Home / ಕವನ / ಕವಿತೆ / ಒಂದು ದಿನ…

ಒಂದು ದಿನ…

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ, ಏನಾಗಬಹುದು?
ಏನೆಲ್ಲ ಆಗಬಹುದು…
ಸಂಸ್ಥೆಗೆ ನಶ್ಟವಾಗಬಹುದು
ಪ್ರಯಾಣಿಕರಿಗೆ ಕಶ್ಟವಾಗಬಹುದು
ರಿಕ್ಷಾ, ಟೆಂಪೋ, ಮೆಟಡೋರ್‍, ಲಾರಿ, ಟ್ರಕ್ಕು, ಖಾಸಗಿ ಬಸ್ಸು…
ಎನೆಲ್ಲ ತುಂಬಿ, ಆ ದಿನದ, ಮೀಟರ್‍ ದರಗಳು,
ಮುಗಿಲು ಮುಟ್ಟಬಹುದು!
*

ಮತ್ತೇನಾಗಬಹುದು?
ಶಾಲೆ, ಕಾಲೇಜಿಗೆ, ಕುರುಡ, ಕುಂಟರಿಗೆ,
ಪತ್ರಿಕಾ ಪ್ರತಿನಿಧಿಗಳಿಗೆ, ಉಸಿರುಗಟ್ಟಿ
ವ್ಯಾಪಾರ, ವೈವಾಟು ತಲೆಕೆಳಗಾಗಿ,
ಸಾಮಾನ್ಯರ ಪಾಡು, ನರಕಯಾಥನೆಯಾಗಿ,
ಹಳ್ಳಿ ಹಳ್ಳಿಗಳೂ ದೂರ ಸರಿದು,
ಶಾಲೆ, ಕಾಲೇಜು, ಸಿನಿಮಾ, ನಾಟಕ, ನಾಡ ಕಛೇರಿಗಳೆಲ್ಲ…
ಒಣ ಒಣ! ಭಣ ಭಣಗುಟ್ಟಿ,
ಅಘೋಶಿತ ಬಂದ್ ನಿರ್ಮಾಣವಾಗಬಹುದು!
ಸೂರ್‍ಯ, ಚಂದ್ರ, ತಾರೆ, ಗ್ರಹಗಳೆಲ್ಲ ತ್ಯಾಪೆ ಮೊರೆಲಿ, ಮರೆಯಾಗಬಹುದು!
ಮುಪ್ಪಿನವರೂ ಒಪ್ಪದಲಿ, ನಡೆದೂ ಮನೆ ಸೇರಬಹುದು
ಅಂದು-ಟೀವಿ, ರೇಡಿಯೋ, ಪತ್ರಿಕೆಗಳಲ್ಲಿ ವಿಶೇಷ ಸುದ್ದಿಯೆನಿಸಿ,
ಜನ ಸೋಮಾರಿ ಕಟ್ಟೆ ಏರಿ,
ಜೊಂಪು ನಿದ್ದೆ ಸೇರಿ,
ಮೋಟು ಬೀಡಿಗೆ, ಹುಡುಕಾಡಬಹುದು!
*

ಮುಷ್ಕರದ ಬಿಸಿಗೆ; ಒಬ್ಬರ ಮೇಲೆ ಒಬ್ಬರು, ಬಿದ್ದು ಎದ್ದು,
ಇದ್ದುಬದ್ದುದ್ದನ್ನೆಲ್ಲ ಕಳಕೊಂಡು…
ಮುರುಕಲ ಗಾಡಿ, ಮನೆ ಮಾರು ಸೇರಲಿಬಹುದು.
ಗುಜರಿ ಸೈಕಲ್, ಬೈಕ್, ಕಾರು, ಜೀಪುಗಳೂ…
ಮರುಹುಟ್ಟು ಪಡೆದು, ಅಲ್ಲಲ್ಲಿ ಕೆಟ್ಟು ನಿಲ್ಲಬಹುದು!
ಖಾಸಗೆರಿಗೆ ಚೆಲ್ಲಾಟ,
ಪ್ರಯಾಣಿಕರಿಗೆ ಪ್ರಾಣ ಸಂಕಟವಾಗಿ,
ಗದ್ದುಗೆ ಹಿಡಿದವರಿಗೆ, ಕಂಟಕವಾಗಬಹುದು!
*

ಒಂದೇ ದಿನದಲಿ; ಖಾಸಗಿಕರಣ ಹಿಗ್ಗಿ ಹಿರೇಕಾಯಿಯಾಗಿ,
ಸಂಸ್ಥೆ ಮೇಲಿನ, ವಿಶ್ವಾಸ ಕುಗ್ಗಿ, ನರಸತ್ತ ನಾಮರ್ಧನನಂತೆ,
ಅದಲು ಬದಲು ಕಂಚೀ ಕದಲು, ಮಿಂಚಿನ ಮುಷ್ಕರದ ಜೊಂಪಿಗೇ
ರಸ್ತೆಗಳು ನಿಟ್ಟೂಸಿರ ಸೂಸಿ,
ನಿದ್ರೆಲ್ಲದೆ, ಮಗ್ಗುಲಿಗೆ ಮುಖವಿಟ್ಟು, ಮಲಗಬಹುದು!
*

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ…
ಏನೆಲ್ಲ ಆಗಬಹುದು?!
ಕಾಯಿಪಲ್ಲೆ, ಮಾರ್ಕೆಟ್ ರೇಟು, ರೇಸಿನಂತೆ
ರೈಜಾಗಿ, ಬಡಬಗ್ಗರ ಕನಸ್ಸುಗಳು ಬಿಕರಿಯಾಗಿ,
ಹುಬ್ಬಳ್ಳಿಯ… ಕಮರಿಪೇಟೆಯಾಗಬಹುದು!
*

ಸಂಸ್ಥೆ ಬಸ್ಸುಗಳು: ಒಂದು ದಿನ ನಿಂತರೆ,
ಇಶ್ಟೆಲ್ಲ ಆಗಬಹುದು!!
ಇದಕ್ಕಿಂತ ಮಿಗಿಲೂ ಆಗಬಹುದು
ಮುಗಿಲು ಕಳಚಿ ಬೀಳಲೂಬಹುದು
ಭೂಮಿ-ಆಕಾಶ ಒಂದಾಗಬಹುದು
ಜಲ ಬತ್ತಿ, ಬಡ ಕಾರ್ಮಿಕರು, ಬೀದಿ ಪಾಲಾಗಬಹುದು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...