Home / ಲೇಖನ / ಇತರೆ / ಮಾಗುವಿಕೆ

ಮಾಗುವಿಕೆ

ಚಿತ್ರ: ಮಿಹಾಯ್ ಪರಾಶ್ಚಿವ್
ಚಿತ್ರ: ಮಿಹಾಯ್ ಪರಾಶ್ಚಿವ್

ಪ್ರಿಯ ಸಖಿ,
ಹಣ್ಣು ಮಾಗುವುದು, ವಯಸ್ಸು ಮಾಗುವುದು ಎಲ್ಲ ಸೃಷ್ಟಿ ಸಹಜ ಕ್ರಿಯೆಗಳು. ಹೀಚಾಗಿದ್ದು, ಕಾಯಾಗಿ, ದೋರುಗಾಯಾಗಿ, ಪರಿಪಕ್ವವಾಗಿ ಹಣ್ಣಾದಾಗ ಅದು ಮಾಗಿದ ಹಂತವನ್ನು ತಲುಪುತ್ತದೆ. ಹಾಗೇ ವ್ಯಕ್ತಿ ಕೂಡ. ಬಾಲ್ಯ ಕಳೆದು, ಯೌವ್ವನ ಮುಗಿದು ಮಧ್ಯ ವಯಸ್ಸು ಜಾರಿ, ಕೆನ್ನೆ ಸುಕ್ಕಾಗಿ ತಲೆ ನರೆತು ಸಾವಿಗೆ ಸಮೀಪಿಸಿದಾಗ ಅವನು ಸಂಪೂರ್ಣ ಮಾಗಿದ್ದಾನೆ ಎಂದು ಹೇಳುತ್ತೇವೆ.

ಆದರೆ ಇವುಗಳೆಲ್ಲಾ ಬಾಹ್ಯದ ಸಹಜ ಮಾಗುವಿಕೆಯ ಮಾತಾಯ್ತು. ನಮ್ಮ ಅಂತರಂಗದ ಮಾಗುವಿಕೆಯೂ ಇಷ್ಟೇ ಸಹಜವಾಗಿ ಆಗುತ್ತದೆಯೇ? ಎಂಬುದು ನಮ್ಮನ್ನು ಕಾಡುವ ಪ್ರಶ್ನೆ. ವಯಸ್ಸು ಏರಿದಂತೆಲ್ಲಾ, ಅನುಭವ ಪ್ರಪಂಚ ವಿಸ್ತಾರವಾದಂತೆಲ್ಲಾ ಜಗತ್ತಿನ ಆಗು ಹೋಗುಗಳ ಹಿನ್ನೆಲೆ ತಿಳಿಯುತ್ತಾ ಹೋದಂತೆಲ್ಲಾ ಮನಸ್ಸೂ ಮಾಗುತ್ತಾ ಹೋಗಬೇಕು. ವ್ಯಕ್ತಿ ತನ್ನ ಆಕ್ರೋಶ, ಸಿಟ್ಟು, ದ್ವೇಷ, ಅಸೂಯೆಗಳನ್ನು ಮೀರಲಾಗದಿದ್ದರೂ ನಿಧಾನಕ್ಕೆ ಕಡಿಮೆ ಮಾಡಿಕೊಳ್ಳುವ ದಿಕ್ಕಿನಲ್ಲಿ ಪ್ರಯತ್ನಿಸಬೇಕು. ತನ್ನ ಅಂತಃಚಕ್ಷುಗಳನ್ನು ತೆರೆದು ಬದುಕನ್ನು ಅರ್ಥೈಸಿಕೊಳ್ಳುತ್ತಾ ಹೋಗಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಹಲವಾರು ಮುಖವಾಡಗಳನ್ನು ತೊಟ್ಟುಕೊಂಡಿರುತ್ತಾನೆ. ಆದರೆ ಮನಸ್ಸಿನ ಮಾಗುವಿಕೆಯಿಂದ ಆ ಮುಖವಾಡಗಳನ್ನು  ಮೀರಿ ತನಗೆ ತಾನು ಸತ್ಯವಾಗಿ ಗೋಚರಿಸುವಂತಾಗಬೇಕು. ತನ್ನ ಭಾವನೆಗಳಿಗೆ, ಆಲೋಚನೆಗಳಿಗೆ ಪ್ರಾಮಾಣಿಕನಾಗಲು ಪ್ರಯತ್ನಿಸಬೇಕು. ಸಂಪೂರ್ಣ ಮಾಗುವಿಕೆ ಸಾಧ್ಯವಾಗದಿದ್ದರೂ ಆ ದಾರಿಯಲ್ಲಿ ಸಾಗುತ್ತಾ ಹೋಗಬೇಕು. ಗಾಂಧಿ, ಬುದ್ಧ, ಬಸವಣ್ಣ, ವಿವೇಕಾನಂದ, ಕ್ರಿಸ್ತ, ಮಹಾವೀರರು ತಮ್ಮ ಬಾಹ್ಯದ ಮಾಗುವಿಕೆಗೂ ಮೊದಲೇ ಅಂತರಂಗದಲ್ಲಿ ಮಾಗುತ್ತಾ ಸಾಗಿದವರು. ಆದ್ದರಿಂದಲೇ ಅವರು ಮಹಾನ್ ವ್ಯಕ್ತಿಗಳಾದರು. ಸರ್ವಮಾನ್ಯರಾದರು. ಸಂತರೆನಿಸಿದರು. ಇಂತಹ ವ್ಯಕ್ತಿಗಳನ್ನು ಅಪರೂಪಕ್ಕೊಮ್ಮೆಯಷ್ಟೇ ಕಾಣುತ್ತೇವೆ.  ಆದರೆ ವಯಸ್ಸಾಗಿಯೂ ಮನಸ್ಸು ಮಾಗದೇ ಮೇಲೆ ಹಣ್ಣಾದಂತೆ ಕಂಡರೂ ಒಳಗೆ ಕಾಯಾಗಿಯೇ ಇರುವ ಅಪರಿಪಕ್ವ ಮನಸ್ಸಿನ ವ್ಯಕ್ತಿಗಳು ನಮ್ಮ ಸುತ್ತಲೂ ಕಾಣುತ್ತಲೇ ಇರುತ್ತೇವೆ.

