Home / ಕವನ / ಕವಿತೆ / ಬಳ್ಳಾರಿ ಬಿಸಿಲೆಂದರೆ…

ಬಳ್ಳಾರಿ ಬಿಸಿಲೆಂದರೆ…

ಬಳ್ಳಾರಿ ಬಿಸಿಲೆಂದರೆ…
ನಿಗಿ ನಿಗಿ ಉರಿವಕೊಳ್ಳಿ ದೆವ್ವ!!
ನಿತ್ಯ ಬಿಸುಲುಗುದುರೆಯೇರಿ,
ಗರಿಗೆದರಿ, ಧರೆಗಿಳಿವ, ಸೂರ್‍ಯಮಂಡಲ!
ಆಲೆಮನೆಯ, ಕೊಪ್ಪರಿಗೆಯೊಳಗಿನ
ಬಿಸಿ ಬಿಸಿ ಕೆನೆ ಬೆಲ್ಲದ, ಕಾಕಂಬಿ ರಸದ, ಸಿಂಚನ!
ಕಾದ ತಾರೆಣ್ಣೆ, ಮೈಮೇಲೆ ಸುರಿವಿಕೊಂಡಂತೆ!
ಕಮ್ಮಾರ ರೋಸಿಗೊಂಡು ಸಿಟ್ಟಲಿ,
ತಿದಿಯೊತ್ತಿದ ಬಿರುಸಿಗೆ, ಕಿಡಿಕಿಡಿ ಕಾರುವ, ಸೂರ್‍ಯಕಿರಣ!
ಚಳಮಳ ಕಾದ, ಎಮ್ಮೆ ಹಾಲಿನ ಝಳದಂತೆ,
ಮಖಾಮೂತಿಗೆ ರಾಚುವ, ಕೆಂಡದುಂಡೆಯ ಬಿಸಿಲ ಮಳೆ!
ಇಟ್ಟಂಗಿ ಭಟ್ಟಿಯೊಳಗೆ, ಸಿಕ್ಕ ಮರಿ ಹುಲ್ಲೆಯಂಗೆ,
ನಿತ್ಯ ವಿಲವಿಲಾ ಒದ್ದಾಡುವ, ನರಪಿಳ್ಳೆಗಳು!
ಸೀದಕರುಕು, ಅಶ್ಟೇ ಚುರುಕು, ಹರಕು! ಝಲಕು…
ಅಬ್ಬಾ…! ಹುಟ್ಟಬೇಕು ಬಳ್ಳಾರಿ ಬಿಸಿಲಿಗೇ… ಒಮ್ಮೆಯಾದರೂ
ಗಟ್ಟಿತನ ಎತ್ತಿ ತೋರಬೇಕು!

-೨-
ಬಳ್ಳಾರಿ ಬಿಸಿಲೆಂದರೆ…
ಬಿಸಿಲೇ…! ಬಿಸಿಲಿಗೆ, ಬಿಸಲು ಸೇರಿ,
ಚಕ್ರಬಡ್ಡಿ, ಮೀಟರ್‍ ಬಡ್ಡಿ, ಸುಸ್ತಿಬಡ್ಡಿಯಶ್ಟು ತಾಪಮಾನ…
ನವರಂಧ್ರಗಳಲ್ಲಿ… ಎರೆಭೂಮಿಯಂಗೆ ಬಿರುಕು ಬಿಟ್ಟು
ಬಾಯಿಬಿಟ್ಟರೆ, ಬಾನೆಟ್ಟೆತ್ತಿದ ಹಳೆ ಜೀಪಿನ,
ರೇಡಿಯೆಟರಿನ, ಬಿಸಿನೀರಿನಿಂದ ಚಿಮ್ಮುವ ಕಾರಂಜಿ!
ಜ್ವಾಲಾಮುಖಿನೇ ಈ ಧರೆಗಿಳಿದಂತೆ, ನಿತ್ಯ ಭಸಿವ ಬಿಸಿಲು!
ಮನೆ ನಲ್ಲಿಗಳು; ಭುಸು ಭುಸುಗುಡುವ, ಬಿಸಿನೀರಿನ ಬುಗ್ಗೆಗಳು!

-೩-
ಬಳ್ಳಾರಿ ಬಿಸಿಲೆಂದರೆ…
ಕಾದ ಕಮ್ಮಾರನ ಕುಲುಮೆ!  ಇಂದ್ರನ ವಜ್ರಾಯುಧಾ!
ಸಪ್ತ ಸಾಗರಗಳ, ಲಾವರಸದ ಚಿಲುಮೆ!
ಸುಡುಬಿಸಿಲ ಸಿಡಿಲು!
ಶಿವನ ತ್ರಿನೇತ್ರದುರಿಯ ಬೆಂಗಾಡು, ಗುಡ್ಡಗಾಡು, ಗಣೆಗೂಡು…
ಪ್ರಾಣಿ, ಪಕ್ಷಿ, ನರಪಿಳ್ಳೆಗಳಿಗೇ ಗುಕ್ಕು ನೀರಿಲ್ಲದಾ ಸುಡುಗಾಡು!
ಸತ್ತಂತಿರುವ ಹಸಿರು, ಮರ, ಗಿಡಿ, ಬಳ್ಳಿಗಳೆಲ್ಲ ತ್ಯಾಪೆ ಮೋರೆ!
ಕಡುವೈರಿಗೂ ಬೇಡ ಬಿಡು! ಬಳ್ಳಾರಿ ಬಿಸಿಲು… ಉಮ್ರು… ಬೆವ್ರು…
ನಡುರಾತ್ರಿಲಿ ಉರಿವ ಸೂರ್‍ಯ! ಕಾದ ಕೋಟೆಯ ನಿಟ್ಟೂಸಿರು!
ಮೈ, ಕೈ, ಕಾಲು: ಚುರು… ಚುರು…
ಮೂಗು, ಬಾಯಿ, ಕಣ್ಣು: ಉರಿ… ಉರಿ…
ಹರಲಿರುಳು ಬೇಸಿಗೆ ಬಿಸಿಲು!
ಹಾಗಲ್ಲದಿದ್ದರೆ… ಬಳ್ಳಾರಿ ಬಿಸಲೇ ಅಲ್ಲ ಬಿಡಿ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...