Home / ಕವನ / ಕವಿತೆ / ಈಗೋ ಉತ್ತರ…

ಈಗೋ ಉತ್ತರ…

ಅದೆಶ್ಟು ಬಿರುಸು
ಅಶ್ಟೆ ಹುಲುಸು
ಘಮ ಘಮ ಹಲಸಿನಂತೆ!
ಪುಟ್ಟ ಚಂದ್ರ ಚಕೋರ,
ಧರೆಗಿಳಿದು ಬೆರಗು ಮೂಡಿಸಿದನಲ್ಲ?
ನವ ಮಾಸ ಕಳೆದ,
ನವ ನೀತ ಚೋರ!
ಪುಟ್ಟ ಪೋರಾ!
ತಂದೆಯ ರೂಪ,
ತಾಯಿಯ ಕೋಪ,
ಜಗದಾ ಪರಿತಾಪ ಎಲ್ಲವೂ…
*

ಹಾಲುಗೆನ್ನೆಯ ಹಸುಗೂಸು
ಮುದ್ದು ಮುದ್ದು ಮುಖಾರವಿಂದ
ತೊಂಡೆಣ್ಣೆನ ತುಟಿ, ದಾಳಿಂಬೆ ಹಲ್ಲು
ಗೋಲಿಗಣ್ಣು, ಸೇಬುಗಲ್ಲ, ಹಾಲು ಹಲ್ಲು
ಬೇವಿನ ಎಸಳ ನೋಟ!
ಆಟ, ಪಾಠ, ನೋಟವೆಲ್ಲ ಲವಕುಶರ ಹಠ!
ತೊದಲು ಮಾತು, ಅಂಬೆಗಾಲು
ನವಿಲು ಕುಣಿತ ಸಾಧ್ಯವು!
*

ಹಸಿ ಹಸಿ ಹಾಲ ಶಿಶು, ಪ್ರತಿಮನೆಯ ಶಶಿ!
ಮುಸಿ ಮುಸಿ ಮುಗ್ಧ ಹಸು!
ಹೋರಿಯಂಗೆ ಬೆಳೆದ ಪರಿಯೇ ಬೆರಗು
‘ಮೂರು ವರ್ಷದ ಬುದ್ಧಿ, ನೂರು ವರ್ಷ’
ಸದಾ ಜಿಂಕೆ ಮರಿಯಂಗೇ… ಜಿಗಿತ!
ವರ್ಷ ವರ್ಷ ಸದಾ, ಹರಿದು ಬರುವ ತೇರಿನಂಗೆ…
ಹರ್ಷ ಹರ್ಷವೆನಲು ಸ್ವಲ್ಪವೇ?!
*

ಎದ್ದು ಬಿದ್ದು ಬಾನಂಗಳಕೆ ಪುಟಿದ!
ನವ ವಸಂತಗಳ ದಾಟಿ, ಜಗದ ತೊಟ್ಟಿಲಿಳಿದ
ಕುಡಿ ಮೀಸೆ ಕುವರ, ಚೆಲುವ ಚೆನ್ನಿಗ!
ಬುದ್ಧ, ಬಸವ, ಪಂಪ, ರನ್ನ, ಹಂಸರಂಗೆ…
ಏನೆಲ್ಲ ಕನಸನೇರಿ
ಭಾರತಾಂಬೆಗೆ ಕೀರ್ತಿ ಶಿಖರ ತರುವ!
*

ಜಯಹೋ… ಕನ್ನಡ ಕೀರ್ತಿಕುವರ!
ಶೂರ, ವೀರ, ಧೀರ… ಧೀರಾಽಽ ಮಗಧೀರ…
ನವ ನವೋನ್ಮೇಶ, ಶ್ಯಾಮ ಶ್ರೀರಾಮನವತಾರ!
ದೇಶ, ವಿದೇಶ ಸುತ್ತಿ, ಮೆರೆವ ಧೃವತಾರೆ…
ಹಾಲುಜೇನು, ಒಟ್ಟಿಗೆ ಕರೆವ ಧಾರೆ!
ಜಗದ ಬೆಳಕೋ? ಯುಗದ ಬೆಳಕೋ? ಕಾಣೇ…
ಬೆಳೆ ಬೆಳೆದು ಆಲವಾದ, ಕನಸ್ಸಿನ ಕುವರನೇ…
ಭಾರತದ ಕೀರ್ತಿ ಶಿಖರ, ಭಾನೆತ್ತರ ಬೆಳಗೋ…
ಈ ಜಗವೇ ನಿನ್ನೊಳಗೆ… ಈಗೋ ಉತ್ತರ!!
‘ಮುಂದುಂದಿ ಮುಸಲ ಪಂಡುಗಽ…’ ಎಚ್ಚರ!
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...