Home / ಕವನ / ಕವಿತೆ / ಊರು-ಕೇರಿ ಕುರಿತು

ಊರು-ಕೇರಿ ಕುರಿತು

ನನ್ನ ಕೇರಿ ನಾಕವೇನು? ವಿಶ್ವವಿನೀಕೇತನ ವಿಹಾರಿ!
ಕೇರಿಯೆಂದರೆ: ಹೊಸಲು ಕಾದು, ಕ್ರಿಯಾಶೀಲ ಸ್ಥಳ!
ಜಗದ ಬಾಗಿಲು… ಪುರಾತನ ತೊಟ್ಟಿಲು.
ಕೈಲಾಸಕೆ ಮೆಟ್ಟಿಲು.
ಇಲ್ಲಿಹರು… ಸಮಗಾರ ಹರಳಯ್ಯ, ಕಲ್ಯಾಣದ ಗುಣಮಣೆ,
ಜಾಂಬುವಂತ, ಮಾದರಚೆನ್ನಯ್ಯ, ಬಡ್ವಿಲಿಂಗಮ್ಮ, ಅರುಂಧತಿ,
ಶಬರಿ, ಬಾಲನಾಗಮ್ಮ…
ಅಂಬೇಡ್ಕರ್‍, ಕರಿಯನಂಥಾ ಮನುಜರು!
ಕೇರಿಗಿಂಥಾ ಜನ್ರು ದೇವರಂಥವ್ರು!
ಜಗಕೆ ಮಾನ ತಂದವ್ರು…
ಎಲ್ಲಿ ಸಿಗುವರೋ… ಕೋಟಿಗೊಬ್ರು…
ಹಲಸು, ಮಾವು, ಹುಲುಸು ಜನರು!
ಬುದ್ಧ, ಬಸವ, ಗುರುನಾನಕ, ಪೈಗಂಬರ್‍, ಯೇಸುಕ್ರಿಸ್ತ,
ಗಾಂಧೀ, ನೆಹರು, ರಾಮ, ಕ್ರಿಷ್ಣ ನಡೆದ ಕೇರಿಯು!
ಊರುಕೇರಿ ಎರಡು ಕಣ್ಣಕಣಗಳ ಬಟ್ಟಬಯಲೋ…
ಕಣ್ಣ ರೆಪ್ಪೆಯಂದದಿ ಪ್ರತಿಕ್ಷಣದಿ ಬಡಿವಾ ಜೋಡಿಯು!
ಹಗಲುರಾತ್ರಿ ಮಿಡಿವಾ ಹೃದಯಸ್ತಂಭ!
ಕೇರಿಯೆಂಬುದೇ ಇಂದ್ರನ ವಡ್ಡೊಲಗ!
ನಿನ್ನಂಥಾ ಕಡು ಪಾಪಿ, ನತದೃಶ್ಟ,
ಈ ಜಗದೀ, ಬೇರೆ ಇಹನೇ??
ದೇಹದಾ ತುಂಬಾ, ನವರಂಧ್ರಗಳೇ…!
ಹೊಸಲಸು ತುಂಬಿದಾ ಮಾಂಸದ ಮುದ್ದೆಯೇ?!
ನಿನಗೆ ನಿದ್ದೆ ಹೇಗೆ ಬರುವುದಯ್ಯ??
ಥೂ! ಮನುಶ್ಯನೆಂಬಾ ಕಳಂಕದಾಪಟ್ಟ ಹೊತ್ತು,
ಹೊಲಗೇರಿಯೆಂಬಾ, ಹಣೆಪಟ್ಟಿಗೇ ಹೆದರಿ,
ಕೇರಿ ಹೊರಗೆ, ನಿಂತಾಪಾಪಿ ನೀ…
ಶತ ಶತಮಾನದ ಶಾಪ! ಏನೀದರ ಆಳಾ… ಅಗಲವಯ್ಯ??
ಈ ರಾಮನ ‘ಕೊಳೆ’ ಕಳೆವ,
ಪರಿಪರಿಯನೆಂತೂ ತಿಳಿಸು ಗೆಳೆಯಾ??
ಶತಶತಮಾನಗಳೇ… ಕಳೆದವಲ್ಲ,
ಈ ಕಂದಕ ಮುಚ್ಚಲಿಲ್ಲ!!
ಇಲ್ಲಿ ಕನಸ್ಸುಗಳು, ಕನವರಿಕೆಯ ಕೊಳ್ಳಿದೆವ್ವಗಳೇ…
ಹಂದಿ, ನಾಯಿ, ಮೀನು, ಕಾಗೆ, ಗೂಬೆಗೂ ಕಡೆಯಾದನೇ ಮನುಜನೀ…
ಒಮ್ಮತ… ಒಗ್ಗಟ್ಟಿಗೆ, ದಿವ್ಯ ಔಷದಿಯಿರೆ, ತಿಳಿಸಯ್ಯ ಹೆಳೆಯನೇ…
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...