Home / ಕಥೆ / ಜನಪದ / ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...