Home / ಲೇಖನ / ಇತರೆ / ಕವಿ, ಪ್ರೇಮಿ, ಹುಚ್ಚ

ಕವಿ, ಪ್ರೇಮಿ, ಹುಚ್ಚ

ಚಿತ್ರ: ಅಂಜೆಲಿಕ ಗ್ರಾಸ್ಕಿಝಿಕ್
ಚಿತ್ರ: ಅಂಜೆಲಿಕ ಗ್ರಾಸ್ಕಿಝಿಕ್

ಪ್ರಿಯ ಸಖಿ,
ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು  ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು ಅರಳಿಸುವ ಶಕ್ತಿ, ಪ್ರತಿಭೆ ಹೊರಹಾಕುವ ಒಂದು ಮಾರ್ಗ, ಬೌದ್ಧಿಕ ಆಟ, ಹಣ ಹೆಸರು ಮಾಡುವ ಒಂದು ದಾರಿ, ಆತ್ಮಸಂತೋಷ ನೀಡುವ ಸಾಧನ… ಹೀಗೆ ಒಬ್ಬೊಬ್ಬರದು ಒಂದೊಂದು ಉತ್ತರ. ಹಾಗೆ ನೋಡಿದರೆ ಕವಿತೆಯೊಂದು ಹೀಗೆ ಇರಬೇಕು. ಇಷ್ಟು ಸಾಲುಗಳು ಇಂತದೇ ರೂಪದಲ್ಲಿರಬೇಕು ಎಂದು ಯಾರೂ ಚೌಕಟ್ಟು ಹಾಕುವಂತಿಲ್ಲ. ಏಕೆಂದರೆ ಕಾವ್ಯ ಸೃಷ್ಟಿಯೆಂಬುದು ಅತ್ಯಂತ ವೈಯಕ್ತಿಕವಾದ ಸೃಜನಶೀಲ ಸೃಷ್ಠಿಕ್ರಿಯೆ. ಎಲ್ಲ ಚೌಕಟ್ಟುಗಳನ್ನು ಮೀರಿ ಕಾವ್ಯ ರಚಿಸುವುದೇ ಹೊಸ ಕಾವ್ಯದ ಸೃಷ್ಠಿಗೆ ಕಾರಣವಾಗುತ್ತದೆ!

ಎಷ್ಟೋ ಬಾರಿ ಕವನಗಳು ಓದುಗರಿಗೆ ಅರ್ಥವಾಗದೇ ಇರುವುದೂ ಉಂಟು. ಕವಿಯ ಭಾವೋತ್ಕಟತೆಯ ಹಂತವಮ್ನ ಮುಟ್ಟದೇ ಕಾವ್ಯದೊಳಗೆ ಪರಕಾಯ ಪ್ರವೇಶವನ್ನು ಮಾಡದ ಹೊರತು ಸಹೃದಯನಿಗೆ ಕವಿತೆ ಅರ್ಥವಾಗುವುದು ಸಾಧ್ಯವಿಲ್ಲ. ಹೀಗೆಂದೇ ಕವಿತೆಯೊಂದರ ಓದು ಬೇರೆ ಪ್ರಕಾರಗಳ ಸಾಹಿತ್ಯದ ಓದಿಗಿಂತಾ ಹೆಚ್ಚಿನ ಏಕಾಗ್ರತೆಯನ್ನು, ಏಕಾಂತವನ್ನು, ನಿರ್ಮಲ ಪ್ರಶಾಂತ ಮನಸ್ಥಿತಿಯನ್ನು ಅರ್ಥೈಸುವಿಕೆಯ ನಿಟ್ಟಿನಲ್ಲಿ ದೀರ್ಘಸಮಯವನ್ನು ಬಯಸುತ್ತದೆ.