ವಯಸ್ಸಾಗಿದ್ದರೂ ಮಕ್ಕಳಂತೆ ಹಠ, ಎಲ್ಲರಮೇಲೂ ಕೋಪ, ತಾತ್ಸಾರ, ದ್ವೇಷ. ವ್ಯಂಗ್ಯವಾಡುವುದು, ವಿನಾಕಾರಣ ಕಿರುಚಾಟ, ಹಾರಾಟ, ಜಗಳ, ಅಸಹ್ಯ ನಡುವಳಿಕೆ. ಇತರರನ್ನು ಕಂಡಾಗ ಅವರ ವಯಸ್ಸಿಗೆ ಕೊಡಬೇಕಾದ ಗೌರವವನ್ನೂ ಕೊಡಲು ಮನಸ್ಸು ನಿರಾಕರಿಸುತ್ತದೆ. ವಯಸ್ಸಾದರೂ ಬುದ್ಧಿ ಬಂದಿಲ್ಲ ಎಂಬ ಮಾತು ಇಂಥವರಿಗಾಗಿಯೇ ಸೃಷ್ಟಿಯಾದುದು.

ಸಖಿ, ಪ್ರತಿಯೊಬ್ಬ ವ್ಯಕ್ತಿಯೂ ತನ್ನ ವಯಸ್ಸಿನೊಂದಿಗೆ ತನ್ನ ಮನಸ್ಸನ್ನೂ ಮಾಗಿಸಿ, ತಿಳಿಗೊಳಿಸಿಕೊಳ್ಳಲು ಪ್ರಯತ್ನಿಸಬೇಕು. ಅರಳಿಸಿಕೊಳ್ಳಲು ಪ್ರಯತ್ನಿಸಬೇಕು. ಎಲ್ಲವನ್ನೂ ಪ್ರೀತಿಯ ನೆಲೆಗಳಿಂದ, ಮಾನವೀಯ ನೆಲೆಗಳಿಂದ, ಅರ್ಥೈಸಿಕೊಳ್ಳಲು ಪ್ರಯತ್ನಿಸಬೇಕು. ಸೋಲು ಗೆಲವುಗಳನ್ನು  ಸಮಚಿತ್ತದಿಂದ ಸ್ವೀಕರಿಸಬೇಕು. ಹೀಗಾದಾಗ ಮಾತ್ರ ವ್ಯಕ್ತಿಯೊಬ್ಬ ನಿಜವಾದ ಅರ್ಥದಲ್ಲಿ ಹಣ್ಣಾದ, ಮಾಗಿದ ಎಂದು ಹೇಳಬಹುದು. ತನಗೆ ತಾನು
ಅರ್ಥವಾಗಲು, ಸತ್ಯವಾಗಲು ಪ್ರಪಂಚದ ನೋವು ನಲಿವುಗಳು ಅರ್ಥವಾಗಲು ಸಾಧ್ಯವಾಗುತ್ತದೆ. ಸಖಿ, ವಯಸ್ಸಿಗೆ ತಕ್ಕಂತೆ ಮನಸ್ಸು ಮಾಗುವ ಕಲೆಯನ್ನು ಕಲಿಯಲು ಎಲ್ಲರೂ ಪ್ರಯತ್ನಿಸಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...