಪುಟ್ಟ ಹುಡುಗ ಅವನಿಗರಿವಿಲ್ಲದೇ ಹೀರೋ ಆಗಿ ಬಿಡುತ್ತಾನೆ. ಡ್ರೈವರ್‍ನ ಕ್ರೌರ್ಯ ಆ ಮುಗ್ದ ಹೃದಯದಲ್ಲಿ ದ್ವೇಷದ ಬೀಜವನ್ನು ಬಿತ್ತದಿರಲಿ, ಸಮಾಜವನ್ನೇ ಪ್ರತೀಕಾರದ ತಾಣವಾಗಿಸಿಕೊಂಡು ಕ್ರೂರಿಯಾಗದಿರಲಿ ಎಂಬುದು ನಮ್ಮ ಪ್ರಾರ್ಥನೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...