Home / ಕವನ / ಕವಿತೆ / ಕಾಲಪುರುಷನ ಕುರಿತು

ಕಾಲಪುರುಷನ ಕುರಿತು

ಬಾರಯ್ಯ ಬಾ! ನೀನಿರದೆ, ನಾವಿದ್ದು ಫಲವೇನು?
ಬಾರಯ್ಯ ಬಾ!! ಶಕಪುರುಷ…
ಅದೆಶ್ಟು ಕಣ್ಣಬಣ್ಣ?! ಪರಿವರ್ತನೆ, ನಿರೀಕ್ಷೆ, ಕುತೂಹಲಯ್ಯಾ?!
ಈ ನಿನ್ನ ಬರುವಿಕೆಯಲ್ಲಿ?!
ರಾತ್ರಿಯೆಲ್ಲ ನಿದ್ದಿಲ್ಲದೆ, ನಿನ್ನ ಆಗಮನಕೆ ಸ್ವಾಗತವಯ್ಯ!
*

ಬರುವೆ! ಬಂದೇ ಬರುವೆ!!  ಸಂಕ್ರಮಣ ರಾಮ, ನೀ ಚೆನ್ನಿಗರಾಮನಲ್ಲವೇ?
ವರ್ಷ ವರ್ಷ… ಅದೆಂಥಾ ಹರ್ಷವಯ್ಯ ನಿನಗೆ??
ನೀ ಕತ್ತೆ, ಕುದುರೆ, ಹಂದಿ, ನಾಯಿ, ಕಾಗೆ, ಹುಲಿ, ಸಿಂಹನೇರಿ
ಬರುವೆಯಲ್ಲಯ್ಯಾ?!
ನೀ ಸಾಮನ್ಯನೇನಯ್ಯ?! ಏನನೇರಿ ಬಂದರೂ, ಕುಸ್ತಿ ಒಗೆವೆನಲ್ಲಯ್ಯ?!
*

ನೀ ಬರುವ ಹಾದಿಲಿ: ಕೊಲೆಂಟು, ಸುಲಿಗೆವುಂಟು, ರಕ್ತರಂಜಿತ,
ವರ್ಣರಂಜಿತ, ವಿನಾ ಕಾರಣ ಅವಮಾನ, ಅಪಮಾನವುಂಟು!
ಯುದ್ಧ ಘೋಷಿತ, ಸುನಾಮಿ, ಲೈಲಾ, ಗುಡುಗು, ಸಿಡಿಲು,
ಅಬ್ಬಬ್ಬಾ… ವಿಮಾನ, ಅಗ್ನಿದುರಂತ, ತೈಲ ಸೋರಿಕೆ…
ಎನೆಲ್ಲ ಉಬ್ಬರವಿಳಿತ! ಬರೀ ವಿಭ್ರಮ ಭ್ರಮರಿ ವಿದ್ವುಂಸ ಕುಕೃತ್ಯಗಳೇನು?!
*

ದೇಶದಾ ಉದ್ದಗಲಕೂ ಏನೆಲ್ಲ ಲೇಲೆ, ಹಳವಂಡಗಳಯ್ಯ??
ಎಳೆ ಗರ್ಭಗಳ ಅರಾತುರಿ ಸೀಳಿದ ಖೂಳ ರಕ್ಕಸ ನೀಽ…
ಕಟ್ಟೆಯೊಡೆದು, ಸುದರ್ಶನ ಚಕ್ರವಿಡಿದು ಝೇಂಕರಿಸುತ್ತಾ
ರಾಹು ಮಂಡಲಗಳ ದಾಟಿ, ವೃತ್ತಾಕಾರದಲಿ ನೀ ಬಾರಯ್ಯ! ಬಾ…
*

ಎನು ನಿನ್ನ ಲೀಲೆಯೋ? ಮಾಯೆಯೋ ಜನನ… ಮರಣವೋ?
ನಾಳೆ ನಾಡಿದ್ದು ನಿನ್ನೆ ಮೊನ್ನೆಗಳ ಎಡತಾಕಿಸುತ್ತಾ
ಸ್ಥಾವರ ಜಂಗಮ, ಸಂಗಮಗಳ ಜಪಿ ಜಪಿಸುತ್ತಾ
ಕಂಪ್ಯೂಟರ್‍, ಟೀವಿ, ಇಂಟರ್‌ನೆಟ್, ಐಟಿ, ಬಿಟಿಗಳಲ್ಲಿ ನಿನ್ನ ಜಾಲವೋ…
*

