Home / ಕವನ / ಕವಿತೆ / ಕೆಂಪು ಬಸ್ಸು ನಾ…

ಕೆಂಪು ಬಸ್ಸು ನಾ…

ನನ್ನ ಬಣ್ಣ ಕೆಂಪು; ಅದಕ್ಕೆಂದೆ ಸಂಪು?
ಸರ್ವರಿಗೆಂದೆ ತಂಪು;
ಒನಪು, ವೈಯಾರ, ಥಳಕು ಬಳಕು ಕೈಕುಲುಕು!
ಹಳ್ಳ ದಿನ್ನಿ ಊರು ಕೇರಿ ಹಾರಿ;
ಹಗಲಿರುಳೂ ಸಾಗಿ,
ಚಳಿ ಮಳೆ ಗಾಳಿಗೆ ಮಾಗಿ,
ನಿತ್ಯ ದುಡಿವೆ ನೋಡಿ.
ಆಸೆ ನಿರಾಸೆ ಸುಖ ದುಃಖಗಳ ಹೊದ್ದು,
ಮದುವೆ ಮುಂಜಿ ಮಸಣಕಂಜಿ
ಶುಭ ಲಾಭ ನಷ್ಟ, ಟೀಕೆ ಟಿಪ್ಪಣಿ ಲೆಕ್ಕಿಸೆ
ನಿಜ ಸೇವೆ ಸ್ವರ್ಗ ಸಮಾನ!
ಬಡವ ಬಲ್ಲಿದ, ಭೇದವಿಲ್ಲದ,
ವಿದ್ಯಾವಂತ ಅವಿದ್ಯಾವಂತ
ಸಣ್ಣ ದೊಡ್ಡವ ಎಣಿಸದೆ,
“ಈಶ ಸೇವೆ, ದೇಶ ಸೇವೆ,
ಸಾರಿಗೆ ಸೇವೆ, ನೈಜ ಸೇವೆಂಬ”
ಮಂತ್ರ ಜಪಿಸುತ್ತಾ…
ನಿತ್ಯ ನಿತ್ಯ ಲಕ್ಷ ಜನರ ಹೊತ್ತು,
ಅವರವರ ಕನಸು, ಮನಸ್ಸಿಗೆ ಸ್ಪಂಧಿಸಿ,
ನಿರೀಕ್ಷೆ ಪರೀಕ್ಷೆಗೆ ತವಕಿಸಿ,
ನನ್ನ ದಾರಿ ನಿಮಗೆ ಶ್ರೀ ರಕ್ಷೆ,
ನನ್ನ ನಂಬಿ, ತಬ್ಬಿ ಹಬ್ಬಿ ಕೊಬ್ಬಿ ಬೆಳೆದವರೆ,
ಗದ್ದುಗೆ ಹಿಡಿದವರೆ,
ಪಟ್ಟಣವ ಕಂಡು,
ಡಿಗ್ರಿಗಳ ಪಡೆದು,
ಏನೆಲ್ಲ ಆದವರಿಗೆ,
ಏಣಿಯಾದವ!
ನನ್ನೆಲ್ಲ ಕಥೆ ವ್ಯಥೆಗೆ ೫೦ರ ಪ್ರಾಯ!
ತಾಯಿ ಭಾರತಿಗೆ ಎರಡನೆ ದೊಡ್ಡಕೂಸು.
ಕನ್ನಡದ ಕಂದ-
ರಾಜ್ಯ ರಾಜ್ಯಕ್ಕೆ ಸಂಚರಿಸಿ, ಕೋಟಿ ಕೋಟಿ… ರೊಕ್ಕ ಒಪ್ಪಿಸಿ,
ಕೀರ್ತಿ ಪತಾಕೆ ಹಾರಿಸಿ…!
ನಿಲ್ದಾಣ, ಡಿಪೋ, ಪಾಸು, ರಿಯಾಯಿತಿ, ಆಶ್ರಯ, ಕಾಮಧೇನು,
ಏನೆಲ್ಲ ಹಿಗ್ಗಿ ಹೀರೆಕಾಯಿ ಆದವ
ಎಳೆಯ ಗೆಳೆಯರ, ಶಾಲೆ ಬಾಲಕರ,
ಸ್ವಾತಂತ್ರ್‍ಯಯೋಧರ, ವೃದ್ಧ
ಆಬಾಲರ ಎತ್ತಿ ಮುದ್ದಾಡಿ,
ಬಲು ಎತ್ತರಕೆ ಬೆಳೆಸಿ,
ಕನಸುಗಳ ಅರಳಿಸಿ
ನಿಮ್ಮ ಬೇಕು, ಬಯಕೆಗಳಿಗೆ ನಿತ್ಯ ಉಸಿರಾಗಿ, ಬಸಿರಾಗಿ,
ಏನೆಲ್ಲ ಹೆಸರಾಗಿ, ಹಸಿರಾಗಿ,
ಕಿಸಿ ಕಿಸಿ ನಕ್ಕು ಕಸಿಯಾದವ
ವರ್ಷ ವರ್ಷಕೂ ಹರ್ಷದಿ ನಿರೀಕ್ಷೆಗಳ ತೂಗು ಸೇತುವೆ ಕಟ್ಟಿ,
ಹೊಳೆ ದಾಟಿಸಿದ ಅಂಬಿಗ
ಹೊಳೆ ದಾಟಿದ ನೀವೆಲ್ಲ.
ಆಕಾಶಕ್ಕೆ ಕೈ ಹಬ್ಬಿ ಬೂಟುಗಾಲಲಿ
ನನ್ನ ಒದ್ದರೂ;
ಒಂದೇ ಮುಗುಳ್ನಗೆಗೆ ಅದೇ ರಾಗ-
“ನಿಮ್ಮ ದೇವರೆಂದು” ‘ಪ್ರಭು’ ‘ಅನ್ನದಾತ’ ‘ಮಾಲೀಕರೆಂದು’
ಅಪ್ಪಿ ಮುದ್ದಿಡುವ, ಒಪ್ಪಿ ಓಡಾಡುವ,
ವಿಲ ವಿಲ ಒದ್ದಾಡುವ,
ಮುಲು ಮುಲು ಮುಲುಗುಟ್ಟುವ,
ಕೆಂಪು ಬಸ್ಸು ನಾ!… ನಿಮ್ಮ ಬಸ್ಸು ನಾ.
*****

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...