ಕವಿ, ಪ್ರೇಮಿ, ಹುಚ್ಚ ಇವರು ಮೂವರು ಹೆಚ್ಚು ಕಡಿಮೆ ಒಂದೇ ಮನಸ್ಥಿತಿಯವರೆಂದು ಹಿಂದಿನಿಂದ ಹೇಳುತ್ತಾ ಬಂದಿದ್ದಾರೆ. ಹುಚ್ಚನ ಮನೋವ್ಯಾಪಾರ ಸಾಮಾನ್ಯರಿಗೆ ನಿಲುಕುವಂತಹದ್ದಲ್ಲ. ಅವನು ಭಾವೋತ್ಕರ್ಷದಲ್ಲಿ ಮಾತನಾಡುವಾಗ ಎದುರಿನವರಿಗೆ ಅದರ ಹಿನ್ನೆಲೆ, ತಲೆಬುಡ ಒಂದೂ ತಿಳಿಯುವುದಿಲ್ಲ. ಪ್ರೇಮಿಯೊಬ್ಬನ ಸ್ಥಿತಿಯೂ ಇಂತಹುದೇ ಉತ್ಕಟ ಪ್ರೇಮದ ಅಮಲಿನಲ್ಲಿರುವವನಿಗೆ/ಳಿಗೆ, ಪ್ರಪಂಚದ ತುಂಬೆಲ್ಲಾ ತನ್ನ ಪ್ರೇಮಿಯ ಪ್ರತಿರೂಪವೇ ಕಾಣುತ್ತಿರುತ್ತದೆ. ಹಗಲುಗನಸು ಕಾಣುತ್ತಾ ಲೋಕವನ್ನೇ ಮರೆತು ತಮ್ಮಷ್ಟಕ್ಕೆ ನಗುತ್ತಿರುವುದು ಪ್ರೇಮ ತೀವ್ರತೆಯಲ್ಲಿ ನಡೆಸುವ ಹುಚ್ಚಾಟಗಳು, ಸಾಮಾನ್ಯರಿಗೆ ಸುಲಭದಲ್ಲಿ ಅರ್ಥವಾಗುವಂತಹುದಲ್ಲ. ಸಹಜವಾಗಿ ಅದವರಿಗೆ ಒಂದು ರೀತಿಯ ಹುಚ್ಚು ಎನ್ನಿಸುತ್ತದೆ. ಹಾಗೇ ಕವಿ ಕೂಡ. ಭಾವಜೀವಿಯಾದ ತನ್ನ ಭಾವತೀವ್ರತೆಯಲ್ಲಿ ಉಕ್ಕಿದ ಭಾವನೆಗಳನ್ನು ಕವನವಾಗಿಸುವ ಅವನ ಮನಸ್ಥಿತಿಯೂ ಎಲ್ಲರಿಗೂ ಅರ್ಥವಾಗುವಂತಹುದಲ್ಲ.

ಉಕ್ಕುವ ಕಡಲಾಗಿಬಿಟ್ಟೆ
ಬಯಲಿನ ಒಡಲಾಗಿಬಿಟ್ಟೆ
ಈ ಜಗದ ತಾಯಾಗಿಬಿಟ್ಟೆ!
ಎಂಬ ಸಾಲುಗಳನ್ನು ಓದಿದಾಗ ಹೀಗಾಗಲು ವಾಸ್ತವದಲ್ಲಿ ಎಂದಾದರೂ ಸಾಧ್ಯವೇ? ಎನಿಸಿ ಬಿಡುತ್ತದೆ. ಆದರೆ ಕವಿಯ ಭಾವ ಲೋಕದ ತೀವ್ರ ಸ್ಪಂದನೆಯಲ್ಲಿ ಎಲ್ಲವೂ ಸಾಧ್ಯ. ಈ ನಿಟ್ಟಿನಲ್ಲಿ ಕವಿಯೂ ಕೂಡ ಅರ್ಥವಾಗದವನೇ ! ಅವನನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದಕ್ಕಿಂತ ಹೀಗಿರಬಹುದು, ಹಾಗಿರಬಹುದು ಎಂದು ಆರೋಪಿಸಿಕೊಂಡು ಕವನವನ್ನು ಓದುವವರೇ, ಅರ್ಥೈಸಿಕೊಳ್ಳುವವರೇ ಬಹುಮಂದಿ!

ಸಖಿ, ಕವಿ, ಹುಚ್ಚ, ಪ್ರೇಮಿಗಳು ಅರ್ಥವಾಗಲು ಅವರಂತದೇ ಸೂಕ್ಷ್ಮ ಸಂವೇದನೆಗಳುಳ್ಳ ಸಹೃದಯರಿಗೆ ಮಾತ್ರ ಸಾಧ್ಯ ಅಲ್ಲವೇ ? ಅಂತಹ ಸಹೃದಯರು ಇರಲಿ ಬಿಡಲಿ ಕವಿ, ಪ್ರೇಮಿಗಳು ಮಾತ್ರ ಎಲ್ಲ ಕಾಲದಲ್ಲೂ ಇರುತ್ತಾರೆ. ತಮ್ಮ ಸಂವೇವನೆಗಳನ್ನು ತಮ್ಮದೇ ಭಾವಲೋಕದ ಭಾಷೆಯಲ್ಲಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...