Home / ಕವನ / ಕವಿತೆ / ಬುದ್ಧನಾಗುವ ಬಯಕೆ

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ
ಕೇರಿಂದೆದ್ದು ಬರಲಾಗಲೇ ಇಲ್ಲ!
ಬಿದ್ದಲ್ಲೆ ಬಿದ್ದು ಬಿದ್ದು…
ಹಂದಿಯಂಗೆ ಹೊಲೆಗೇರಿಲಿ… ಎದ್ದು ಎದ್ದು…
ಒದ್ದಾಡುತ್ತಿರುವೆ!
ಕೇರಿಂದೆ ಹೊರಗೇ ಬರಲಾಗಲೇ ಇಲ್ಲ
ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ!
*

ಜಗವೆಲ್ಲ ಮಲಗಿರಲು
ಶತಶತಮಾನಗಳಿಂದಾ ಎದ್ದಿರುವೆವು ನಾವು!
ನಿದ್ದಿಲ್ಲದೆ, ಮನೆ, ಮಠ, ಸೂರಿಲ್ಲದೇ…
ಬುದ್ಧನಾಗುವ ಸಂಕಲ್ಪ ನಮಗುಂಟೇ?!
ಹೊಟ್ಟೆ, ಬಟ್ಟೆಗೆ,
ಆಸೆ ಪಟ್ಟು
ಕಟ್ಟು ನಿಟ್ಟಿಗೆ,
ಒಳಪಟ್ಟು
ಗತಿಗೆಟ್ಟವರೆಂಬಾಪಟ್ಟ,
ಗಿರಿಜನರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಸಾವೆಂಬಾ ಅವಮಾನ!
ಕಂಗೆಟ್ಟ ಹಸಿವು,
ರೋಗರುಜಿನೆಂಬಾ ಹಾಸಿಗೆ
ಬಡತನವೆಂಬಾ ಸಂಕೋಲೆ
ಜಾತಿ, ಮತ, ಕುಲ, ಭೇದಗಳೆಂಬಾ ಕೆಂಭೂತ,
ಅನಕ್ಷರೆಂಬಾಭೂತ
ಸಂಸಾರವೆಂಬಾ ಪಿಶಾಚಿಗೆ,
ಬೇಸತ್ತರೂ ವೈರಾಗ್ಯವೆಂಬುದಿಲ್ಲ!
ಇನ್ನು ಬುದ್ಧನಾಗುವ ಬಯಕೆ…
ನಮಗೆಲ್ಲಿದೆ ಬುದ್ಧಾ?!
ದರಿದ್ರರೆಂಬಾ-ಪಟ್ಟ,
ಹರಿಜನರೆಂಬಾ-ಚಟ್ಟ,
ನಮಗಲ್ಲದೆ ಇನ್ಯಾರಿಗಿದೆ ಬುದ್ಧಾ?!
*

ನಿದ್ದಿಲ್ಲದೆ,
ಬುದ್ಧಿಲ್ಲದೆ,
ದುಡಿದ ದೇಹಕ್ಕಿಲ್ಲ ತುಂಡು ಬಟ್ಟೆ?!
ಬರುವಾಗ ಬೆತ್ತಲೆ
ಹೋಗುವಾಗ ಬೆತ್ತಲೆ
ದರಿದ್ರ ಜನರೆಂದು ಜರಿವಾಗ
ಬಾಹುಬಲಿಯೆಂಬಾಪಟ್ಟ,
ಹೊಲಗೇರಿಯವರೆಂಬಾಚಟ್ಟ
ನಮಗಲ್ಲದೆ, ಇನ್ಯಾರಿಗಿದೆ ಬುದ್ಧಾ…?!
*

ನಿತ್ಯ ಬೋಧಿ ವೃಕ್ಷದಾ ಕೆಳಗೆ!
ಮರ, ಗಿಡಗಳಾ ಆಸರೆಲಿ,
ನಿದ್ದಿಲ್ಲದೆ, ರಾತ್ರೆಲ್ಲ ಎದ್ದು,
ಬೋಧಿವೃಕ್ಷಕೆ, ತೊಟ್ಟಿಲ ಕಟ್ಟಿ, ತೂಗಿದರೂ…
ಬುದ್ಧನಾಗುವಾ ಯೋಗ, ನಮೆಗೆಲ್ಲಿದೆ ಬುದ್ಧಾ…?!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...