ಸೆಲ್‌ಪೋನಿಂದಲೇ ಗದೆ ಬಿಟ್ಟು, ಬಾಣತೊಟ್ಟು, ಮಕ್ಕಳ್ಹೆರುವ
ಸಹಸ್ತ್ರ ಪುರುಷ ಬಾರಯ್ಯ! ಬಾ…! ನವ ಶತಮಾನದ ತೇಜಾಽ…
ಯೇನೆಲ್ಲ ಅವತಾರ, ಲೇಲೆ, ವಿನೋದ, ಭೀಕರವಯ್ಯ?!
ಸುಮ್ಮನಿರೆ ಉಂಡಬಾನ, ಕುಡಿದ ನೀರು ಪಥ್ಯವಾಗದೇನಯ್ಯ?!
*

ಅಯ್ಯ ದುರುಳ ದುರ್‍ಯೋಧನ, ದುಶ್ಯಾಸನ, ಶಕುನಿ, ಕಂಸ, ಕೀಚಕ,
ರಾವಣ, ಕೊಂಡಿಮಂಚಣ್ಣ, ಮಲ್ಲಪ್ಪಶೆಟ್ಟಿ, ಮೀರ್‌ಸಾಧಿಕ್…
ಕುಂಭಕರ್ಣ, ಸೂರ್ಪನಖಿ, ಮಂಥೆರೆ, ಮಂಡೋದರಿ, ಅಹಲ್ಯೆರೆಲ್ಲ
ಅರಮನೆ, ಸೆರೆಮನೆಯೊಳಗಿಲ್ಲ!
ಮನೆ, ಮನಗಳಲ್ಲಿ, ರಕ್ತಾ ಬೀಜಾಸುರರಾಗಿ, ಮೃತ್ಯುಂಜಯರಾಗಿ
ವಿಜೃಂಭಿಸಿಹರಲ್ಲ?!
ನಿನ್ನ ಆಗಮನ, ನಿರ್ಗಮನ ಮಾತ್ರ ಎದ್ದು ಕಾಣುವುದು!
*

ಅಯ್ಯೋ ಕಗ್ಗತ್ತಲೆ ತುಂಬಿ ತುಳುಕಿ, ಹಗಲೇ ಕೊಲೆ, ಸುಲಿಗೆ, ದರೋಡೆ,
ಮಾನಭಂಗವೇ?? ಶಾಸಕರ ಕತ್ತೆ, ಕುದುರೆ ವ್ಯಾಪಾರವೇ…
ಕಾಲಪುರುಷನ ಹೆಸರಲಿ, ಸಾಲೆ, ಕುತ್ತೆ, ಗದ್ದುಗೆ ಹಿಡಿದು, ಗುದ್ದಾಟ
ನಡೆಸಿಹರಲ್ಲ?! ವಿಶ್ವಾಸ ಮತಕೆ ಷಡ್ಯಂತ್ರ ಬಳಸಿಹರಲ್ಲ…
ಉದ್ಧಾರ, ಪ್ರಗತಿ, ಸುಧಾರಣೆ, ಸಹಾಯ ಹಸ್ತ, ಬರೀ ಕನವರಿಕೆಗಳೇ ಆದವಲ್ಲಾ…
ಬುದ್ಧ, ಬಸವ, ಅಂಬೇಡ್ಕರ್‍, ಮದರ್‍ ತೆರೀಸಾರಂಥವ್ರಿನ್ನು ಬರಲಿಲ್ಲ ಯಾಕೆ??
*

ಈ ನಿನ್ನ ಆಗಮನಕೆ, ತಳಿರು ತೋರಣಕಟ್ಟಿ,
ರಾತ್ರಿಯೆಲ್ಲ ಕುಡಿದು, ಕುಣಿದು, ಕುಪ್ಪಳಿಸಿ,
ಸಿಡಿಮದ್ದು ಸಿಡಿಸುವುದೂ ವ್ಯರ್ಥ…
ಇದು ಹೀನ ಸಂಸ್ಕೃತಿಯಲ್ಲದೆ ಇನ್ನೇನು?
ನೀ ಬಂದು ಕಿಸುದು ಗುಡ್ಡೆ ಹಾಕಿದ್ದಾರೂ ಇನ್ನೇನು?!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...