Home / ಲೇಖನ / ವಿಜ್ಞಾನ / ಹೃದಯಾಫಾತ ತಪ್ಪಿಸುವ ಔಷಧಿ

ಹೃದಯಾಫಾತ ತಪ್ಪಿಸುವ ಔಷಧಿ

ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹೆರಾಲ್ಡ್ ಲೇಜರ್ ಅವರು ಒಂದು ಪ್ರೊಟೀನನ್ನು ಜೈವಿಕ ತಂತ್ರಜ್ಞಾನದಿಂದ ಕಂಡು ಹಿಡಿದಿದ್ದಾರೆ.

ಜೈವಿಕ ತಂತ್ರಜ್ಞಾನವು ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಮತ್ತು ಉನ್ನತ ಉಪಕಾರಿಯಾದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಲಾಭಕಾರಿಯಾಗಿದೆ ಎಂದು ಬೇರೆ ಹೇಳಬೇಕಿಲ್ಲ. ಮ್ಯುಸಾಬೂಟ್ಸ್ ವಿಶ್ವವಿದ್ಯಾನಿಲಯದ ಡಾ|| ಲೇಜರ್ ಅವರು ಹೃದಯಾಘಾತವನ್ನು ತಡೆಗಟ್ಟಲು ಜೈವಿಕ ತಂತ್ರಜ್ಞಾನದಿಂದಲೇ ಸಾದರ ಪಡಿಸಿದ್ದಾರೆ. ಇದರ ಹೆಸರು “ಎಕ್ಸ್‌ಸಿರ್” (Soluble Human Complements Receptor) ಇದನ್ನು ಹಂದಿಗಳ ಮೇಲೆ ಪ್ರಯೋಗಿಸಿ ಸತ್ಯಾಂಶವನ್ನು ಕಂಡು ಹಿಡಿದಿದ್ದಾರೆ. ಈ ಔಷಧಿಯಿಂದಾಗಿ ಶರೀರದಲ್ಲಿರುವ ಅನೇಕ ರೋಗಾಣುಗಳ ವಿರುದ್ಧ ಪ್ರತಿರೋಧಕ ಶಕ್ತಿಯಾಗಿ ವರ್ಧಿಸಿದ್ಧನ್ನು ಕಂಡುಕೊಂಡು ಪ್ರಕಟಿಸಿದರು. ಹೃದಯಾಘಾತವನ್ನು ತಡೆಹಿಡಿಯುತ್ತದೆಂದು ಖಚಿತಪಡಿಸಿದರು.

ಇದಲ್ಲದೇ ಲಂಡನ್ನಿನಲ್ಲಿರುವ ಹೃದಯ ಶಾಸ್ತ್ರ ತಂಡದವರು ತಯಾರಿಸಿದ ಒಂದು ಕಂಪ್ಯೂಟರ್ ಸಾಫ್ಟ್‌ವೇರ್‌ನಿಂದ ಒಬ್ಬ ರೋಗಿ ಹೃದಯಾಘಾತಕ್ಕೆ ಈಡಾಗುವ ಸಾಧ್ಯತೆ ಇದೆಯೇ ಇಲ್ಲವೇ ಎಂಬುವುದನ್ನು ಮುಂಚಿತವಾಗಿಯೇ ತಿಳಿಯಬಹುದೆಂದು ಹೇಳುತ್ತಾರೆ. ಮತ್ತಲ್ಲದೇ ಹೃದಯದ ಗಾತ್ರ, ಹೃದಯ ಬಡಿತದ ಲಯ, ಇತ್ಯಾದಿಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ೧೦ ವರ್ಷಗಳಲ್ಲಿ ಮನುಷ್ಯನ ಸಾವಿನ ಗಂಡಾಂತರದ ಭವಿಷ್ಯವನ್ನು ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...