Home / ಲೇಖನ / ವಿಜ್ಞಾನ / ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು ನಡೆದೇ ಕೂದಲುಗಳು ಅಂಕುರಿಸುತ್ತವೆ, ಎಂಬುದು ಸತ್ಯ.

ಸದ್ಯ ಸಾಗರದ ನಾರಾಯಣ ಬಂಢಾರಿ ವೃತ್ತಿಯಲ್ಲಿ ಕ್ಷೌರಿಕ ೪೦ ವರ್ಷಗಳಿಂದಲೂ ಉದ್ಯೋಗ ಮಾಡುತ್ತಿದ್ದ ಇವರು ಇತ್ತೀಚೆಗೆ ಗಿಡಮೂಲಿಕೆಗಳ ಸಂಗ್ರಹದಿಂದ ತೈಲವೊಂದನ್ನು ಕಂಡು ಹಿಡಿದು ಪ್ರಯೋಗಿಸಿ ಯಶಸ್ವಿಯಾದರು. ಈ ತೈಲದ ಹೆಸರು “ಕನಕ ಸಿಂಹಾದ್ರಿತೈಲ”. ಈಗಾಗಲೇ ಸಾವಿರಾರು ಜನ ಇದನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಸ್ನಾನದ ನಂತರ ದಿನ ಬಿಟ್ಟು ದಿನ ಹೀಗೆ ೪ ಬಾಟಲ್ ಮುಗಿಯುವವರೆಗೂ ಹಚ್ಚಿದರೆ ಕೇಶಗಳು ಪುನರ್‌ಸೃಷ್ಟಿಗೊಳ್ಳುತ್ತವೆ. ಇದರ ತಯಾರಿಕೆಯ ಮೂಲವನ್ನು ನಾರಾಯಣ ಬಂಢಾರಿ ಹೇಳಿಲ್ಲ. ಕೆಲವು ವಿದೇಶಿಯರೂ ಕೂಡ ಈ ತೈಲವನ್ನು ಕೊಂಡೊಯ್ದಿದ್ದಾರೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...