Home / ಕವನ / ಕವಿತೆ / ಬದುಕೆಂದರೆ…

ಬದುಕೆಂದರೆ…

ಬದುಕೆಂದರೆ… ಹೀಗೇ…
ಬಳ್ಳಾರಿ ಬಿಸಿಲಿನಾ ಹಾಗೇ…
‘ಉಸ್ಸೆಪ್ಪಾ’,,, ಎಂದರೂ,
ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು!
ಝಣ ಝಣ… ಹಲಗೆ ಬಡಿತದ,
ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು!
ಮೈಮನ ಹಾವಿನಂಗೆ,
ಮುಲು ಮುಲು ಹರಿದಾಡುವ, ಬೇವ ಹನಿಯ ಕಂಪು!
ನೆಲಕೆ ಕಾಲಿಟ್ಟರೆ, ಕಮ್ಮಾರನ ತಿದಿಪಂಪು!
*

ಬದುಕೆಂದರೆ… ಹೀಗೇ
ಮುಂಗಾರಿನ ಮಳೆಯ ಹಾಗೇ…
ತೊಯ್ದು ತೊಪ್ಪೆಯೆಂದರೂ…
ಗಢ ಗಢ ಛಳಿಯೆಂದರೂ… ಬಿಡದು!
ಬಿರುಗಾಳಿ, ಗುಡುಗು, ಸಿಡಿಲು, ಮಿಂಚಿನಂತೇ…
ಜುಳು ಜುಳು ಹರಿವ ಸಿಟ್ಟೇರ ಹಳ್ಳದಂತೆ!
ಕರ್‍ಮಾಗಳ ಮುಳುಗಿಸಿ, ಧರ್‍ಮಾಗಳ ತೇಲಿಸೋ…
ನಮ್ಮೂರ ‘ಹುಚ್ಚಾಯಿ’, ತೇರನೆಳೆವ ಹರಕೆಯಂತೆ!!
ಬತ್ತಿ ಹೋದ ಕೆರೆ, ಬಾವಿ, ಹಗರಿಯಂತೆ.
*

ಬದುಕೆಂದರೆ… ಹೀಗೇ
ಚಿಕ್ಕ ಮಕ್ಕಳ ಮದುವೆಯಾಟದಂತೇ…
ನಮ್ಮೂರ, ಸಂತೆ ಮೈದಾನದ ವಹಿವಾಟಿನಂತೆ,
ಬೋರೇಗೌಡ, ಬೆಂಗಳೂರಿಗೆ ಬಂದ, ‘ಪಡಿಪಾಟ್ಲಿ’ನಂತೆ!
ಬಾಳೆಲೆ ಹಾಸುಂಡು, ಬೀಸಿ ಒಗೆದಂತೆ,
ಊರ ದನ ಕಾದು, ಊರಗೌಡ ಎನಿಸಿಕೊಂಡಂತೆ,
ನೀರ ಮೇಲಣ ಗುಳ್ಳೆಯಂತೆ!
*

ಬದುಕೆಂದರೆ… ಹೀಗೇ
ಬಡವರೂ ಬಡವರಾಗಿಯೇ ಇರುವುದು!
ಶ್ರೀಮಂತರೂ… ಇನ್ನೂ ‘ಮಜ್ಹಾ’ ಅನುಭವಿಸುವುದು!
ಕೋತಿ ತಿಂದರೂ… ‘ಮೇಕೆ’ ಪೆಟ್ಟು ತಿನ್ನುವಂತೆ,
ಚಾಡಿ ಮಾತಿಗೆ, ಕೋಡು ಮೂಡಿದಂತೆ,
ಸತ್ಯವಂತರೂ ಜೈಲು ಅನುಭವಿಸುವಂತೆ.
*

ಬದುಕೆಂದರೆ… ವಿಷ ವರ್ತುಲ! ಭಯಂಕರ! ‘ಕಟುಗಲರಟ್ಟಿ…’
ಪಾಂಡವರ… ಕೌರವರ… ಜೂಜಾಟದಂತೆ,
ಕಾಡುಕೋಣಗಳ ಗುದ್ದಾಟದಂತೆ!
ಶಕುನಿ, ದುರ್‍ಯೋಧನ, ಕೃಷ್ಣನ ಕುಟಿಲ ತಂತ್ರದಂತೆ,
ನಿತ್ಯ ಸ್ವಯಂವರವಿಲ್ಲಿ, ಟಗರಿನ ಕಾಳಗಿವಿಲ್ಲಿ…
ಅರಗಿನ ಮನೆಯ ವಾಸವಿಲ್ಲಿ, ಬೆನ್ನಿಗೆ ಚೂರಿ ಈರಿತವಿಲ್ಲಿ…
ವಸ್ತ್ರಾಪಹರಣ… ಕೀಚಕನ ಅಟ್ಟಹಾಸವಿಲ್ಲಿ!
ಆಗಿನ ನಿಯತ್ತು, ಈಗಿನವರತ್ತಿರವೆಲ್ಲಿದೆ?!
ಕತ್ತಲಾದರೆ… ಶಸ್ತ್ರವಿಡಿಯುತ್ತಿರಲಿಲ್ಲ! ರಾಜನೀತಿ…
ಈಗ ಕತ್ತಲಾದ ಮೇಲೆ, ಕತ್ತಿ ಇರಿವ ಜನರಿಲ್ಲಿ!
ರಕ್ತ ನೀತಿ…
*

ಬದುಕೆಂದರೆ… ಹೀಗೇ
ಹೀಗೆಂದು ಹೇಳಲು, ಈ ಕಲಿಯುಗದಲಿ,
ಹೇಗೆ ಸಾಧ್ಯವಿಲ್ಲವೋ ಹಾಗೇ…
ನಿತ್ಯ ಚಕ್ರವ್ಯೂಹ, ಕುರುಕ್ಷೇತ್ರವಿಲ್ಲಿ!
ಕೌರವರು, ಪಾಂಡವರೆಂಬಾಗೆರೆಯಿಲ್ಲ!
ಎಲ್ಲರೂ ಮಾಮರಿಲ್ಲಿ… ಮೃತ್ಯುಂಜಯರಿಲ್ಲಿ…
ಮನೆ, ಮನ, ಕಛೇರಿ, ಗುಡಿ, ಚರ್ಚು, ಮಸೀದಿ, ಯೆಲ್ಲ ರಣರಂಗವಿಲ್ಲಿ!
ಬಡವರ ಒಣ ಒಣ ನೆತ್ತರಿಗೆ, ಎಲ್ಲರೂ ಇಲ್ಲಿ ತಿಗಣೆಗಳೇ…!
*

ಬದುಕೆಂದರೆ… ಹೀಗೇ
ಕಾದ ರೊಟ್ಟಿ ಹೆಂಚು! ನಿಗಿ ನಿಗಿ ಉರಿವ ಕಿಚ್ಚು…
ರಾವಣರ ಸಂಚು, ಕೈಕೆ, ಮಂಥರೆ ಸಂಚು…
ಸೀತೆವನವಾಸಕೆ ಅಟ್ಟಿದಾ ಹಾಗೇ…
ಕಲಿಯುಗದಲ್ಲಿ… ರಾಮಾಯಣ, ಮಹಾಭಾರತ ಒಟ್ಟೊಟ್ಟಿಗೆ!
ತಣ್ಣೀರು ಆರಿಸಿ, ಕುಡಿವ ಕಾಲ!
ಬದುಕೆಂದರೆ… ಬಲು ಭಾರ! ಖಾರ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...